Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ ಗ್ರೂಪ್ ನೌಕರರ ನೇಮಕಕ್ಕೆ ಮನವಿ 

ಬಳ್ಳಾರಿ,ಮೇ.೧೫: ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದಲ್ಲಿ ಡಿ ಗ್ರೂಪ್ ನೌಕರರನ್ನು ಹೆಚ್ಚಳ ಮಾಡುವಂತೆ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕರಿಗೆ ಎಐಯುಟಿಯುಸಿಗೆ ಸಂಯೋಜನೆಗೊAಡ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಗುತ್ತಿಗೆ ನೌಕರರ ಸಂಘವು ಮನವಿ ಸಲ್ಲಿಸಿತು.
      ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ವಿಸ್ತರಣೆಯಾಗುತ್ತಿರುವುದು ಅತ್ಯಂತ ಸಂತೋಷದ ವಿಷಯ. ಇತ್ತೀಚಿನ ಕೆಲ ವರ್ಷಗಳಲ್ಲಿ ಟ್ರಾಮಾ ಕೇರ್, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಕೂಡ ಪ್ರಾರಂಭವಾಗಿವೆ. ದಿನಕ್ಕೆ ಸುಮಾರು ೨೦೦೦ ಹೊರ ರೋಗಿಗಳು ಇಲ್ಲಿ ಬರುತ್ತಾರೆ ಎಂಬುವ ಅಂದಾಜಿದೆ. ಸುತ್ತಾಮುತ್ತಾ ಜಿಲ್ಲೆಗಳಿಂದ, ನೆರೆಯ ಆಂಧ್ರಪ್ರದೇಶದಿAದ ಕೂಡ ರೋಗಿಗಳು ಬರುತ್ತಾರೆ. ಇಂತಹ ಸಂದರ್ಭದಲ್ಲಿ ದೊಡ್ಡ ಸಂಖ್ಯೆ, ಸುಮಾರು ೭೫೦-೯೦೦ ಡಿ ಗ್ರೂಪ್ ನೌಕರರ ಅವಶ್ಯಕತೆಯಿದೆ. ಆದರೆ ಇಲ್ಲಿ ಕೆಲಸ ನಿರ್ವಹಿಸುತ್ತಿರುವುದು ಕೇವಲ ೪೫೦-೫೦೦. ಅದು ಕೂಡ ಹೊರಗುತ್ತಿಗೆ ಆಧಾರದ ಮೇಲೆ. ಇದರ ಪರಿಣಾಮವಾಗಿ ಇರುವ ಕಾರ್ಮಿಕರ ಮೇಲೆ ಒತ್ತಡ ತೀವ್ರವಾಗಿದೆ. ಒಬ್ಬ ಕಾರ್ಮಿಕ, ೨-೩ ಕಾರ್ಮಿಕರ ಕೆಲಸವನ್ನು ಮಾಡಬೇಕಾಗಿದೆ. ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸಾಧ್ಯವಾಗುವುದಿಲ್ಲ. ಈ ಹಿನ್ನಲೆಯಲ್ಲಿ ಆರೋಗ್ಯದಂತಹ ಅವಶ್ಯಕ ಸೇವೆಯ ವಿಷಯದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು, ಕೂಡಲೆ ಅವಶ್ಯಕವಿರುವ ಹೆಚ್ಚುವರಿ ಡಿ ಗ್ರೂಪ್ ಕಾರ್ಮಿಕರನ್ನು ನೇಮಕ ಮಾಡಲು ಕೂಡಲೆ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದೆ.
      ಇನ್ನು ಅನೇಕ ಕಾರ್ಮಿಕರು ನೇಮಕಾತಿ ಪತ್ರ ಸಿಗದೆ ಇರುವುದು, ಪಿಎಫ್ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಒಳಗಾಗಿದ್ದಾರೆ. ಈ ಕೊರತೆಗಳನ್ನು ನೀಗಿಸಲು ಗುತ್ತಿಗೆದಾರರ ಜೊತೆ ಸಭೆ ಆಗುವುದು ಕೂಡ ಅವಶ್ಯಕತೆ ಇದೆ.  ಇದಲ್ಲದೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳಾ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಯಿಲ್ಲದೆ. ಊಟ ಮಾಡಲು, ವಸ್ತç ಬದಲಿಸಲು ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ