Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಸಿದ್ಧರಾಮ ಕಲ್ಮಠ ನೇಮಕ

ಬಳ್ಳಾರಿ.ಆ.07: ನಗರದ  ಸಾಹಿತಿ ಸಿದ್ಧರಾಮ ಕಲ್ಮಠ ಇವರನ್ನು  ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಅಖಿಲ ಕರ್ನಾಟಕ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಾಕ್ಷರಾದ ಡಾ. ಸಿ ಸೊಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸಂಸ್ಕೃತಿಗಳ ಅಭಿಮಾನಿಗಳಾದ ನೀವು ದಯವಿಟ್ಟು ಈ ಹುದ್ದೆಯನ್ನು ಒಪ್ಪಿಕೊಂಡು ಬಳ್ಳಾರಿ ಜಿಲ್ಲಾ ಚಟುವಟಿಕೆಗಳಿಗೆ ಹೊಸ ಚಾಲನೆ ನೀಡಬೇಕೆಂದು ನೂತನವಾಗಿ ನೇಮಕಗೊಂಡ ಸಿದ್ಧರಾಮ ಕಲ್ಮಠ ಅವರಿಗೆ ಸೂಚಿಸಿದರು.


ಸಿದ್ಧರಾಮ ಕಲ್ಮಠ ಅವರ ಪರಿಚಯ :-ಸಿದ್ಧರಾಮ ಕಲ್ಮಠ ಅವರು ತಾಯಿಯ ತವರು ರಾಯಚೂರು ಜಿಲ್ಲೆ  ಸಿಂಧನೂರು ತಾಲ್ಲೂಕಿನ ರೌಡಕುಂದದಲ್ಲಿ ಜನಿಸಿದರು. ತಂದೆ ದಿ. ಕೆ.ಎಂ. ಮುಪ್ಪಿನಯ್ಯ ತಾಯಿ ಕೆ.ಎಂ.ಶಶಿಕಲಾ. ಬಳ್ಳಾರಿ ವೀರಶೈವ ಕಾಲೇಜಿನಲ್ಲಿ ಪದವಿ ಶಿಕ್ಷಣ, ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ಎಂ.ಎ. ಕನ್ನಡ ಸಾಹಿತ್ಯ ಚಿನ್ನದ ಪದಕದೊಂದಿಗೆ ಪ್ರಥಮ ರ್ಯಾಂಕ್ ಪಡೆದು, ಮೈಸೂರು ವಿ.ವಿ.ಯಲ್ಲಿ ಪತ್ರಿಕೋದ್ಯಮ ಡಿಪ್ಲೊಮಾ ಪದವೀಧರರು. ಸಾಹಿತ್ಯ, ಸಂಸ್ಕೃತಿ, ರಂಗಭೂಮಿ, ಸಂಘಟನೆಯ ನಂಟನ್ನು ಹೊಂದಿರುವ ಇವರು ಪ್ರಜ್ಞೆ ಪ್ರತಿಷ್ಠಾನದ ಅಧ್ಯಕ್ಷರಾಗಿ, ಬೆಂಗಳೂರಿನ ಗ್ರಂಥಾಲಯ ಇಲಾಖೆಯ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿ, ಅಖಂಡ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಬಳ್ಳಾರಿಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.


ಈಗಾಗಲೇ ಸಮ್ಮಿಲನ, ಸತ್ತ ಪ್ರೀತಿಯ ಅರಸುತ್ತ, ಬಿದಿರ ಗಾನ ಎಂಬ ಕವನ ಸಂಕಲನಗಳನ್ನು ರಂಗಾಂತರಂಗ (ವ್ಯಕ್ತಿಚಿತ್ರಣ), ಹುತಾತ್ಮ ಪೈಲ್ವಾನ್ ಪಿಂಜಾರ್ ರಂಜಾನ್ ಸಾಬ್ (ಕರ್ನಾಟಕ ಏಕೀಕರಣದ ಏಕೈಕ ಬಲಿದಾನ), ಗಡಿನಾಡ ದೀಪಗಳು (ಸಂಪಾದನೆ), ಚರಿತ್ರೆಯ ಜಾಡಿನಲ್ಲಿ (ಗೌರವ ಸಂಪಾದನೆ). ಇವರ ಉರಿಯ ಬೆಳಕು ಕತೆಯು 'ಮೊಹರಂ ಕಡೆಯ ದಿನ' ಹೆಸರಿನಲ್ಲಿ ನಾಟಕವಾಗಿ ರೂಪಾಂತರಗೊಂಡಿದೆ.


ಅನೇಕ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದಲ್ಲದೆ, ನಾಡು ನುಡಿ ಚಿಂತನೆಯ ನೂರಾರು ಉಪನ್ಯಾಸಗಳನ್ನು ನೀಡಿರುವರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯು ಡಾ.ಎಸ್.ಕೆ. ಕರೀಂ ಖಾನ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರಶಸ್ತಿ, ಕಲಾಸಂಗಮ ಸಾಂಸ್ಕೃತಿಕ ಸಂಸ್ಥೆಯು ಕನ್ನಡಾಚಾರ್ ಗೌರವ ಪುರಸ್ಕಾರ, ಮಯೂರ ಕಲಾ ಸಂಘದ ಮಕಸಂ ಗೌರವ ಪುರಸ್ಕಾರ, ೨೦೧೭ ಹಂಪಿ ಉತ್ಸವದ ಯುವ ಕವಿಗೋಷ್ಠಿಯ ಅಧ್ಯಕ್ಷತೆ ಹೀಗೆ ನಾಡಿನ ಅನೇಕ ಸಂಸ್ಥೆಗಳು ಗೌರವ ಪುರಸ್ಕಾರಗಳೊಂದಿಗೆ ಸನ್ಮಾನಿಸಿವೆ.  ಈ ಸಂದರ್ಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಕೆ ಎಮ್ ವೀರೇಶ್ ಮತ್ತು ರಾಜ್ಯ ಕಾರ್ಯದರ್ಶಿಗಳಾದ ಸೋಮಶೇಖರ್, ಗಾಂಜಿ ಸೇರಿದಂತೆ ಇತರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ