Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಅಕ್ಕನ ಬಳಗದ 11ನೇ ವರ್ಷದ ವಾರ್ಷಿಕೋತ್ಸವ"

ಯಮಕನಮರಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ಅಕ್ಕನ ಬಳಗದ 11 ನೇ ವರ್ಷದ ವಾರ್ಷಿ ಕೋತ್ಸವವು ಭಾನುವಾರ ದಿನಾಂಕ 8.3.2026ರಂದು ಶಿಂಧಿಹಟ್ಟಿ ಗ್ರಾಮದ ಲಕ್ಷ್ಮಿ ದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರುಗಿತು
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದ ಸುಕ್ಷೇತ್ರ ಘೋಡಗೇರಿ ಗ್ರಾಮದ ಶಿವಾನಂದ ಮಠದ ಮಲ್ಲಯ್ಯ ಸ್ವಾಮಿಗಳು ಮಾತನಾಡಿ ಮಾತೃ ದೇವೋಭವ ಎಂಬ ಕಲ್ಪನೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು
ಗ್ರಾಮೀಣ ಪ್ರದೇಶದಲ್ಲಿ ಸಮಾಜದಲ್ಲಿ ಅಕ್ಕನ ಬಳಗ ಮಾಡುತ್ತಿರುವ ಕಾರ್ಯ ಬಹಳಷ್ಟು ಶ್ಲಾಘನೀಯ ಎಂದು ಆಶಿಸಿದರು .
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಾತೆ ಲಕ್ಷ್ಮಿ ತಾಯಿ ರವರು ಮನುಷ್ಯ ಜೀವನದ ಪ್ರತಿ ಹಂತದಲ್ಲಿ ಮಾತೆಯ ಪಾತ್ರ ಮಹತ್ವವಾಗಿದೆ ಎಂದು ಹೇಳಿದರು
ಹಿರಿಯ ಸಾಹಿತಿ ಎಸ್ಎಂ ಶಿರೂರು ಮಾತನಾಡಿ ಎಲ್ಲರನ್ನೂ ಜಾಗೃತ್ತಗೊಳಿಸುವ ಕಾರ್ಯದಲ್ಲಿ ಅಕ್ಕನ ಬಳಗ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಅಕ್ಕನ ಬಳಗದ ಸದಸ್ಯರಾದ ಸವಿತಾ ಮುಗುಳಿ, ಬಸಮ್ಮ ಹುರುಳಿ, ಅನಿಸಿಕೆಗಳನ್ನು ವ್ಯಕ್ತಪಡಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಕನ ಬಳಗದ ಅಧ್ಯಕ್ಷರಾದ ಗೌರವ ಮುಗಳಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ಗೌರವ ರಾಮಣ್ಣ ಮುಗುಳಿ, ಕಾರ್ಯದರ್ಶಿ ಕಸ್ತೂರಿ ಸಿದ್ದಪ್ಪ ಕರಗುಪ್ಪಿ, ಉಪಾಧ್ಯಕ್ಷರಾದ ಬಸವ ಚಂದ್ರಪ್ಪ ಮುಗಳಿ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು
ಸಂಘದ ಸದಸ್ಯರಾದ ಸುರೇಖಾ ಹುರುಳಿ, ಬಸವ್ವ ಹುರುಳಿ ವಾರ್ಷಿಕ ವರದಿಯನ್ನು ವಾಚಿಸಿದರು.
ಶಿಕ್ಷಕಿ ಕಸ್ತೂರಿ ಹುರುಳಿ , ಹಾಗೂ ಸಾಕ್ಷಿ ಮುಗುಳಿ ಜಂಟಿಯಾಗಿ ಕಾರ್ಯಕ್ರಮ ನಿರೂಪಿಸಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ