Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮೆರಿಕದ ಅತಿ ಉದ್ದದ ಫ್ರಾನ್ಸಿಸ್ ಸ್ಕಾಟ್ ಸೇತುವೆ: ಹಡಗು ಡಿಕ್ಕಿ ಹೊಡೆದು ಕುಸಿತ!

ಅಮೆರಿಕ ಮಾ26:  ಅಮೆರಿಕದ ಬಾಲ್ಟಿಮೋರ್‌ನ ಅತಿ ಉದ್ದದ ಫ್ರಾನ್ಸಿಸ್ ಸ್ಕಾಟ್ ಸೇತುವೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ. ವರದಿಗಳ ಪ್ರಕಾರ, ಸೇತುವೆ ಕುಸಿಯುವ ಮೊದಲು ಬೆಂಕಿ ಹೊತ್ತಿಕೊಂಡಿತು ಮತ್ತು ಹಲವಾರು ವಾಹನಗಳು ಕೆಳಗಿರುವ ನೀರಿನಲ್ಲಿ ಬಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ.

ಸೇತುವೆ ಕುಸಿದಾಗ ಸುಮಾರು ಏಳು ಮಂದಿ ಕಟ್ಟಡ ಕಾರ್ಮಿಕರು ಮತ್ತು ಮೂರ್ನಾಲ್ಕು ನಾಗರಿಕ ವಾಹನಗಳು ಸೇತುವೆ ಮೇಲೆ ಇದ್ದವು ಎಂದು ಹೇಳಲಾಗಿದೆ. ಘಟನೆಯ ನಂತರ ಸೇತುವೆಯನ್ನು ವಾಹನ ಸಂಚಾರಕ್ಕೆ ಬಂದ್ ಮಾಡಲಾಗಿದೆ. ಸುರಕ್ಷತಾ ಕಾರಣಗಳಿಗಾಗಿ ಅಧಿಕಾರಿಗಳು ಎರಡೂ ದಿಕ್ಕುಗಳಲ್ಲಿ ಎಲ್ಲಾ ಲೇನ್‌ಗಳನ್ನು ಮುಚ್ಚಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವುನೋವುಗಳ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 47 ವರ್ಷಗಳಷ್ಟು ಹಳೆಯದಾದ ಸೇತುವೆ ಇದಾಗಿದೆ.

ವರದಿಗಳ ಪ್ರಕಾರ ಸೇತುವೆಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಹಡಗು ಕಂಟೈನರ್ ಹಡಗು. ‘ಡಾಲಿ’ ಹೆಸರಿನ ಈ ಹಡಗು ಬಾಲ್ಟಿಮೋರ್‌ನಿಂದ ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ಹೋಗುತ್ತಿತ್ತು. ರಾತ್ರಿ 1:30ರ ಸುಮಾರಿಗೆ ಹಡಗು ಸೇತುವೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಇದರ ನಂತರ ಹಡಗು ನೀರಿನಲ್ಲಿ ಮುಳುಗಿತು ಮತ್ತು ಸೇತುವೆಯೂ ಮುರಿದು ನದಿಗೆ ಬಿದ್ದಿತು.

ಈ ಸೇತುವೆಯನ್ನು ಬಾಲ್ಟಿಮೋರ್ ಬಂದರಿನಲ್ಲಿ ಪಟಾಪ್ಸ್ಕೋ ನದಿಯ ಮೇಲೆ ನಿರ್ಮಿಸಲಾಗಿದೆ. ಸುಮಾರು 3 ಕಿಲೋಮೀಟರ್ ಉದ್ದದ ಈ ಸೇತುವೆಯ ನಿರ್ಮಾಣವು 1972 ರಲ್ಲಿ ಪ್ರಾರಂಭವಾಯಿತು ಮತ್ತು ಸೇತುವೆಯನ್ನು 1977 ರಲ್ಲಿ ಸಂಚಾರಕ್ಕೆ ತೆರೆಯಲಾಯಿತು. ಪ್ರತಿ ವರ್ಷ ಸರಾಸರಿ 1.1 ಕೋಟಿ ವಾಹನಗಳು ಈ ಸೇತುವೆಯ ಮೂಲಕ ಹಾದು ಹೋಗುತ್ತವೆ. ಈ ಸೇತುವೆಯನ್ನು ಕೀ ಸೇತುವೆ ಎಂದೂ ಕರೆಯಲಾಗುತ್ತಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ