ಏತನ್ಮಧ್ಯೆ, ಅಧಿಕಾರ ಹಂಚಿಕೆ ತಿಕ್ಕಾಟದ ಅಂತಿಮ ನಿರ್ಧಾರ ಈಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಭಾನುವಾರ ಮಹತ್ವದ ಸಭೆ ನಡೆದಿದ್ದು, ಪರಿಹಾರ ಸೂಚಿಸುವಂತೆ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು ತುಸು ಮಟ್ಟಿಗೆ ಶಮನಗೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ. ಖರ್ಗೆ ಕರ್ನಾಟಕದವರೇ ಆಗಿರುವುದರಿಂದ ಯಾವುದೇ ಏಕಪಕ್ಷೀಯ ಅಥವಾ ಪಕ್ಷಪಾತ ನಿರ್ಧಾರವಾಗಿ ಹೋಗದಂತೆ ನೋಡಿಕೊಳ್ಳಲು ಎಲ್ಲ ಉನ್ನತ ಮಟ್ಟದ ನಾಯಕರನ್ನು ಜತೆ ಕರೆದು ಚರ್ಚಿಸಲು ಮುಂದಾಗಿದ್ದಾರೆ.