Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಕಮಹಾದೇವಿ ಜಯಂತಿ ಉತ್ಸವ ವಿಜೃಂಭಣೆಯಿಂದ ಆಚರಣೆ

ಬೆಳಗಾವಿ:  ವೈರಾಗ್ಯ, ಭಕ್ತಿ ಮತ್ತು ಸಮಾನತೆಯ ಪ್ರತಿರೂಪವಾದ ಅಕ್ಕಮಹಾದೇವಿ ಅವರ ಜಯಂತಿಯನ್ನು ಇಂತಹ ಭಕ್ತಿಭಾವದಿಂದ ಆಚರಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದು ಗಜೇಂದ್ರಗಡದ ಅಕ್ಕನ ಬಳಗ ಅಧ್ಯಕ್ಷರಾದ ಸಂಯುಕ್ತ  ಬಂಡಿ ಅವರು ಹೇಳಿದರು.

ನಗರದ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ  "ವೈರಾಗ್ಯನಿಧಿ ಅಕ್ಕಮಹಾದೇವಿ ತಾಯಿಯವರ   ಜಯಂತಿ" ಪ್ರಯುಕ್ತ   ಆಯೋಜಿಸಲಾದ " ಅಕ್ಕನ  ಜಯಂತಿ ಉತ್ಸವ" ವನ್ನು ಆಚರಿಸಲಾಯಿತು. ಬಳಿಕ, ಅಕ್ಕಮಹಾದೇವಿ ತಾಯಿಯವರ  ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿ ಅವರು ಮಾತನಾಡಿದರು.

ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಕಾಲದ ಸಮಕಾಲೀನರು, ಜಾಗತಿಕ ಮಹಿಳೆಯರಿಗೆ ಸಾಮಾಜಿಕ ಪ್ರಜ್ಞೆಯನ್ನು ಜಾಗೃತಗೊಳಿಸಿ, ಸಮಾನತೆ ಸಾರಿದ ಧೀಮಂತ ಮಹಾ ಶಿವಶರಣೆ, ಕನ್ನಡ ಸಾಹಿತ್ಯ ಲೋಕದ ಮೊದಲ ಬಂಡಾಯ ಕವಯತ್ರಿ ಮತ್ತು ವಚನಗಾರ್ತಿ ಅಕ್ಕಮಹಾದೇವಿ. ಅಕ್ಕ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಗ್ರಾಮದಲ್ಲಿ ಜನಿಸಿ, ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ತತ್ವಗಳು ನಾವಿಂದೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅಕ್ಕಮ್ಮನ ವಚನಗಳು ಇಂದಿಗೂ ಪ್ರಸ್ತುತ. ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪವಾಗಿವೆ. ಅಕ್ಕಮಹಾದೇವಿ ತನ್ನ ವಚನಗಳಲ್ಲಿ ಬುದ್ದಿಗಿಂತ ಭಾವಕ್ಕೆ, ಮಾತಿಗಿಂತ ಕ್ರಿಯೆಗೆ, ಅಧಿಕಾರಕ್ಕಿಂತ ಅಂತಕರಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದಾರೆ.   ಮಹಾ ತಾಯಿ  ಅಕ್ಕಮಹಾದೇವಿ ಒಬ್ಬ ಶ್ರೇಷ್ಠ ಕವಯತ್ರಿ,  ಸಾಕ್ಷಾತ್ ಸೃಷ್ಟಿಕರ್ತನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕನ ಹಾದಿ ಬಲು ರೋಚಕವಾಗಿದೆ. ಅವರ ವಚನಗಳು ಮನುಷ್ಯರು ಜೀವನಕ್ಕೆ ದಾರಿದೀಪ, ನಾವು ಸಂಸ್ಕಾರಯುತವಾಗಿ ಇರಬೇಕು ಎಂಬುವುದನ್ನು ಬಹಳಷ್ಟು ಅರ್ಥದಲ್ಲಿ  ತಿಳಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮಧುಮತಿ ಹಿರೇಮಠ,   ಕಾರ್ಯದರ್ಶಿ  ರಕ್ಷಾ ದೇಗಿನಾಳ, ಸಹ ಕಾರ್ಯದರ್ಶಿ  ಸರೋಜಾ ನಿಶಾನ್ದಾರ ಹಾಗೂ ಲಿಂಗಾಯತ ಮಹಿಳಾ ಸಮಾಜದ ಸದಸ್ಯರು ಇತರರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ