Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಚನಗಳ ಮೂಲಕ ಸರ್ವಕಾಲಿಕ ಸತ್ಯ ತಿಳಿಸಿದ ಅಂಬಿಗರ ಚೌಡಯ್ಯ: ಚೆನ್ನಪ್ಪ ನರಸನ್ನವರ

 

ಬೈಲಹೊಂಗಲ-ಸಮಾಜದಲ್ಲಿ ನಡೆಯುವ ಮೂಡನಂಬಿಕೆ, ಬಹುದೇವಪಾಸನೆ, ಡಾಂಬಿಕತೆ, ಅತ್ಯಾಚಾರ ಅನಾಚಾರಿಗಳ ಬಗ್ಗೆ ನೇರ, ದಿಟ್ಟ, ನಿ?ರವಾಗಿ ವಚನಗಳ ಮೂಲಕ ಖಂಡಿಸಿ ಅಖಂಡ ಸಮಾಜ ನಿರ್ಮಾಣದ ನಿಲುವು ಹೊಂದಿದ ನಿಜಶರಣ ಅಂಬಿಗರ ಚೌಡಯ್ಯನವರು ವಚನಗಳ ಮೂಲಕ ಸರ್ವಕಾಲಿಕ ಸತ್ಯದ ಮೌಲ್ಯಗಳನ್ನು ನೀಡಿದ್ದಾರೆ. ಎಂದು ಸಮೀಪದ ಚಿಕ್ಕೊಪ್ಪದ ಬಸವಾನುಭವ ಮಂಟಪದ ಮುಖ್ಯಸ್ಥ ಚೆನ್ನಪ್ಪ ನರಸನ್ನವರ ಹೇಳಿದರು.

ಅವರು ಪಟ್ಟಣದ ಪತ್ರಿ ಬಸವೇಶ್ವರ ಅನುಭವ ಮಂಟಪದಲ್ಲಿ ಶ್ರಾವಣ ಮಾಸದ ನಿಮಿತ್ಯ ಪತ್ರಿ ಬಸವನಗರ ಅಭಿವೃದ್ಧಿ ಸಂಘ, ಶರಣ ಸಾಹಿತ್ಯ ಪರಿ?ತ್ತು ,ಕದಳಿ ಮಹಿಳಾ ವೇದಿಕೆ, ಜಾಗತಿಕ ಲಿಂಗಾಯತ ಮಹಾಸಭಾ, ಹಿರಿಯ ನಾಗರಿಕರ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡ ನಿಜಶರಣ ಅಂಬಿಗರ ಚೌಡಯ್ಯನವರ ಪ್ರವಚನ, ಶ್ರಾವಣ ಮಾಸದ ೩೨ ನೇ ಮಾಸಿಕ ಅನುಭಾವ ಗೋಷ್ಠಿ ಹಾಗೂ ಚೌಡಯ್ಯನವರ ನಾಮಕರಣೋತ್ಸವ ನಿಮಿತ್ಯ ಏರ್ಪಡಿಸಿದ ಕಾರ್ಯಕ್ರಮದಲ್ಲಿ ವಚನ ಚಿಂತಕರಾಗಿ ಆಗಮಿಸಿ ಮಾತನಾಡಿ, ಅಂಬಿಗರ ಚೌಡಯ್ಯನವರ ವಚನಗಳಲ್ಲಿಯ ಸಂದೇಶ ಸುಂದರ ಸಮಾಜದ ನಿರ್ಮಾಣಕ್ಕೆ ದಾರಿದೀಪವಾಗಿವೆ ಎಂದರು.

ಪತ್ರಿ ಬಸವೇಶ್ವರ ದೇವಸ್ಥಾನದ ಮುಖ್ಯಸ್ಥೆ ಪ್ರೇಮಾ ಅಂಗಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಂತಮ್ಮ ಬಸಪ್ಪ ಗೋಣಿ ದಂಪತಿಗಳಿಂದ ತೊಟ್ಟಿಲೋತ್ಸವ ಕಾರ್ಯಕ್ರಮವನ್ನು ನೆರವೇರಿಸಿದರು. ಪತ್ರಯ್ಯ ಕುಲಕರ್ಣಿ ವಚನ ಗಾಯನ ಮಾಡಿದರು. ಗಿರಿಜಕ್ಕ ಪಾಟೀಲ, ಶಕುಂತಲಾ ನರಸನ್ನವರ, ಗೀತಾದೇವಿ ಬೇವಿನ, ಗೀತಾ ಆರಳಿಕಟ್ಟಿ, ಸುವರ್ಣ ಬಿಜುಗುಪ್ಪಿ, ದುಂಡಯ್ಯ ಕುಲಕರ್ಣಿ, ವೀರಣ್ಣ ಹವಳಪ್ಪನವರ, ಸಂತೋಷ ಕೊಳವಿ, ಗಂಗಣ್ಣ ಅಂಗಡಿ, ಗೌರದೇವಿ ತಾಳಿಕೋಟಿಮಠ, ಅನ್ನಪೂರ್ಣ ಕನೋಜ, ಮಹಾದೇವಿ ಗಣಾಚಾರಿ, ಪಾರ್ವತಿ ಎತ್ತಿನಗುಡ್ಡ ಉಪಸ್ಥಿತರಿದ್ದರು. ಚಿಕ್ಕೊಪ್ಪ ಅಕ್ಕ ನಾಗಲಾಂಬಿಕಾ ಅಕ್ಕನ ಬಳಗ, ಬಸವಾದಿ ಸಂಘಟನೆಗಳ ಸದಸ್ಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

ವೀರಭದ್ರ ಕಾಪಸೆ ಸ್ವಾಗತಿಸಿದರು. ಕಾಡಪ್ಪ ರಾಮಗುಂಡಿ ನಿರೂಪಿಸಿದರು. ಅಶೋಕ ಸಾಲಿ ವಂದಿಸಿದರು. ಪೋಟೋ ಶೀರ್ಷಿಕೆ- ಬೈಲಹೊಂಗಲ ಪಟ್ಟಣದ ಪತ್ರಿ ಬಸವೇಶ್ವರ ಬಡಾವಣೆಯ ಪತ್ರಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ವಚನ ಗಾಯನ ಜರುಗಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ