Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ಚಿಂತನೆಗಳು ಇಂದಿನ ಪೀಳಿಗೆಗೆ ದಾರಿದೀಪ- ಸಂತೋಷ ಬಂಡೆ

ಇಂಡಿ: ಸಮಾನತೆ ಮತ್ತು ಮಾನವೀಯ ಮೌಲ್ಯಗಳಿಗಾಗಿ ಜೀವನಪರ್ಯಂತ ಹೋರಾಟ ನಡೆಸಿ ನೂತನ ದಿಕ್ಕೊಂದನ್ನು ಸೂಚಿಸಿದ ಭಾರತದ ಸಂವಿಧಾನಶಿಲ್ಪಿ ಡಾ. ಬಿ ಆರ್  ಅಂಬೇಡ್ಕರ್ ಅವರ ತತ್ವಾದರ್ಶ ನಮಗೆ ಸ್ಫೂರ್ತಿಯಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

        ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಡಾ.ಬಿ ಆರ್ ಅಂಬೇಡ್ಕರ್ ಅವರ 68 ನೇ ಮಹಾಪರಿನಿರ್ವಾಣ ದಿನವನ್ನು ಉದ್ಧೇಶಿಸಿ ಮಾತನಾಡಿದರು.

        ಡಾ. ಬಿ ಆರ್ ಅಂಬೇಡ್ಕರ್ ಅವರು ಅಪಾರವಾದ ಅಧ್ಯಯನ, ಚಿಂತನೆಗಳು, ತಮ್ಮ ಸಂಶೋಧನೆ ಮತ್ತು ಪಾಂಡಿತ್ಯಗಳಿಂದ ಬೌದ್ಧಿಕ ಪ್ರಖರತೆಯನ್ನು ಹೊಂದಿದ್ದರು. ಛಲ, ಶ್ರದ್ಧೆ ಮತ್ತು ಪರಿಶ್ರಮದಿಂದ ಪ್ರತಿಕೂಲ ಸನ್ನಿವೇಶದಲ್ಲೂ ಒಬ್ಬ ಸಾಮಾನ್ಯ ಮನುಷ್ಯ ಏನೆಲ್ಲವನ್ನು ಸಾಧಿಸಬಲ್ಲ ಎನ್ನುವುದಕ್ಕೆ ಅವರ ಜೀವನವೇ ಸಾಕ್ಷಿ. ಅವರ ಚಿಂತನೆಗಳು ಇಂದಿನ ಪೀಳಿಗೆಗೆ ದಾರಿದೀಪ ಎಂದು ಹೇಳಿದರು.

        ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, 'ಸಮಾಜದ ಎಲ್ಲ ವರ್ಗಗಳ ಜನರೂ ಸಮಾನ ಹಕ್ಕು- ಅವಕಾಶಗಳನ್ನು ಹೊಂದಬೇಕು ಮತ್ತು ಅನುಭವಿಸಬೇಕು ಎಂಬ ವಿಚಾರಧಾರೆಯನ್ನು ಸಂವಿಧಾನದಲ್ಲಿ ಅಳವಡಿಸಿದ ಅಂಬೇಡ್ಕರ್ ಅವರು ಸಮಾಜದ ಏಳಿಗೆ ಹಾಗೂ ರಾಷ್ಟ್ರದ ಪ್ರಗತಿಯ ಹಾದಿ ಬಗ್ಗೆ ಅತ್ಯುತ್ತಮ ದೂರದೃಷ್ಟಿ ಹೊಂದಿದ್ದರು’ ಎಂದು ಹೇಳಿದರು.

        ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ