Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಮನವಿ




ಬಳ್ಳಾರಿ 10.: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ ಇಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಫೆಡರೇಷನ್ ನ ಜಿಲ್ಲಾಧ್ಯಕ್ಷೆ ಎಸ್.ಅರ್ಕಾಣಿ ಅವರು ಈ ವೇಳೆ ಮಾತನಾಡಿ, ರಾಜ್ಯ ಸರ್ಕಾರ ಮಂಡಿಸಿರುವ ಇತ್ತೀಚಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳ ಕುರಿತು ಯಾವುದೇ ಘೋಷಣೆ ಮಾಡಿಲ್ಲ. ಕೇವಲ ಸೀರೆ ವಿತರಿಸುವ ಮಾತಾಗಿದೆ. ಇದು ನಿರಾಶೆ ಉಂಟುಮಾಡಿದೆ ಎಂದು ಫೆಡರೇಷನ್ ಆರೋಪಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರು ವರ್ಷ ಕಳೆದರೂ ಆ ಭರವಸೆ ಈಡೇರಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಇದುವರೆಗೆ ಅನುಷ್ಠಾನಕ್ಕೆ ತರಲಾಗಲಿಲ್ಲ. ನಂತರದ ಬಜೆಟ್‌ನಲ್ಲಿ ಕೇವಲ ಸಾವಿರ ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ. ಸರ್ಕಾರ ನೀಡಿದ ಭರವಸೆಯಂತೆ ಮಾಸಿಕ ರೂ. ೧೫,೦೦೦ ಗೌರವಧನ ನೀಡುವ ಘೋಷಣೆ ಇನ್ನೂ ಜಾರಿಯಾಗಿಲ್ಲ. ೨೦೧೧ ರಿಂದ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ನೀಡಲಾಗಿಲ್ಲ. ೨೦೨೦ರ ನಂತರ ನಿವೃತ್ತರಾದವರಿಗೆ ಮಾತ್ರ ಈ ಸೌಲಭ್ಯ ಅನ್ವಯವಾಗುತ್ತಿದೆ. ಇದರಿಂದ ಸಾವಿರಾರು ವಯೋವೃದ್ಧರಿಗೆ ನ್ಯಾಯ ಸಿಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಬಜೆಟ್ ಅಂಗೀಕಾರಗೊಳ್ಳುವ ಮೊದಲು ಸೀರೆ ನೀಡುವ ಪ್ರಸ್ತಾಪವನ್ನು ಕೈಬಿಟ್ಟು ಅದೇ ಅನುದಾನವನ್ನು ಗೌರವಧನ ಹೆಚ್ಚಳಕ್ಕೆ ಬಳಸುವಂತೆ ಫೆಡರೇಷನ್ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ಮಾರ್ಚ್ ೭ರಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು `ಸೀರೆ ಬೇಡ, ಗೌರವಧನ ಹೆಚ್ಚಿಸಿ' ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿರುವುದಾಗಿ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನ ಕಾನೂನು ಸಲಹೆಗಾರರಾದ ಎ.ಆರ್.ಎಂ.ಇಸ್ಮಾಯಿಲ್, ತಾಲೂಕು ಘಟಕದ ಅಧ್ಯಕ್ಷೆ ಇ.ಮಂಗಮ್ಮ, ಪದಾಧಿಕಾರಿಗಳಾದ ರ‍್ರೆಮ್ಮ, ಮೀನಾ, ಇಂದಿರಾ, ವೀರಮ್ಮ ಹಿರೇಮಠ ಮತ್ತಿತರರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ