Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ರಾಷ್ಟ್ರಗಳಿಂದ ‘ಕೋವಿಶೀಲ್ಡ್ ಲಸಿಕೆ’ ವಾಪಸ್: ‘ಆ್ಯಸ್ಟ್ರಾಜೆನಿಕಾ’ ಘೋಷಣೆ

ಲಂಡನ್ 08: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಬಳಸಲಾಗಿದ್ದ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸಿದ್ದ ಬ್ರಿಟನ್ - ಸ್ವೀಡನ್ ಮೂಲದ ಬಹುರಾಷ್ಟ್ರೀಯ ಕಂಪನಿಯಾದ ಆಸ್ಟ್ರಾಜೆನಿಕಾ, ಜಗತ್ತಿನಾದ್ಯಂತ ತಾನು ಬಿಡುಗಡೆ ಮಾಡಿದ್ದ ಕೋವಿಶೀಲ್ಡ್ ಲಸಿಕೆಯನ್ನು ಹಿಂಪಡೆಯುತ್ತಿರುವುದಾಗಿ ಪ್ರಕಟಿಸಿದೆ.

ಇತ್ತಿಚೆಗೆ, ಬ್ರಿಟನ್ ನ ನ್ಯಾಯಾಲಯದಲ್ಲಿ ತೀರಾ ಅಪರೂಪದ ಪ್ರಕರಣಗಳಲ್ಲಿ ಈ ಲಸಿಕೆಯು ಅಡ್ಡಪರಿಣಾಮ ಉಂಟು ಮಾಡುತ್ತದೆ ಎಂದು ತಪ್ಪೊಪ್ಪಿಗೆ ವಿವರಣೆಯನ್ನು ಈ ಕಂಪನಿ ನೀಡಿತ್ತು. ಅದಾಗಿ, ಒಂದೇ ವಾರದಲ್ಲಿ ಜಗತ್ತಿನಲ್ಲೆಡೆಯಿಂದ ಕೋವಿಶೀಲ್ಡ್ ಲಸಿಕೆಯನ್ನು ಹಿಂಪಡೆಯುವುದಾಗಿ ಪ್ರಕಟಿಸಿದೆ. 2021ರ ನ. 16ರಂದು ಆ್ಯಸ್ಟ್ರಾಜೆನಿಕಾ ಸಂಸ್ಥೆ ಬಿಡುಗಡೆ ಮಾಡಿರುವ ದಾಖಲೆಗಳ ಪ್ರಕಾರ, ಜಗತ್ತಿನ ಮಧ್ಯಮ ಅಥವಾ ಕಡಿಮೆ ಆದಾಯವಿರುವ 130 ದೇಶಗಳಿಗೆ ತನ್ನ 17.5 ಕೋಟಿ ಡೋಸ್ ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿತ್ತು.

ಐರೋಪ್ಯ ರಾಷ್ಟ್ರಗಳಲ್ಲಿ ಈ ಲಸಿಕೆಯು ವ್ಯಾಕ್ಸ್ ಝೆವ್ರಿಯಾ ಎಂಬ ಹೆಸರಿನಲ್ಲಿ ವಿತರಣೆ ಮಾಡಲಾಗಿದ್ದು, ಭಾರತ ಹಾಗೂ ಇನ್ನೂ ಕೆಲವು ರಾಷ್ಟ್ರಗಳಲ್ಲಿ ಕೋವಿಶೀಲ್ಡ್ ಎಂಬ ಹೆಸರಲ್ಲಿ ವಿತರಿಸಲಾಗಿತ್ತು. ಬ್ರಿಟನ್ ನ ಪ್ರತಿಷ್ಠಿತ ಆಕ್ಸ್ ಫರ್ಡ್ ವಿದ್ಯಾಲಯ ಹಾಗೂ ಆ್ಯಸ್ಟ್ರಾಜೆನಿಕಾ ಕಂಪನಿಯು ಜಂಟಿಯಾಗಿ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದವು. 2020ರಲ್ಲಿ ಬಿಡುಗಡೆಯಾಗಿದ್ದ ಈ ಲಸಿಕೆಯನ್ನು ಎರಡು ಬಾರಿ ತೆಗೆದುಕೊಳ್ಳುವಂತೆ ಸೂಚಿಸಲಾಗಿತ್ತು. ಮೊದಲ ಡೋಸ್ ಪಡೆದ ನಂತರ ಈ ಲಸಿಕೆಯು ಕೊರೊನಾ ಸೋಂಕನ್ನು ತಡೆಗಟ್ಟುವಲ್ಲಿ ಶೇ. 77ರಷ್ಟು ಪರಿಣಾಮಕಾರಿಯಾಗಿರುತ್ತದೆ. ಆನಂತರ, ಎರಡನೇ ಡೋಸ್ ಪಡೆದಾದ ನಂತರ ಕೊರೊನಾವನ್ನು ತಡೆಗಟ್ಟಲು ಶೇ. 88ರಷ್ಟು ಪರಿಣಾಮಕಾರಿಯಾಗಿರಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದರು.

ಐರೋಪ್ಯ ರಾಷ್ಟ್ರಗಳಲ್ಲಿ ಈ ಲಸಿಕೆಯನ್ನು ಪಡೆದವರಲ್ಲಿ ಕೆಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದರಿಂದಾಗಿ ಹಲವಾರು ಮಂದಿ ಲಸಿಕೆಯ ಮೇಲೆ ಅನುಮಾನಪಟ್ಟು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅದರ ವಿಚಾರಣೆ ಇತ್ತೀಚಿನ ಕೆಲವು ವರ್ಷಗಳಿಂದ ನಡೆಯುತ್ತಿತ್ತು. ಕಳೆದ ವಾರ, ಬ್ರಿಟನ್ ನ್ಯಾಯಾಲಯದಲ್ಲಿ ಹೇಳಿಕೆಯನ್ನು ನೀಡಿರುವ ಕಂಪನಿಯ ಪ್ರತಿನಿಧಿಗಳು, ಈ ಲಸಿಕೆಯು ತೀರಾ ಅಪರೂಪದ ಪ್ರಕರಣಗಳಲ್ಲಿ ಟಿಟಿಎಸ್ (ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್) ಎಂಬ ಸಮಸ್ಯೆಯನ್ನು ಉಂಟು ಮಾಡುತ್ತದೆ. ಈ ಸಮಸ್ಯೆಯಿಂದ ಬಳಲುವವರಲ್ಲಿ ರಕ್ತದ ಪ್ಲೇಟ್ ಗಳ ಸಂಖ್ಯೆ ಇಳಿಮುಖವಾಗುತ್ತದೆ ಹಾಗೂ ರಕ್ತ ಹೆಪ್ಪುಗಟ್ಟುತ್ತದೆ ಎಂದು ಕಂಪನಿ, ನ್ಯಾಯಾಲಯಕ್ಕೆ ವಿವರಣೆ ನೀಡಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ