Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನ್ನದಾತರ ಆಕ್ರೋಶ, ತಹಶೀಲ್ದಾರರಿಗೆ ತರಾಟೆ, ಅಧಿಕಾರಿಗಳಿಗೆ ರೈತರ ಗಡುವು


ಧಾರವಾಡ: ರೈತರ ಪಿತ್ರಾರ್ಜಿತ ಜಮೀನಿನಲ್ಲಿ ವಕ್ಫ ಆಸ್ತಿ ಎಂದು ನಮೂದಾಗಿರುವುದನ್ನು ವಿರೋಧಿಸಿ ಧಾರವಾಡ ತಹಶೀಲ್ದಾರ ಕಚೇರಿ ಎದುರು ಉಪ್ಪಿನ ಬೆಟಗೇರಿ ಗ್ರಾಮದ ರೈತರು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.


ಈ ಪ್ರತಿಭಟನೆಯಲ್ಲಿ ಅಧಿಕಾರಿಗಳನ್ನು ರೈತರು ಏಕವಚನದಲ್ಲೇ ತರಾಟೆಗೆ ತೆಗೆದುಕೊಳ್ಳುವ ಮೂಲಕ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಪಿತ್ರಾರ್ಜಿತ ಆಸ್ತಿಗೆ ವಕ್ಫ ಆಸ್ತಿ ಎಂದು ಹೇಗೆ ನಮೂದಾಯಿತು? ಇದರಲ್ಲಿ ಸರ್ಕಾರ ಮತ್ತು ಅಧಿಕಾರಿಗಳ ಕೈವಾಡ ಇಲ್ಲದೇ ಈ ರೀತಿಯ ತಪ್ಪು ನಡೆಯಲು ಸಾಧ್ಯವೇ ಇಲ್ಲ. ಇದೇ ರೀತಿ ಹಿಂದೂಗಳ ಆಸ್ತಿ ವಕ್ಫ ಆಸ್ತಿ ಎಂದು ಹೇಳುತ್ತ ಹೊರಟರೆ ಆಯುಧ ಪೂಜೆಗೆ ಇಟ್ಟ ಆಯುಧಗಳನ್ನು ನಾವೂ ಹೊರಗೆ ತೆಗೆಯಬೇಕಾಗುತ್ತದೆ. ಪಹಣಿ ಪತ್ರಿಕೆಯಲ್ಲಿ ವಕ್ಫ ಆಸ್ತಿ ಎಂದು ನಮೂದು ಮಾಡುವಾಗ ರೈತರಿಗೆ ಹೇಳಿಲ್ಲ. ನೋಟಿಸ್ ಕೊಟ್ಟಿಲ್ಲ. ಹೇಳದೇ ಕೇಳದೇ ಅದನ್ನು ನಮೂದಿಸಲಾಗಿದೆ. ಹೇಗೆ ನಮೂದು ಮಾಡಿದ್ದೀರೋ ಹಾಗೇ ಅದನ್ನು ತೆಗೆದು ಹಾಕಬೇಕು. ಜಿಲ್ಲಾಧಿಕಾರಿಗಳು ಕರೆದಾಗ ನಾವ್ಯಾಕೆ ಹೋಗಬೇಕು? ಜಿಲ್ಲಾಧಿಕಾರಿಗಳೇ ರೈತರ ಬಳಿ ಬಂದು ಸಮಸ್ಯೆ ಬಗೆಹರಿಸಿಕೊಡಬೇಕು ಎಂದು ರೈತರು ಎಚ್ಚರಿಕೆ ನೀಡಿದರು.


ಸ್ಥಳದಲ್ಲೇ ಧಾರವಾಡ ತಹಶೀಲ್ದಾರ ಅವರನ್ನು ರೈತರು ತೀವ್ರ ತರಾಟೆಗೆ ತೆಗೆದುಕೊಂಡರು. ವಕ್ಫ ಹೆಸರು ತೆಗೆದು ಹಾಕಲು ಅರ್ಜಿ ಕೊಟ್ಟರೂ ರೈತರನ್ನು ನೀವು ಐದಾರು ತಿಂಗಳುಗಟ್ಟಲೇ ಅಲೆದಾಡಿಸಿದ್ದೀರಿ. ಎಸಿ ಅವರು ರೈತರಿಗೆ ಮರ್ಯಾದೆ ಇಲ್ಲದಂತೆ ಮಾತನಾಡಿದ್ದಾರೆ. ಈ ರೀತಿಯ ವರ್ತನೆಯನ್ನು ರೈತರ ಮೇಲೆ ತೋರಿದರೆ ಬಾರಕೋಲಿನ ಮೂಲಕ ನಿಮಗೆ ಉತ್ತರ ಕೊಡಬೇಕಾಗುತ್ತದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುವ ಮೂಲಕ ಎಚ್ಚರಿಕೆ ನೀಡಿದರು. ಬರುವ ನ.5 ರಂದು ಜಿಲ್ಲಾಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ತಹಶೀಲ್ದಾರ ದೊಡ್ಡಪ್ಪ ಹೂಗಾರ ಮಾಹಿತಿ ನೀಡಿದರು.


ಸುಮಾರು 2 ಗಂಟೆಗೂ ಹೆಚ್ಚು ಕಾಲ ರೈತರು ತಹಶೀಲ್ದಾರ ಕಚೇರಿ ಎದುರು ಧರಣಿ ನಡೆಸಿದರು. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರೈತರು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರೈತರು, ತಮ್ಮ ಪಹಣಿಯಲ್ಲಿ ನಮೂದಾಗಿರುವ ವಕ್ಫ ಆಸ್ತಿ ಎಂಬ ಹೆಸರನ್ನು ಕೂಡಲೇ ತೆಗೆದು ಹಾಕಬೇಕು ಎಂದು ಎಚ್ಚರಿಕೆ ನೀಡಿದರು. ರೈತರ ಈ ಹೋರಾಟಕ್ಕೆ ಮಾಜಿ ಶಾಸಕರಾದ ಅಮೃತ ದೇಸಾಯಿ, ಸೀಮಾ ಮಸೂತಿ ಹಾಗೂ ಬಿಜೆಪಿ ಮುಖಂಡರಾದ  ಸವಿತಾ ಅಮರಶೆಟ್ಟಿ ಸೇರಿದಂತೆ ಅನೇಕರು ಬೆಂಬಲ ಸೂಚಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ