LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಪತ್ನಿ ಅನಿತಾ ಗೋಯಲ್‌ ನಿಧನ

ಮುಂಬೈ,16: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರ ಪತ್ನಿ ಅನಿತಾ ಗೋಯಲ್‌ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಹಲವು ಸಮಯಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ನರೇಶ್‌ ಗೋಯಲ್‌ ಅವರಿಗೆ ಇತ್ತೀಚೆಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಅನಿತಾ ಅವರ ಅಂತ್ಯಕ್ರಿಯೆ ಇಂದು ಮುಂಬೈಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿದ್ದ ನರೇಶ್ ಗೋಯಲ್ ಅವರಿಗೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ಜಾಮೀನು ನೀಡಿತ್ತು. ಗೋಯಲ್ ಅವರು ತಮ್ಮ ಪತ್ನಿಯ ಗಂಭೀರ ಆರೋಗ್ಯ ಸ್ಥಿತಿ ಹಾಗೂ ತಮ್ಮ ಚಿಕಿತ್ಸೆಗಾಗಿ ಮಾನವೀಯ ಆಧಾರದ ಮೇಲೆ ಜಾಮೀನು ಕೋರಿದ್ದರು. ಅನಿತಾ ಅವರ ಪತಿ ಮತ್ತು ಇಬ್ಬರು ಮಕ್ಕಳಾದ ನಮ್ರತಾ ಮತ್ತು ನಿವಾನ್ ಅವರನ್ನು ಅಗಲಿದ್ದಾರೆ. ಗುರುವಾರ ಮುಂಬೈನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.‌

ನರೇಶ್‌ ಗೋಯಲ್‌ ಅವರು ಕೆನರಾ ಬ್ಯಾಂಕ್‌ನಿಂದ ಸಾಲ ಪಡೆದು, ಕೋಟ್ಯಂತರ ರೂ. ವಂಚಿಸಿದ ಪ್ರಕರಣ ಎದುರಿಸುತ್ತಿದ್ದು, ಇವರ ವಿರುದ್ಧ ಇ.ಡಿ ಅಧಿಕಾರಿಗಳು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ  ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ನರೇಶ್‌ ಗೋಯಲ್‌ ಅವರನ್ನು ಬಂಧಿಸಲಾಗಿತ್ತು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್