Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಜೇಯ್ ರಾವ್  ಹೊಸ ಸಿನಿಮಾ ರಾಧೇಯ 



















       ನಟ, ನಿರ್ದೇಶಕ ಅಜೇಯ್ ರಾವ್ ಈಗ ರಾಧೇಯನಾಗಿದ್ದಾರೆ. ಹೌದು, ಅವರು  ಹೊಸ ಚಿತ್ರದ ಹೆಸರು 'ರಾಧೇಯ'.

     ಒಂದಷ್ಟು ವರ್ಷಗಳಿಂದ ಕೆಲ ನಿರ್ದೇಶಕರ ಜತೆ ಕೆಲಸ ಮಾಡಿ ಅನುಭವ ಪಡೆದಿರುವ ವೇದಗುರು ಇದೇ ಮೊದಲಬಾರಿಗೆ 'ರಾಧೇಯ' ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ.  ಜೊತೆಗೆ ಕೀರ್ತಿ ಚಾಹ್ನಾ ಸಿನಿಮಾ ಕಾರ್ಖಾನೆ ಮೂಲಕ ನಿರ್ಮಾಣ ಸಹ ಮಾಡಿದ್ದಾರೆ. ಕೃಷ್ಣ ಅಜಯ್ ರಾವ್ ಹಾಗೂ ಸೋನಾಲ್ ಮಂತೆರೋ ನಾಯಕ-ನಾಯಕಿಯಾಗಿ ಅಭಿನಯಿಸಿರುವ ಈ ಚಿತ್ರದ ಟೀಸರ್  ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

     ನಿರ್ದೇಶಕ ವೇದಗುರು ಮಾತನಾಡುತ್ತಾ  "ಮಹಾಭಾರತದ ಕರ್ಣನ ಇನ್ನೊಂದು ಹೆಸರು 'ರಾಧೇಯ'. ಕರ್ಣನ ಸಾಕು ತಾಯಿ ಹೆಸರು ರಾಧಾ. ಆ ಕರ್ಣನಿಗೂ ಈ ಕಥೆಗೂ ಸಂಬಂಧವಿಲ್ಲ. ಆದರೆ ಅವನ ತ್ಯಾಗದ ಅಂಶ ನಮ್ಮ  ಚಿತ್ರದಲ್ಲಿದೆ. ಮೊದಲು ಅಜಯ್ ರಾವ್ ಅವರಿಗೆ ಈ ಕಥೆ ಹೇಳಿದಾಗ ನಿರ್ದೇಶಕನಷ್ಟೇ ಆಗಿದ್ದೆ. ನಂತರ ನಿರ್ಮಾಪಕನಾದೆ. ಇದು ಲವ್ ಜಾನರ್ ಚಿತ್ರವಾದರೂ ಬೇರೆಯದೇ ರೀತಿ ಕಟ್ಟಿಕೊಡಲು  ಪ್ರಯತ್ನಿಸಿದ್ದೇನೆ. ಈ ಹಂತದಲ್ಲಿ ನಮಗೆ ಶಕ್ತಿಯಾಗಿ ವಿತರಕ ಕಾಂತರಾಜು ಅವರು ಸಾಥ್ ನೀಡಿದ್ದಾರೆ. ನಮ್ಮ ರಾಧೇಯ ತನ್ನ ಪ್ರೀತಿಯನ್ನು ಹೇಗೆ ಉಳಿಸಿಕೊಳ್ಳುತ್ತಾನೆ. ಅದಕ್ಕಾಗಿ ಏನೆಲ್ಲಾ ಪ್ರಾಬ್ಲಮ್ ದಾಟಿ ಬರುತ್ತಾನೆ ಎಂಬುದನ್ನು ಪ್ಯೂರ್ ಲವ್ ಸ್ಟೋರಿಯೊಂದಿಗೆ ಹೇಳಿದ್ದೇನೆ. ನನಗೆ ಸ್ಕ್ರಿಪ್ಟ್ ಮೇಲೆ ಇದ್ದ ನಂಬಿಕೆಯಿಂದಲೇ ನಿರ್ಮಾಪಕನಾದೆ. ಬೆಂಗಳೂರು ಸುತ್ತ ಮತ್ತು ಚಿತ್ರದ ಶೂಟಿಂಗ್ ಮಾಡಿದ್ದೇವೆ" ಎಂದು ಹೇಳಿದರು.

     ನಾಯಕ ಅಜಯ್ ರಾವ್  "ನನ್ನ ಸಿನಿ ಜರ್ನಿಯಲ್ಲಿ ಈ ಚಿತ್ರಕ್ಕೆ ವಿಶೇಷ  ಜಾಗವಿದೆ. ಮೊದಲಿನಿಂದ ಅಜಯ್ ರಾವ್ ಬ್ರ್ಯಾಂಡೇ ಬೇರೆ. ಇದರಲ್ಲಿ ಬೇರೆ ಥರಾ ಇದೆ. ನನಗೆ ವೇದಗುರು ಅವರೇ  ಈ ಚಿತ್ರದ ಹೀರೋ ಅನಿಸ್ತಾರೆ. ಅಷ್ಟು ಸ್ಟ್ರಗಲ್ ಮಾಡಿ ಚಿತ್ರವನ್ನು ಈ ಹಂತಕ್ಕೆ ತಂದಿದ್ದಾರೆ. ನಾನೂ ಒಬ್ಬ ನಿರ್ಮಾಪಕನಾಗಿದ್ದರಿಂದ ಆತನ‌ ಕಷ್ಟ ಏನೆಂದು ಗೊತ್ತಾಗಿದೆ. ಕ್ರಿಮಿನಲ್ ಆಗಿ ಜೈಲಿನಲ್ಲಿರುವವನ ಕ್ಯಾರೆಕ್ಟರ್ ಸುತ್ತ‌ ಈ ಚಿತ್ರದ ಕಥೆ ಸಾಗುತ್ತದೆ. ನನ್ನ ಪಾತ್ರ ಸೈಕ್ ಥರನೇ  ಇದೆ. ಇಂಥ  ಪಾತ್ರ ನನಗೆ ಹೊಸದು. ಅಜಯ್ ಹೀಗೂ ಮಾಡುತ್ತಾನಾ ಎಂಬಂಥ ಪಾತ್ರವಿದು" ಎಂದರು.

     ನಾಯಕಿ ಸೋನಾಲ್ ಮಾಂಟೆರೋ  "ನನಗೆ  ಹೊಸ ಅನುಭವ ಕೊಟ್ಟ ಚಿತ್ರವಿದು. ಅಮೃತ ಎಂಬ ಲೋಕಲ್ ಚಾನೆಲ್ ನ ಕ್ರೈಮ್  ರಿಪೋರ್ಟರ್ ಆಗಿ ನಟಿಸಿದ್ದೇನೆ.  ಕೇಸ್ ಸ್ಟಡಿ ಮಾಡಿ ದೊಡ್ಡ ಚಾನೆಲ್ ಗೆ ಹೋಗುವಾಸೆ  ಅವಳಿಗೆ. ಈ ತಂಡದ ಜೊತೆ ಕೆಲಸ ಮಾಡಿದ್ದು ಖುಷಿ ಇದೆ" ಎಂದು ಹೇಳಿದರು.

     ಫಾರೆಸ್ಟ್ ನಿರ್ಮಾಪಕ ಕಾಂತರಾಜು ಈ ಚಿತ್ರವನ್ನು ರಿಲೀಸ್  ಮಾಡುತ್ತಿದ್ದಾರೆ. ಅವರು ಮಾತನಾಡುತ್ತಾ "ಕಳೆದ ವರ್ಷ ಅಗಸ್ಟ್ ನಲ್ಲಿ ವೇದಗುರು ಈ ಚಿತ್ರ  ನೋಡಲು ಕರೆದರು. ಆಗ ನಾನು ನಮ್ಮ ಫಾರೆಸ್ಟ್ ರಿಲೀಸ್ ಟೆನ್ ಷನ್ ನಲ್ಲಿದ್ದೆ.  ಅದು ಅಷ್ಟಾಗಿ ಸೌಂಡ್ ಮಾಡಲಿಲ್ಲ. ನಂತರ ಸಿನಿಮಾ ವಿತರಣೆ‌ಗೆ ಮುಂದಾದೆ.  ಈ ಸಿನಿಮಾ ನೋಡಿದಾಗ ತುಂಬಾ ಇಷ್ಟವಾಯ್ತು. ಅಷ್ಟು ಚನ್ನಾಗಿ ಸಿನಿಮಾ ಮಾಡಿದ್ದಾರೆ. ನನಗೆ ಡಿಫರೆಂಟ್ ಫೀಲ್ ಕೊಟ್ಟಿತು. ಚಿತ್ರದಲ್ಲಿ ಅಜಯ್ ರಾವ್ ಅವರ ಅಭಿನಯ ಅದ್ಭುತ ಎನಿಸಿತು. ಹಾಗಾಗಿ ಚಿತ್ರಕ್ಕೆ ಸಾಥ್ ನೀಡಿದ್ದೇನೆ" ಎಂದರು.

     ನವೆಂಬರ್ 21ರಂದು ರಿಲೀಸ್ ಆಗಲಿರುವ ಈ ಚಿತ್ರಕ್ಕೆ ವಿಯಾನ್ (ಸ್ಯಾಂಡಿ) ಸಂಗೀತ ಸಂಯೋಜನೆ, ರಮ್ಮಿ  ಛಾಯಾಗ್ರಹಣ, ಸುರೇಶ್ ಆರ್ಮುಗಂ  ಸಂಕಲನ ಈ ಚಿತ್ರಕ್ಕಿದೆ. ಹಂತ ಹಂತವಾಗಿ  ಚಿತ್ರದ ಹಾಡುಗಳು, ಟ್ರೇಲರ್ ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕಿದೆ.




Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*