Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೊಟ

ಬಳ್ಳಾರಿ, ಮೇ,21.- ವೀ.ವಿ.ಸಂಘದ ಪ್ರತಿಷ್ಠಿತ ವೀರಶೈವ ಮಹಾವಿದ್ಯಾಲಯದ  ದೈಹಿಕ ಶಿಕ್ಷಣ ಮತ್ತು ಕ್ರಿಡಾ ವಿಭಾಗದಿಂದ ನಿನ್ನೆ ಬೆಳಗ್ಗೆ 9.00 ಗಂಟೆಗೆ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವೀರಶೈವ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ  ಸಾಹುಕಾರ್‍ಸತೀಶ್ ಬಾಬು  ವಹಿಸಿದ್ದರು. ವಾರ್ಷಿಕ ಕ್ರೀಡಾ ಕೂಟವನ್ನು ಉದ್ದೇಶಿಸಿ ವಿದ್ಯಾರ್ಥಿಗಳಿಗೆ “ಸದೃಢ ದೇಹದಲ್ಲಿ ಸದೃಢ ಮನಸ್ಸು” ಎಂದು ತಿಳಿಸಿದರು. 
ವಿಎಸ್ ಕೆ ವಿವಿ ಕುಲಸಚಿವ ಪ್ರೋ.ಎನ್.ಎಂ.ಸಾಲಿ ಯವರು ಕ್ರೀಡಾಕೂಟವನ್ನು ಉದ್ಘಾಟಸಿ ಮಾತನಾಡುತ್ತ ಎಲ್ಲಾ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯತೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ.ಜಿ.ಮಲ್ಲನಗೌಡ ಇವರು ಪ್ರಾಸ್ತಾವಿಕ ನುಡಿ ಮಾತನಾಡಿದರು.
ಈ ಕಾರ್ಯಕ್ರಮದ ವೇದಿಕೆಯಲ್ಲಿ ಹೆಚ್.ಪಿ.ಜಯಪ್ರಕಾಶ್ ಗೌಡ, ಹೆಚ್.ಚಂದ್ರಶೇಖರ್ ಗೌಡ, ಡಾ.ಶಶಿದರ್.ಎ.ಕೆಲ್ಲೂರು  ಉಪಸ್ಥಿತರಿದ್ದರು. 
ಈ ಕಾರ್ಯಕ್ರಮಕ್ಕೆ ವೀರಶೈವ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರುಗಳಾದ ಎಸ್.ವೆಂಕಟೇಶ್‍ಗೌಡ,  ಕಾರದಪುಡಿ ಮುದ್ದನಗೌಡ,  ಅಕ್ಕಿ ಶಿವರಾಜ್ ಮತ್ತು  ಡಿ.ನಂಜುಂಡಪ್ಪ ಮತ್ತು ವೀರಶೈವ ಪದವಿ ಪೂರ್ವ ಕಾಲೇಜಿನ ಸದಸ್ಯರಾದ  ಮಹೇಶ್‍ಶ್ವರ ಸ್ವಾಮಿ  ರವರು ಭಾಗವಹಿಸಿದ್ದರು. ವೀರಶೈವ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು 400ಕ್ಕು ಹೆಚ್ಚು ವಿದ್ಯಾರ್ಥಿಗಳು ವಾರ್ಷಿಕ ಕ್ರಿಡಾ ಕೂಟದಲ್ಲಿ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಕವಿತಾ ಸಂಗನಗೌಡ.ಎಂ ರವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಡಾ ಶರಣಬಸವ, ಮುಖ್ಯಸ್ಥರು ಸಸ್ಯಶಾಸ್ತ್ರ ವಿಭಾಗ ಇವರು ಸ್ವಾಗತಿಸಿದರು. ಡಾ.ವಿನೋದಕುಮಾರ, ಐ.ಕ್ಯೂ.ಎ.ಸಿ, ಸಂಯೋಜಕರು ಇವರು ಪ್ರತಿಜ್ಞಾ ವಿಧಿ ಬೋಧಿಸಿದರು. ಕುಮಾರಿ.ರೇಖಾಶ್ರಿ.ಎಸ್. ಉಪನ್ಯಾಸಕರು, ಸಸ್ಯಶಾಸ್ರ್ತ ವಿಭಾಗ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ