LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಮನವಿ




ಬಳ್ಳಾರಿ 10.: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ ಇಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಫೆಡರೇಷನ್ ನ ಜಿಲ್ಲಾಧ್ಯಕ್ಷೆ ಎಸ್.ಅರ್ಕಾಣಿ ಅವರು ಈ ವೇಳೆ ಮಾತನಾಡಿ, ರಾಜ್ಯ ಸರ್ಕಾರ ಮಂಡಿಸಿರುವ ಇತ್ತೀಚಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳ ಕುರಿತು ಯಾವುದೇ ಘೋಷಣೆ ಮಾಡಿಲ್ಲ. ಕೇವಲ ಸೀರೆ ವಿತರಿಸುವ ಮಾತಾಗಿದೆ. ಇದು ನಿರಾಶೆ ಉಂಟುಮಾಡಿದೆ ಎಂದು ಫೆಡರೇಷನ್ ಆರೋಪಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರು ವರ್ಷ ಕಳೆದರೂ ಆ ಭರವಸೆ ಈಡೇರಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಇದುವರೆಗೆ ಅನುಷ್ಠಾನಕ್ಕೆ ತರಲಾಗಲಿಲ್ಲ. ನಂತರದ ಬಜೆಟ್‌ನಲ್ಲಿ ಕೇವಲ ಸಾವಿರ ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ. ಸರ್ಕಾರ ನೀಡಿದ ಭರವಸೆಯಂತೆ ಮಾಸಿಕ ರೂ. ೧೫,೦೦೦ ಗೌರವಧನ ನೀಡುವ ಘೋಷಣೆ ಇನ್ನೂ ಜಾರಿಯಾಗಿಲ್ಲ. ೨೦೧೧ ರಿಂದ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ನೀಡಲಾಗಿಲ್ಲ. ೨೦೨೦ರ ನಂತರ ನಿವೃತ್ತರಾದವರಿಗೆ ಮಾತ್ರ ಈ ಸೌಲಭ್ಯ ಅನ್ವಯವಾಗುತ್ತಿದೆ. ಇದರಿಂದ ಸಾವಿರಾರು ವಯೋವೃದ್ಧರಿಗೆ ನ್ಯಾಯ ಸಿಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಬಜೆಟ್ ಅಂಗೀಕಾರಗೊಳ್ಳುವ ಮೊದಲು ಸೀರೆ ನೀಡುವ ಪ್ರಸ್ತಾಪವನ್ನು ಕೈಬಿಟ್ಟು ಅದೇ ಅನುದಾನವನ್ನು ಗೌರವಧನ ಹೆಚ್ಚಳಕ್ಕೆ ಬಳಸುವಂತೆ ಫೆಡರೇಷನ್ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ಮಾರ್ಚ್ ೭ರಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು `ಸೀರೆ ಬೇಡ, ಗೌರವಧನ ಹೆಚ್ಚಿಸಿ' ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿರುವುದಾಗಿ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನ ಕಾನೂನು ಸಲಹೆಗಾರರಾದ ಎ.ಆರ್.ಎಂ.ಇಸ್ಮಾಯಿಲ್, ತಾಲೂಕು ಘಟಕದ ಅಧ್ಯಕ್ಷೆ ಇ.ಮಂಗಮ್ಮ, ಪದಾಧಿಕಾರಿಗಳಾದ ರ‍್ರೆಮ್ಮ, ಮೀನಾ, ಇಂದಿರಾ, ವೀರಮ್ಮ ಹಿರೇಮಠ ಮತ್ತಿತರರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್