Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ರಾಷ್ಟ್ರಗಳಿಂದ ‘ಕೋವಿಶೀಲ್ಡ್ ಲಸಿಕೆ’ ವಾಪಸ್: ‘ಆ್ಯಸ್ಟ್ರಾಜೆನಿಕಾ’ ಘೋಷಣೆ

ಲಂಡನ್ 08: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಬಳಸಲಾಗಿದ್ದ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸಿದ್ದ ಬ್ರಿಟನ್ - ಸ್ವೀಡನ್ ಮೂಲದ ಬಹುರಾಷ್ಟ್ರೀಯ ಕಂಪನಿಯಾದ ಆಸ್ಟ್ರಾಜೆನಿಕಾ, ಜಗತ್ತಿನಾದ್ಯಂತ ತಾನು ಬಿಡುಗಡೆ ಮಾಡಿದ್ದ ಕೋವಿಶೀಲ್ಡ್ ಲಸಿಕೆಯನ್ನು ಹಿಂಪಡೆಯುತ್ತಿರುವುದಾಗಿ ಪ್ರಕಟಿಸಿದೆ.

ಇತ್ತಿಚೆಗೆ, ಬ್ರಿಟನ್ ನ ನ್ಯಾಯಾಲಯದಲ್ಲಿ ತೀರಾ ಅಪರೂಪದ ಪ್ರಕರಣಗಳಲ್ಲಿ ಈ ಲಸಿಕೆಯು ಅಡ್ಡಪರಿಣಾಮ ಉಂಟು ಮಾಡುತ್ತದೆ ಎಂದು ತಪ್ಪೊಪ್ಪಿಗೆ ವಿವರಣೆಯನ್ನು ಈ ಕಂಪನಿ ನೀಡಿತ್ತು. ಅದಾಗಿ, ಒಂದೇ ವಾರದಲ್ಲಿ ಜಗತ್ತಿನಲ್ಲೆಡೆಯಿಂದ ಕೋವಿಶೀಲ್ಡ್ ಲಸಿಕೆಯನ್ನು ಹಿಂಪಡೆಯುವುದಾಗಿ ಪ್ರಕಟಿಸಿದೆ. 2021ರ ನ. 16ರಂದು ಆ್ಯಸ್ಟ್ರಾಜೆನಿಕಾ ಸಂಸ್ಥೆ ಬಿಡುಗಡೆ ಮಾಡಿರುವ ದಾಖಲೆಗಳ ಪ್ರಕಾರ, ಜಗತ್ತಿನ ಮಧ್ಯಮ ಅಥವಾ ಕಡಿಮೆ ಆದಾಯವಿರುವ 130 ದೇಶಗಳಿಗೆ ತನ್ನ 17.5 ಕೋಟಿ ಡೋಸ್ ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿತ್ತು.

ಐರೋಪ್ಯ ರಾಷ್ಟ್ರಗಳಲ್ಲಿ ಈ ಲಸಿಕೆಯು ವ್ಯಾಕ್ಸ್ ಝೆವ್ರಿಯಾ ಎಂಬ ಹೆಸರಿನಲ್ಲಿ ವಿತರಣೆ ಮಾಡಲಾಗಿದ್ದು, ಭಾರತ ಹಾಗೂ ಇನ್ನೂ ಕೆಲವು ರಾಷ್ಟ್ರಗಳಲ್ಲಿ ಕೋವಿಶೀಲ್ಡ್ ಎಂಬ ಹೆಸರಲ್ಲಿ ವಿತರಿಸಲಾಗಿತ್ತು. ಬ್ರಿಟನ್ ನ ಪ್ರತಿಷ್ಠಿತ ಆಕ್ಸ್ ಫರ್ಡ್ ವಿದ್ಯಾಲಯ ಹಾಗೂ ಆ್ಯಸ್ಟ್ರಾಜೆನಿಕಾ ಕಂಪನಿಯು ಜಂಟಿಯಾಗಿ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದವು. 2020ರಲ್ಲಿ ಬಿಡುಗಡೆಯಾಗಿದ್ದ ಈ ಲಸಿಕೆಯನ್ನು ಎರಡು ಬಾರಿ ತೆಗೆದುಕೊಳ್ಳುವಂತೆ ಸೂಚಿಸಲಾಗಿತ್ತು. ಮೊದಲ ಡೋಸ್ ಪಡೆದ ನಂತರ ಈ ಲಸಿಕೆಯು ಕೊರೊನಾ ಸೋಂಕನ್ನು ತಡೆಗಟ್ಟುವಲ್ಲಿ ಶೇ. 77ರಷ್ಟು ಪರಿಣಾಮಕಾರಿಯಾಗಿರುತ್ತದೆ. ಆನಂತರ, ಎರಡನೇ ಡೋಸ್ ಪಡೆದಾದ ನಂತರ ಕೊರೊನಾವನ್ನು ತಡೆಗಟ್ಟಲು ಶೇ. 88ರಷ್ಟು ಪರಿಣಾಮಕಾರಿಯಾಗಿರಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದರು.

ಐರೋಪ್ಯ ರಾಷ್ಟ್ರಗಳಲ್ಲಿ ಈ ಲಸಿಕೆಯನ್ನು ಪಡೆದವರಲ್ಲಿ ಕೆಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದರಿಂದಾಗಿ ಹಲವಾರು ಮಂದಿ ಲಸಿಕೆಯ ಮೇಲೆ ಅನುಮಾನಪಟ್ಟು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅದರ ವಿಚಾರಣೆ ಇತ್ತೀಚಿನ ಕೆಲವು ವರ್ಷಗಳಿಂದ ನಡೆಯುತ್ತಿತ್ತು. ಕಳೆದ ವಾರ, ಬ್ರಿಟನ್ ನ್ಯಾಯಾಲಯದಲ್ಲಿ ಹೇಳಿಕೆಯನ್ನು ನೀಡಿರುವ ಕಂಪನಿಯ ಪ್ರತಿನಿಧಿಗಳು, ಈ ಲಸಿಕೆಯು ತೀರಾ ಅಪರೂಪದ ಪ್ರಕರಣಗಳಲ್ಲಿ ಟಿಟಿಎಸ್ (ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್) ಎಂಬ ಸಮಸ್ಯೆಯನ್ನು ಉಂಟು ಮಾಡುತ್ತದೆ. ಈ ಸಮಸ್ಯೆಯಿಂದ ಬಳಲುವವರಲ್ಲಿ ರಕ್ತದ ಪ್ಲೇಟ್ ಗಳ ಸಂಖ್ಯೆ ಇಳಿಮುಖವಾಗುತ್ತದೆ ಹಾಗೂ ರಕ್ತ ಹೆಪ್ಪುಗಟ್ಟುತ್ತದೆ ಎಂದು ಕಂಪನಿ, ನ್ಯಾಯಾಲಯಕ್ಕೆ ವಿವರಣೆ ನೀಡಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ