Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಭೇಟಿಯಲ್ಲಿ ರೈಲು ಅಭಿವೃದ್ಧಿಗೆ ಮನವಿ






ಬಳ್ಳಾರಿ: 16..ಉತ್ತರ ಕರ್ನಾಟಕದ ರೈಲು ಸಂಪರ್ಕವನ್ನು ವಿಸ್ತರಿಸುವ ಹಾಗೂ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯ ನಿಯೋಗವು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಸದಸ್ಯರಾದ ಬಸವರಾಜ್ ಬೋಮ್ಮಯಿ ಮತ್ತು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾದ ಶೊಭ ಕರಂದ್ಲಜೆ ಅವರನ್ನು ಮಾರ್ಚ್ 11ರಂದು ನವದೆಹಲಿಯಲ್ಲಿ ಭೇಟಿ ಮಾಡಿ ವಿವಿಧ ಪ್ರಮುಖ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿತು.


ಬಳ್ಳಾರಿ, ಸಿರುಗುಪ್ಪ ಹಾಗೂ ಸಿಂಧನೂರು ಭಾಗದ ಜನತೆಗೆ ಬಹು ವರ್ಷಗಳಿಂದ ನಿರೀಕ್ಷೆಯಲ್ಲಿರುವ ಬಳ್ಳಾರಿ–ಸಿರುಗುಪ್ಪ–ಸಿಂಧನೂರು ನೂತನ ರೈಲು ಮಾರ್ಗವನ್ನು ತಕ್ಷಣ ಪ್ರಾರಂಭಿಸಬೇಕೆಂದು ನಿಯೋಗವು ಮನವಿ ಮಾಡಿತು. ಈ ರೈಲು ಮಾರ್ಗ ಆರಂಭವಾದರೆ ಉತ್ತರ ಕರ್ನಾಟಕದ ಅನೇಕ ಗ್ರಾಮೀಣ ಪ್ರದೇಶಗಳಿಗೆ ರೈಲು ಸಂಪರ್ಕ ದೊರೆಯುವ ಜೊತೆಗೆ ಕೃಷಿ, ವ್ಯಾಪಾರ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ದೊಡ್ಡ ಉತ್ತೇಜನ ದೊರೆಯಲಿದೆ ಎಂದು ನಿಯೋಗ ಸದಸ್ಯರು ವಿವರಿಸಿದರು.


ಇದಕ್ಕೆ ಜೊತೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಹೋಗಿ ಬರಲು ಪ್ರತಿದಿನವೂ ವೇಗವಾದ ಮತ್ತು ಸುಗಮವಾದ ರೈಲು ಸೇವೆ ಅಗತ್ಯವಿರುವುದರಿಂದ ಜನಶತಾಬ್ದಿ ಅಥವಾ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ಮನವಿ ಮಾಡಲಾಯಿತು. ಬಳ್ಳಾರಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ವ್ಯಾಪಾರಿಗಳು ಬೆಂಗಳೂರಿಗೆ ಪ್ರಯಾಣಿಸಲು ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ನಿಯೋಗ ಅಭಿಪ್ರಾಯಪಟ್ಟಿತು.


ಇದರೊಂದಿಗೆ ವಿವಿಧ ಕಾರಣಗಳಿಂದ ನಿಲುಗಡೆಯಾಗಿರುವ ಕೆಲವು ಪ್ರಮುಖ ರೈಲು ಸೇವೆಗಳನ್ನು ಪುನರಾರಂಭಿಸುವಂತೆ ಕೂಡ ಮನವಿ ಮಾಡಲಾಯಿತು. ವಿಶೇಷವಾಗಿ ಕೊಲ್ಲಾಪುರ–ಹುಬ್ಬಳ್ಳಿ–ಮುನೂಗುರು ರೈಲು ಸೇವೆ ಹಾಗೂ ಶಿವಮೊಗ್ಗ–ಚಿತ್ರದುರ್ಗ–ಬಳ್ಳಾರಿ–ಚೆನ್ನೈ ರೈಲು ಸೇವೆಗಳನ್ನು ಮತ್ತೆ ಆರಂಭಿಸುವಂತೆ ನಿಯೋಗ ಒತ್ತಾಯಿಸಿತು. ಈ ರೈಲುಗಳು ಆರಂಭವಾದರೆ ರಾಜ್ಯದ ವಿವಿಧ ಭಾಗಗಳ ನಡುವಿನ ಸಂಪರ್ಕ ಮತ್ತಷ್ಟು ಸುಗಮವಾಗಲಿದೆ ಎಂದು ಅವರು ವಿವರಿಸಿದರು.


ನಿಯೋಗದ ಮನವಿಯನ್ನು ಗಮನದಿಂದ ಆಲಿಸಿದ ಬಸವರಾಜ್ ಬೊಮ್ಮಯಿ  ಮತ್ತು ಶೊಭ ಕರಂದ್ಲಜೆ ಅವರು, ಈ ಬೇಡಿಕೆಗಳ ಬಗ್ಗೆ ಕೇಂದ್ರ ರೈಲ್ವೆ ಸಚಿವಾಲಯದ ಗಮನಕ್ಕೆ ತರಲಾಗುವುದು ಹಾಗೂ ರೈಲ್ವೆ ಸಚಿವರಿಗೆ ಶಿಫಾರಸು ಪತ್ರ ನೀಡಲಾಗುವುದು ಎಂದು ಭರವಸೆ ನೀಡಿದರು. ಜನರಿಗೆ ಅನುಕೂಲವಾಗುವಂತಹ ಯೋಜನೆಗಳಿಗೆ ತಾವು ಸದಾ ಸಹಕಾರ ನೀಡುವುದಾಗಿ ಅವರು ತಿಳಿಸಿದರು.


ಭೇಟಿಯ ವೇಳೆ ಸುಮಾರು 25 ಸದಸ್ಯರ ನಿಯೋಗ ಭಾಗವಹಿಸಿತ್ತು. ನಿಯೋಗದ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಇಬ್ಬರು ನಾಯಕರು ಡ್ರೈಫ್ರೂಟ್ಸ್ ಹಾಗೂ ಕಾಫಿ ನೀಡಿ ಆತಿಥ್ಯ ವಹಿಸಿ, ಅವರೊಂದಿಗೆ ಸ್ನೇಹಪೂರ್ವಕವಾಗಿ ಮಾತುಕತೆ ನಡೆಸಿದರು. ನಿಯೋಗ ಸದಸ್ಯರು ತಮ್ಮ ಬೇಡಿಕೆಗಳನ್ನು ವಿವರವಾಗಿ ಮಂಡಿಸಿದ ನಂತರ ಮನವಿ ಪತ್ರವನ್ನು ಸ್ವೀಕರಿಸಿದರು.


ಇದಕ್ಕೂ ಮುನ್ನ ಇದೇ ಬೇಡಿಕೆಗಳ ಕುರಿತು ನಿಯೋಗವು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಚರ್ಚಿಸಿ ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು. ರಾಜ್ಯದ ಹಲವು ಭಾಗಗಳಲ್ಲಿ ರೈಲು ಸಂಪರ್ಕವನ್ನು ವಿಸ್ತರಿಸುವ ಅಗತ್ಯವಿರುವುದರಿಂದ ಸರ್ಕಾರವು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಸದಸ್ಯರು ಆಗ್ರಹಿಸಿದರು.


ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯ ನಿಯೋಗವು ಮುಂದಿನ ದಿನಗಳಲ್ಲಿಯೂ ವಿವಿಧ ಜನಪ್ರತಿನಿಧಿಗಳು ಹಾಗೂ ರೈಲ್ವೆ ಅಧಿಕಾರಿಗಳನ್ನು ಭೇಟಿ ಮಾಡಿ ಈ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ