Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಛತ್ತೀಸ್ ಘಡದಲ್ಲಿ ಮತ್ತೊಂದು ನಕ್ಸಲ್ ಅಡಗುದಾಣ: ಸ್ಫೋಟಕ, ಶಸ್ತ್ರಾಸ್ತ್ರ ವಶಕ್ಕೆ




ರಾಯ್ ಪುರ,ಏಪ್ರಿಲ್​ 08:  ಛತ್ತೀಸ್ ಘಡದಲ್ಲಿ ಮತ್ತೊಂದು ನಕ್ಸಲ್ ಅಡಗುದಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಕ್ಸಲರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಛತ್ತೀಸಗಢದ ಸುಖ್ಮಾ ಜಿಲ್ಲೆಯ ಎರಡು ಕಡೆಗಳಲ್ಲಿ ನಕ್ಸಲ ಅಡಗುದಾಣಗಳನ್ನು ಭದ್ರತಾ ಪಡೆಗಳು ಪತ್ತೆ ಮಾಡಿದ್ದು, ಇಲ್ಲಿ ನಕ್ಸಲರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕವನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಸಿಆರ್‌ಪಿಎಫ್, ಕೋಬ್ರಾ ಮತ್ತು ಬಸ್ತಾರ್ ಬೆಟಾಲಿಯನ್‌ಗಳ ಜಂಟಿ ಕಾರ್ಯಾಚರಣೆ ನಡೆಸಿ ಕಿಸ್ತರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ತೊಂಡಮಾರ್ಕ ಮತ್ತು ಡಬ್ಬಮಾರ್ಕ ಹಳ್ಳಿಗಳಲ್ಲಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸೇನಾ ಮೂಲಗಳ ಪ್ರಕಾರ ದಾಳಿ ವೇಳೆ 350 ಗ್ರಾಂ ಜಿಲೆಟಿನ್ ಸ್ಟಿಕ್ಸ್, 105 ಎಲೆಕ್ಟ್ರಿಕ್ ಡೆಟೊನೇಟರ್ಸ್, ಬ್ಯಾರೆಲ್ ಗ್ರೆನೇಡ್ ಲಾಂಚರ್(ಬಿಜಿಎಲ್), 22 ಬಿಜಿಎಲ್ ಪ್ರೊಜೆಕ್ಟರ್‌ಗಳು, 19 ಬಿಜಿಎಲ್ ಬಾಂಬ್‌ಗಳು, 5 ಕೆ.ಜಿ ತೂಕದ ಸುಧಾರಿತ ಸ್ಫೋಟಕ ಸಾಧನ, 30 ಕೆ.ಜಿ ಗನ್ ಪೌಡರ್ ಮತ್ತು ಮಾವೋವಾದಿಗಳ ಬರಹವಿರುವ ಪುಸ್ತಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*