Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ*

*ಶ್ರೀರಾಮರಂಗಾಪುರ ದಲಿತ ಕುಟುಂಬಗಳಿಗೆ ವಸತಿ ನಿವೇಶನಕ್ಕೆ ಆಗ್ರಹ*

ಬಳ್ಳಾರಿ, ಮೇ 20:: ಕಂಪ್ಲಿ ತಾಲೂಕಿನ ಶ್ರೀರಾಮರಂಗಾಪುರ ಗ್ರಾಮದ 101 ದಲಿತ ಕುಟುಂಬಗಳಿಗೆ ಶೀಘ್ರ ವಸತಿ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
2014-15ನೇ ಸಾಲಿನಲ್ಲಿ ಗ್ರಾಮದ ಭೀಮನೇನಿ ಸೋಮಪ್ಪ ಅವರ ವಶದಲ್ಲಿದ್ದ 135 ಎಕರೆ ಜಮೀನನ್ನು ಹೋರಾಟದ ಮೂಲಕ ಕಂದಾಯ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಗ್ರಾಮದಲ್ಲಿನ ದಲಿತ ಸಮುದಾಯ ಆರ್ಥಿಕ ಬಹಿಷ್ಕಾರಕ್ಕೆ ಒಳಗಾಗಿದ್ದು, ಸರ್ಕಾರದಿಂದ ಆರ್ಥಿಕ ಭದ್ರತೆ, ನೇರ ಸಾಲ ಹಾಗೂ ವಸತಿ ನಿವೇಶನ ನೀಡುವಂತೆ ಬೇಡಿಕೆ ಇಡಲಾಗಿತ್ತು ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.
ಈ ಹಿಂದೆ ಆದಿ ಜಾಂಬವ ನಿಗಮದಿಂದ 86 ಕುಟುಂಬಗಳಿಗೆ ತಲಾ ₹1 ಲಕ್ಷ ನೇರ ಸಾಲ ಮಂಜೂರಾಗಿದ್ದರೂ, ವಸತಿ ನಿವೇಶನ ಮಂಜೂರಿನ ವಿಚಾರದಲ್ಲಿ ಇದುವರೆಗೆ ಯಾವುದೇ ಪ್ರಗತಿ ಕಂಡಿಲ್ಲ ಎಂದು ಆರೋಪಿಸಿದರು.
ಗ್ರಾಮದಲ್ಲಿ ಜನಸಂಖ್ಯೆ ಹೆಚ್ಚಳದಿಂದ ಹಲವಾರು ಕುಟುಂಬಗಳು ಒಂದೇ ಮನೆಯಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
 ವಾಸಿಸಲು ಸೂಕ್ತ ಜಾಗದ ಕೊರತೆಯಿಂದ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿರುವುದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ ಗ್ರಾಮಸ್ಥರು ಡಾ. ಗುರುಮೂರ್ತಿ ಅವರ ಜಮೀನನ್ನು ವಸತಿ ನಿವೇಶನಕ್ಕಾಗಿ ಖರೀದಿಸಲು ಮಾತುಕತೆ ನಡೆಸಿದ್ದು, ಸುಮಾರು 3 ಎಕರೆ 94 ಸೆಂಟ್ಸ್ ಭೂಮಿಗೆ ₹2.56 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ. 
ಇಷ್ಟೊಂದು ಮೊತ್ತವನ್ನು ಬಡ ಕುಟುಂಬಗಳು ಭರಿಸಲು ಸಾಧ್ಯವಿಲ್ಲದ ಕಾರಣ ಸರ್ಕಾರವೇ ಮಧ್ಯಪ್ರವೇಶಿಸಿ ನಿವೇಶನ ಮಂಜೂರು ಮಾಡಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಮಾತನಾಡಿ, ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿ ಶೀಘ್ರ ವಸತಿ ನಿವೇಶನ ಮಂಜೂರು ಮಾಡಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಮಕೃಷ್ಣ, ನೀಲಪ್ಪ ಪೇಂಟರ್, ಸೋಮಯ್ಯ, ಈರಣ್ಣ, ವೆಂಕಟಸ್ವಾಮಿ, ಕೃಷ್ಣ, ಪೆದ್ದಣ್ಣ, ಮೋಹನ್ ರಾಜ್, ನವೀನ್ ಕುಮಾರ್, ಮಲ್ಲಮ್ಮ, ಲಕ್ಷ್ಮಿ, ಸರಸ್ವತಿ, ಸರೋಜಮ್ಮ ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ