Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೆಚ್ಚುಗೆಗೆ ಪಾತ್ರವಾದ ನಗ್ನಸತ್ಯ


       ಚಂದನವನದ ಅನುಭವಿ ತಂತ್ರಜ್ಘ ರಮೇಶ್ ಕಾಮತ್ ಗ್ಯಾಪ್ ನಂತರ ’ನಗ್ನಸತ್ಯ’ ಎಂಬ ಕೊಂಕಣಿ ಸಿನಿಮಾಕ್ಕೆ ಕಥೆ, ಚಿತ್ರಕಥೆ,ಸಂಭಾಷಣೆ, ಎರಡು ಹಾಡುಗಳಿಗೆ ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.

     ಕಿರಣ್ಮಯಿ ಪತಿಗೆ ಬೆಂಗಾವಲಾಗಿ ಆದಿತ್ಯ ಸಿನಿ ಕ್ರಿಯೇಶನ್ಸ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ. ಇತ್ತೀಚಿಗೆ  ಸಿನಿ ಪಂಡಿತರಿಗೆ ಚಿತ್ರರಂಗದ ಗಣ್ಯರಿಗೆ ಚಿತ್ರದ  ವಿಶೇಷ ಪ್ರದರ್ಶನ ಏರ್ಪಾಟು ಮಾಡಲಾಗಿತ್ತು.

      ಹಿರಿಯ ನಟಿ ಪದ್ಮವಾಸತಿ ಮಾತನಾಡಿ "ಇಂತಹ ಚಿತ್ರಗಳು ಜನರಿಗೆ ತಲುಪಬೇಕು. ನಿರ್ದೇಶಕರು ಇದೇ ಕೊನೆ ಚಿತ್ರ ಎನ್ನುತ್ತಿದ್ದಾರೆ. ನೀವು ದಯವಿಟ್ಟು ನಿಲ್ಲಿಸಬೇಡಿ. ಮುಂದೆಯೂ ಇಂತಹುದೆ ಉತ್ತಮ ಚಿತ್ರಗಳನ್ನು ಕೊಡುತ್ತಾ ಇರಿ" ಎಂದರು. ನಟ,ನಿರ್ದೇಶಕ ಎಂ.ಡಿ.ಕೌಶಿಕ್, ಹಿರಿಯ ಪತ್ರಕರ್ತ ಸದಾಶಿವಶಣೈ ಸೇರಿದಂತೆ ಹಲವರಿಂದ ಸಿನಿಮಾ ಕುರಿತಂತೆ ಪ್ರಶಂಸೆಯ ನುಡಿಗಳು ಕೇಳಿಬಂದವು.

     ಮುಖ್ಯ ಪಾತ್ರದಲ್ಲಿ ಆದ್ಯಾನಾಯಕ್ ಲೋಕಾಯುಕ್ತರಾಗಿ ಗಣೇಶ್‌ಪ್ರಭು. ಉಳಿದಂತೆ ಗೋಪಿನಾಥ್‌ಭಟ್, ಆನಂದ್‌ನಗರಕರ್, ಗೋಪಿಭಟ್, ವಿಶ್ವನಾಥ್ ಕಿಣಿ ಹಾಗೂ ಮಂಗಳೂರು ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಸಂಗೀತ ಶ್ರೀಸುರೇಶ್, ಛಾಯಾಗ್ರಹಣ ಪಿ.ವಿ.ಆರ್.ಸ್ವಾಮಿ, ಸಂಕಲನ ನಾಗೇಶ್.ಎನ್, ಸೌಂಡ್ ಇಂಜಿನಿಯರ್ ಪ್ರವೀಣ್‌ಜೋಗಿ ಅವರದಾಗಿದೆ. ಕಳೆದ ವರ್ಷ ರಾಷ್ಟ್ರ ಪ್ರಶಸ್ತಿ ಪಡೆದ ’ಕಂದೀಲು’ ಚಿತ್ರದಲ್ಲಿ ಗುರುತಿಸಿಕೊಂಡಿದ್ದ

ತಂತ್ರಜ್ಞರು 'ನಗ್ನಸತ್ಯ'ದಲ್ಲಿ ಕೆಲಸ ಮಾಡಿರುವುದು  ವಿಶೇಷ.

     ಕೆಲವು ವರ್ಷಗಳ ಹಿಂದೆ ಭೂಪಾಲ್‌ದಲ್ಲಿ ಮಹಿಳೆ ಮೇಲೆ ಶೋಷಣೆ ಮಾಡಿದ ಸುದ್ದಿಯ ಒಂದು ಎಳೆಯನ್ನು ತೆಗೆದುಕೊಂಡು ಚಿತ್ರಕತೆ ಸಿದ್ದಪಡಿಸಲಾಗಿದೆ. ಸಂವಿಧಾನದಲ್ಲಿ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಮಾಜದಲ್ಲಿ ಹೆಣ್ಣುಮಗಳು ಹಿಂಸೆಗೆ ಗುರಿಯಾಗುತ್ತಾಳೆ. ಆಕೆ ಮೂರು ಅಂಗಗಳಿಗೂ ಹೋದರೂ ನ್ಯಾಯ ಸಿಗುವುದಿಲ್ಲ. ಮುಂದೆ ಇದರ ವಿರುದ್ದ ಹೋರಾಡಿ, ಸಮಾಜಕ್ಕೆ ಯಾವ ಎಚ್ಚರಿಕೆ ಕೊಡುತ್ತಾಳೆ ಎಂಬುದನ್ನು ಕುತೂಹಲದ ಮೂಲಕ ತೋರಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಸಿಂಕ್ ಸೌಂಡ್‌ದಲ್ಲಿ ಚಿತ್ರೀಕರಣ ನಡೆಸಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ