Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮಿತಾಭ್​ ಬಚ್ಚನ್ ಗೆ ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ

ದೆಹಲಿ,ಏಪ್ರಿಲ್ 18:ಸಿನಿಮಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ, ಆ ಮೂಲಕ ದೇಶಕ್ಕೆ ಕೊಡುಗೆ ನೀಡಿದ ಬಾಲಿವುಡ್ ನಟ ಅಮಿತಾಭ್​ ಬಚ್ಚನ್ ಅವರಿಗೆ ಪ್ರತಿಷ್ಠಿತ ‘ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುತ್ತಿದೆ.

ಮಂಗೇಶ್ಕರ್ ಕುಟುಂಬವು ಈ ಪ್ರಶಸ್ತಿಯನ್ನು ನೀಡುತ್ತಿದೆ. ಭಾರತೀಯ ಸಿನಿಮಾ, ಸಂಸ್ಕೃತಿ ಮತ್ತು ಸಮಾಜದ ಮೇಲೆ ಅಮಿತಾಭ್​ ಬಚ್ಚನ್  ಅವರು ಬೀರಿದ ಪ್ರಭಾವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ಸುದ್ದಿಗೋಷ್ಠಿ ಮೂಲಕ ಪ್ರಶಸ್ತಿ ಘೋಷಣೆ ಮಾಡಲಾಯಿತು. ಈ ಮೊದಲು ಇದೇ ಪ್ರಶಸ್ತಿ ಪಡೆದ ನರೇಂದ್ರ ಮೋದಿ ಹಾಗೂ ಗಾಯಕಿ ಆಶಾ ಭೋಂಸ್ಲೆ ಅವರ ಸಾಲಿಗೆ ಈಗ ಅಮಿತಾಭ್​ ಬಚ್ಚನ್​ ಸೇರ್ಪಡೆ ಆಗುತ್ತಿದ್ದಾರೆ.

‘ಭಾರತ ರತ್ನ’ ಪ್ರಶಸ್ತಿ ಪುರಸ್ಕೃತೆ, ದಿವಂಗತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ‘ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ’ ನೀಡುತ್ತಿರುವ ಈ ಪ್ರಶಸ್ತಿಯು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳನ್ನು ಗುರುತಿಸುತ್ತದೆ. ಅಮಿತಾಬ್​ ಬಚ್ಚನ್ ಅವರ ಜೊತೆಗೆ, ಅತ್ಯುತ್ತಮ ಸಾಧನೆ ಮಾಡಿದ ಹಲವಾರು ದಿಗ್ಗಜರಿಗೆ ಈ ಪ್ರಶಸ್ತಿ ಸಿಗುತ್ತಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ