Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್‌ಸಿಬಿ ವೈಫಲ್ಯಕ್ಕೆ ವಿರಾಟ್ ಕೊಹ್ಲಿ ಕಾರಣ: ಅಂಬಟಿ ರಾಯುಡು ದೂರು!

ಬೆಂಗಳೂರು,ಏ.03: 2008ರಲ್ಲಿ ನಡೆದ ಐಪಿಎಲ್ ಆರಂಭದಿಂದಲೂ ಟ್ರೋಫಿ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಾಧ್ಯವಾಗಿಲ್ಲ. ಈ ವೈಫಲ್ಯಕ್ಕೆ ವಿರಾಟ್ ಕೊಹ್ಲಿಯೇ ಕಾರಣ ಎಂದು ಭಾರತದ ಮಾಜಿ ಆಟಗಾರ ಆರೋಪಿಸಿದ್ದಾರೆ. ಐಪಿಎಲ್ 2024ರ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸ್ಪಿನ್ನರ್‌ನಿಂದ ಔಟಾದ ನಂತರ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.




ಇತ್ತೀಚಿನ ವರ್ಷಗಳಲ್ಲಿ ಆರ್‌ಸಿಬಿಯ ದೊಡ್ಡ ಸಮಸ್ಯೆ ಎಂದರೆ ಆಟಗಾರರಿಗೆ ಬೆಂಬಲದ ಕೊರತೆ. ಅವರು ಶೇನ್ ವ್ಯಾಟ್ಸನ್, ಯುಜ್ವೇಂದ್ರ ಚಹಾಲ್, ಮಿಚೆಲ್ ಸ್ಟಾರ್ಕ್ ಮತ್ತು ಶಿವಂ ದುಬೆ ಅವರಂತಹ ಮ್ಯಾಚ್ ವಿನ್ನರ್‌ಗಳಿಗೆ ಫ್ರಾಂಚೈಸಿಯನ್ನು ತೊರೆಯಲು ಅವಕಾಶ ಮಾಡಿಕೊಟ್ಟರು ಎಂದು ಅಂಬಟಿ ರಾಯುಡು ದೂರಿದ್ದಾರೆ.








ಕೊಹ್ಲಿ ಹಲವು ವರ್ಷಗಳ ಕಾಲ RCB ನಾಯಕರಾಗಿದ್ದರು. ಆಗ ಅವರು ತಂಡದಲ್ಲಿ ಆಟಗಾರರನ್ನು ಉಳಿಸಿಕೊಳ್ಳುವುದು ಮತ್ತು ಹರಾಜು ಪ್ರಕ್ರಿಯೆಯಲ್ಲಿ ತಮ್ಮ ಅಭಿಪ್ರಾಯ ಹೇಳುವ ಅಧಿಕಾರ ಹೊಂದಿದ್ದರು. ಆದರೆ, ಆ ತಂಡವು ಗುಣಮಟ್ಟದ ಬೌಲರ್‌ಗಳನ್ನು ಎಂದಿಗೂ ಖರೀದಿಸಲಿಲ್ಲ. ಈ ಸಮಸ್ಯೆ ವರ್ಷದಿಂದ ವರ್ಷಕ್ಕೆ ಆರ್‌ಸಿಬಿ ತಂಡದ ಮೇಲೆ ಪರಿಣಾಮ ಬೀರುತ್ತಲೇ ಸಾಗಿದೆ. ಬ್ಯಾಟಿಂಗ್ ಕ್ರಮಾಂಕದಲ್ಲಿಯೂ ಅವರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಗ್ರ ಕ್ರಮಾಂಕದಲ್ಲಿ ಅತ್ಯುತ್ತಮ ಬ್ಯಾಟರ್‌ಗಳನ್ನು ಹೊಂದಿದ್ದರೂ, ಅವರು ಕೈಚೆಲ್ಲಿದರೆ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಬೇರೆ ಯಾರೊಬ್ಬರೂ ಇಲ್ಲ.

'ವಿರಾಟ್ ಕೊಹ್ಲಿ ಸುದೀರ್ಘ ಕಾಲ RCB ನಾಯಕರಾಗಿದ್ದರು. ತಂಡವು ಎಂದಿಗೂ ಗುಣಮಟ್ಟದ ಬೌಲರ್‌ಗಳನ್ನು ಖರೀದಿಸಿಯೇ ಇಲ್ಲ. ತಂಡದೊಂದಿಗಿದ್ದ ಅಗ್ರಮಾನ್ಯ ಆಟಗಾರರೂ ಕೂಡ ತಂಡದಿಂದ ಯಾವುದೇ ಬೆಂಬಲ ಸಿಗದೆ ತಂಡದಿಂದ ಹೊರನಡೆದರು. ಅದೇ ಆಟಗಾರರು ಇದೀಗ ಇತರ ಫ್ರಾಂಚೈಸಿಗಳನ್ನು ಸೇರಿದ ನಂತರ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ವಿರಾಟ್ ಕೊಹ್ಲಿ ಅವರು ನಾಯಕನಾಗಿದ್ದು ತಮ್ಮ ಪಾತ್ರವನ್ನು ಪರಿಪೂರ್ಣವಾಗಿ ನಿರ್ವಹಿಸಲಿಲ್ಲ' ಎಂದು ದೂರಿದ್ದಾರೆ.

ವಿರಾಟ್ ಕೊಹ್ಲಿ ಆರ್‌ಸಿಪಿ ಪರವಾಗಿ ಐಪಿಎಲ್‌ನಲ್ಲಿ 7000 ರನ್ ಗಳಿಸಿದ್ದಾರೆ. ಆದರೆ, RCB ಗಾಗಿ ಅಗ್ರ ರನ್ ಗಳಿಸಿದವರ ಪಟ್ಟಿಯಲ್ಲಿ ಬೇರೆ ಯಾವುದೇ ಬ್ಯಾಟರ್ ಇಲ್ಲ. ತಂಡಕ್ಕಾಗಿ ಅತಿಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಬೇರೆ ಯಾರೂ ಕಾಣಸಿಗುವುದಿಲ್ಲ. ಒಬ್ಬ ಆಟಗಾರನನ್ನು ನಂಬಿ ಯಾವುದೇ ತಂಡವು ಟ್ರೋಫಿಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಅಂಬಟಿ ರಾಯುಡು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಹೇಳಿದ್ದಾರೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ