Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು






ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ  ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.



ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.


ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

 



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ