Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಮತ್ತೊಂದು ವಿನೂತನ ಕಾರ್ಯಕ್ರಮ; ಸರಣಿ ಕಾರ್ನರ್ ಮೀಟಿಂಗ್

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿನೂತನ ಕಾರ್ಯಕ್ರಮಗಳ ಮೂಲಕ ಜನ ಮನ ಗೆದ್ದಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇದೀಗ ಮತ್ತೊಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದಾರೆ. ತಾವೇ ಖುದ್ದಾಗಿ ಗ್ರಾಮಗಳಿಗೆ ತೆರಳಿ ಅಲ್ಲಿನ ಮುಖಂಡರ ಜೊತೆ ಕುಳಿತು ಸಮಸ್ಯೆ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿ ಪರಿಹಾರ ಕಂಡು ಹಿಡಿಯುವ ವಿಶಿಷ್ಟ ಕಾರ್ಯಕ್ರಮವಿದು.

ಸೋಮವಾರ ಬೆಳಗ್ಗೆ ಹಿಂಡಲಗಾ ಗ್ರಾಮಕ್ಕೆ ತೆರಳಿದ ಸಚಿವರು, ಗ್ರಾಮದ ಲಕ್ಷ್ಮೀ ನಗರ, ವಿನಾಯಕ ನಗರ ಹಾಗೂ ಮಾಂಜ್ರೇಕರ್ ಕಾಲೋನಿಗಳಲ್ಲಿ ಸ್ಥಳೀಯ ಮುಖಂಡರನ್ನು ಸೇರಿಸಿ ಸಭೆಗಳನ್ನು ನಡೆಸಿದರು. ಸ್ಥಳೀಯ ಸಮಸ್ಯೆಗಳ ಕುರಿತು ಸಮಾಲೋಚನೆ ನಡಸಿದ ಸಚಿವರು, ಆ ಭಾಗದಲ್ಲಿ ಆಗಬೇಕಿರುವ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ಪಡೆದರು.
ಲಕ್ಷ್ಮೀ ನಗರದ ಸಮರ್ಥ ಕಾಲೋನಿಯ ಮುಖಂಡರಾದ ಅರ್ಜುನ ಪಾಟೀಲ ಇವರ ಮನೆಯಲ್ಲಿ ಸಭೆ ನಡೆಸಿ, ಸ್ಥಳೀಯ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ, ಪರಿಹಾರ ಸೂಚಿಸಿದರು.

ಸಭೆಯಲ್ಲಿ ಅರ್ಜುನ ಪಾಟೀಲ, ಯುವರಾಜ ಕದಂ, ವಿಠ್ಠಲ ದೇಸಾಯಿ, ರಾಹುಲ್ ಉರನಕರ್, ಗಜಾನನ ಬಾಂಡೇಕರ್, ಪ್ರವೀಣ ಪಾಟೀಲ, ಅಶೋಕ ಕಾಂಬಳೆ, ಪ್ರೇರಣಾ ಮಿರಜಕರ್, ಅಲ್ಕಾ ಕಿತ್ತೂರ್, ಸೀಮಾ ದೇವಕರ್, ಸ್ನೇಹಾ, ಕಿರಣ ಲೋಬೊ, ಅರ್ಜುನ ಪಾಟೀಲ, ಸಂದೇಶ ಅವೊಂಡ್ಕರ್, ವಾಸಂತಿ ಹನುಮಸೇಠ್, ಅಶ್ವಿನಿ ದೇಸಾಯಿ ಉಪಸ್ಥಿತರಿದ್ದರು.

ನಂತರ ವಿನಾಯಕ ನಗರದ ಮುಖಂಡರಾದ ಶಿವಾಜಿ ಅತವಾಡ್ಕರ್ ಅವರ ಮನೆಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಿವಾಜಿ ಅತವಾಡ್ಕರ್, ಯುವರಾಜ ಕದಂ, ವಿಠ್ಠಲ ದೇಸಾಯಿ, ರಾಹುಲ್ ಉರನಕರ್, ಡಿ.ಬಿ.ಪಾಟೀಲ, ಶಿವಾಜಿ ಬಾಂಡಿವಾಲೆ, ಡಾ.ಗಾಂವ್ಕರ್, ಅನಿಲ ಅತವಾಡ್ಕರ್, ಜಾಧವ್ ಸರ್, ಚಿಕ್ಕೊರ್ದೆ ಸರ್, ಗಜಾನನ ಬಾಂಡೆಕರ್, ಮಧುಕರ್ ಚಾವಲೇಕರ್ ಉಪಸ್ಥಿತರಿದ್ದರು.
ಇದಾದ ನಂತರ ಮಾಂಜ್ರೆಕರ್ ಕಾಲೋನಿಯ ಮುಖಂಡರಾದ ಗಜಾನನ ಕಾಕತ್ಕರ್ ಅವರ ಮನೆಯಲ್ಲಿ ಸಭೆ ನಡೆಸಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸುವ ಬಗ್ಗೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಗಜಾನನ ಕಾಕತ್ಕರ್, ಯುವರಾಜ ಕದಂ, ವಿಠ್ಠಲ ದೇಸಾಯಿ, ಪ್ರವೀಣ ಪಾಟೀಲ, ಅಶೋಕ ಕಾಂಬಳೆ, ಗಜಾನನ ಬಾಂಡೇಕರ್, ಕೃಷ್ಣ ಪಾವಸೆ, ರಮಾಕಾಂತ ಪಾವಸೆ, ಶ್ರೀಕಾಂತ ಜಾಧವ್, ವಿಠ್ಠಲ ಬೆಳಗುಂದಕರ್ ಉಪಸ್ಥಿತರಿದ್ರು.
ಮನೆ ಬಾಗಿಲಿಗೆ ಆಗಮಿಸಿ ಸಮಸ್ಯೆಗಳನ್ನು ಅರಿತು, ಪರಿಹರಿಸುವ ಸಚಿವರ ವಿಶಿಷ್ಟ ಕಾರ್ಯಕ್ರಮಕ್ಕೆ ಸ್ಥಳೀಯ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮಂತ್ರಿಗಳನ್ನು ಭೇಟಿ ಮಾಡುವುದೇ ಕಷ್ಟ ಎನ್ನುವ ಸ್ಥಿತಿ ಇರುವ ಸಂದರ್ಭದಲ್ಲಿ ಸಚಿವರೊಬ್ಬರು ಈ ರೀತಿ ಮನೆ ಬಾಗಿಲಿಗೇ ಬಂದು ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಮಸ್ಯೆಗಳನ್ನು ನಿವಾರಿಸಲು ಮುಂದಾಗಿರುವದಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ