Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭಾ ಕಾರಂಜಿಯಲ್ಲಿ  ವಾಸವಿ ವಿದ್ಯಾರ್ಥಿಗಳ ಅದ್ಭುತ ಸಾಧನೆ





 ಬಳ್ಳಾರಿ,ಡಿ.13: ಮಕ್ಕಳು ಸ್ಪರ್ಧೆಗಳಲ್ಲಿ ತೋರಿದ ಆತ್ಮವಿಶ್ವಾಸ ಹಾಗೂ ಸೃಜನಶೀಲತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವರಿಗೆ ದೊರೆತ ಪ್ರತಿಯೊಂದು ಗೆಲುವು ನಮ್ಮ ಸಂಸ್ಥೆಯ ಮೌಲ್ಯಗಳು ಮತ್ತು ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಫಲವೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ಪಿ.ಎನ್. ಸುರೇಶ್ ತಿಳಿಸಿದ್ದಾರೆ.

ಇಂದಿರಾನಗರ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ 2025-26 ರಲ್ಲಿ ಶ್ರೀ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಸಾಂಸ್ಕೃತಿಕ, ಸಾಹಿತ್ಯ, ಕಲಾ, ಪ್ರಬಂಧ, ಸಂಸ್ಕೃತ ಮತ್ತು ಅರಬೀಕ್  ಧಾರ್ಮಿಕ ಪಠಣ, ಚಿತ್ರಕಲೆ, ಕಂಠಪಾಠ,ಆಶುಭಾಷಣ, ಕ್ಲೆಮಾಡಲ್, ರಂಗೋಲಿ,ಭರತನಾಟ್ಯ, ಕವಾಲಿ ಮತ್ತು ಇತರೆ ಹಲವು ವಿಭಾಗಗಳಲ್ಲಿ ವಿದ್ಯಾರ್ಥಿಗಳು 30 ಪ್ರಶಸ್ತಿಗಳನ್ನು ಗಳಿಸುವುದರ ಮೂಲಕ  ಅದ್ಭುತ ಸಾಧನೆ ಪ್ರದರ್ಶಿಸಿದ್ದಾರೆ.

ಪ್ರತಿ ಸ್ಪರ್ಧೆಯಲ್ಲಿ ಮಕ್ಕಳ ಆಸಕ್ತಿ, ಸೃಜನಶೀಲತೆ ಮತ್ತು ಪರಿಶ್ರಮವು ಸಂಸ್ಥೆಯ   ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಕರ ನಿಷ್ಠೆಯ ಪ್ರತಿಫಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಹುಮಾನಗಳನ್ನು ಪಡೆಯುವ ಮೂಲಕ ನಮ್ಮ ಶಾಲೆ ಕ್ಲಸ್ಟರ್ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ನಮ್ಮ ವಿದ್ಯಾರ್ಥಿಗಳ ಸಾಧನೆ ಶಾಲೆಯ ಹೆಸರು,ಖ್ಯಾತಿ ಮತ್ತು ಪ್ರತಿಷ್ಠೆಯನ್ನು ಮತ್ತಷ್ಟು ಎತ್ತಿ ಹಿಡಿದಿದೆ ಎಂದು ಶಾಲಾ ಮುಖ್ಯಗುರುಗಳಾದ ವೀರೇಶ್. ಯು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಲಾ  ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದು,ಮಕ್ಕಳು ಭವಿಷ್ಯದಲ್ಲಿ ಮತ್ತಷ್ಟು ಯಶಸ್ಸು ಪಡೆಯಲಿ ಎಂದು ಶುಭ ಹಾರೈಸಿದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ