Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ವಿರೋಧಿ ಕಾಂಗ್ರೆಸ್ ಸಂಸ್ಕೃತಿ: ಸಿದ್ದನಗೌಡರ 

ಬೆಳಗಾವಿ: ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದ ನಾಯಕರು ಸದಾ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಮೂಲ ಮಂತ್ರವಾಗಿದೆ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಅಕ್ರೋಶವ್ಯಕ್ತ ಪಡಿಸಿದರು.


ಮಂಗಳವಾರ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ  ಅವರು, ಕಾಂಗ್ರೆಸ್ಸಿನ ಮನಸ್ಥಿತೆಯೆ ಸಂವಿಧಾನ ವಿರೋಧಿ ಮಾನಸಿಕತೆ ಹೊಂದಿದೆ. 370ನೇ ವಿಧಿಯನ್ನು ಡಾ. ಅಂಬೇಡ್ಕರರು ವಿರೋಧಿಸಿದ್ದರು. ನೆಹರೂ ಇದೇ ವಿಧಿಯನ್ನು ಜಾರಿಗೊಳಿಸಿದರು. ಸಂವಿಧಾನದಲ್ಲಿ ಡಾ. ಅಂಬೇಡ್ಕರರು ಸೇರಿಸಿದ್ದ ಸಮಾನ ನಾಗರಿಕ ಸಂಹಿತೆಯನ್ನು ಇವತ್ತಿನವರೆಗೂ ಅವರು ಅದನ್ನು ಅನುಷ್ಠಾನಕ್ಕೆ ತಂದಿಲ್ಲ; ಬಿಜೆಪಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಮುಂದಾದರೆ ವಿರೋಧಿಸುತ್ತಾರೆ. ಕಾಂಗ್ರೆಸ್ಸಿನ ಮಾನಸಿಕ ಸ್ಥಿತಿಯೆ  ರಾಜ್ಯ ಕಾಂಗ್ರೆಸ್  ಅಧ್ಯಕ್ಷ, ಡಿಸಿಎಮ್ ಡಿ.ಕೆ.ಶಿವಕುಮಾರರು ತಮ್ಮ  ಸಂದರ್ಶನದಲ್ಲಿ  ಮುಸ್ಲಿಂ ಧರ್ಮಾದಾರಿತ ಮೀಸಲಾತಿಗಾಗಿ  ಸಂವಿಧಾನ ಬದಲಿಸುವ ಮಾತನಾಡಿದ್ದಾರೆ.


 ಸಂವಿಧಾನದ  ಉಳಿವಿಗಾಗಿ ಕಾಂಗ್ರೆಸ್ ಹಠಾವೋ ಅಂದೋಲನ ನಡೆದಿದೆ. ಧರ್ಮಾದ ಆಧಾರಿತ ಶೇ 4 ಮೀಸಲಾತಿ  ಸಂವಿಧಾನಕ್ಕೆ ವಿರುದ್ಧವಾದುದು. ಆ ನಿಲುವನ್ನು ಯಾವಾಗ ಇವರ ಸಚಿವಸಂಪುಟ ಅನುಮೋದಿಸಿತೋ, ಕಾಂಗ್ರೆಸ್ಸಿಗೆ ಬಹುಮತ ಇದೆ ಎಂದು ಯಾವಾಗ ಅದನ್ನು ಬೆಂಬಲಿಸಿದರೋ ಆಗಲೇ ಇವರ ನಿಲುವೇನೆಂದು ಗೊತ್ತಾಗಿದೆ. ಸಂವಿಧಾನವನ್ನು ಬದಲಿಸಿ ಆದರೂ ಮತೀಯ ಆಧಾರಿತ ಮೀಸಲಾತಿ ಕೊಡುವುದೇ ಇವರ ನಿಲುವೆಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.


ಮತಬ್ಯಾಂಕ್ ರಾಜಕಾರಣಕ್ಕೆ..ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಒಂದು ಭಾಷಣದಲ್ಲಿ ಈ ದೇಶದ ಸಂಪತ್ತನ್ನು ದೇಶದಲ್ಲಿರುವ ಬಡವರಿಗೆ ಹಂಚುತ್ತೇನೆ ಎನ್ನಲಿಲ್ಲ; ಬದಲಾಗಿ ಈ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ ಎಂದರು. ಈಗ ಮತಾಧಾರಿತ ಮೀಸಲಾತಿಯನ್ನು ಸಂವಿಧಾನ ಒಪ್ಪಿಲ್ಲ ಎಂದು ಗೊತ್ತಿದ್ದು ಕೂಡ ಸಂವಿಧಾನದ ಬಗ್ಗೆ ಬಹಳ ಜ್ಞಾನ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತಬ್ಯಾಂಕ್ ರಾಜಕಾರಣಕ್ಕೆ ಸಂವಿಧಾನದ ವಿರುದ್ಧವಾದ ಮತೀಯ ಆಧಾರಿತ ಮೀಸಲಾತಿ ತಂದಿದ್ದಾರೆ.


ಡಿ.ಕೆ.ಶಿವಕುಮಾರ್ ಅವರು ಹೇಳಿದ್ದನ್ನು ಬೇರೆ ಪಕ್ಷದವರು ಹೇಳಿದ್ದರೆ ಇಷ್ಟೊತ್ತಿಗೆ ರಾಜ್ಯದಲ್ಲಿ‌ ಕಾಂಗ್ರೆಸ್ ನಾಯಕರು ಬೆಂಕಿ ಬಿರುಗಾಳಿ ಒಂದೆ ಮಾಡುತ್ತಿದ್ದರು. ಧರ್ಮಾಧಾರಿತ ಮೀಸಲಾತಿಯನ್ನು ಒಂದು ವೇಳೆ ನ್ಯಾಯಾಲಯ ಒಪ್ಪದಿದ್ದರೆ ನಾವು ಸಂವಿಧಾನ ಬದಲಾಯಿಸುತ್ತೇವೆ ಎಂಬ ಮಾತನ್ನು ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದು ಸಾಮಾಜಿಕ‌ ಜಾಲತಾಣದಲ್ಲಿ ಇದೆ ಇದನ್ನು ಮರೆತು ನನ್ನ ಹೇಳಿಕೆ ತಿರುಚಲಾಗಿದೆ ಎನ್ನುವದು ಹಾಸ್ಯಾಸ್ಪದ ಎಂದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ