LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕ ಅರಣ್ಯದಲ್ಲಿ ಕಳ್ಳಬೇಟೆ ನಿಗ್ರಹ:ಜರ್ಮನಿ ಸಂಸತ್ ನಿಯೋಗದ ಮೆಚ್ಚುಗೆ

ಬೆಂಗಳೂರು, ಆ.31: ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಬಹುತೇಕ ಕಳ್ಳಬೇಟಿ ನಿಯಂತ್ರಣ ಮಾಡಿರುವ ಬಗ್ಗೆ ಜರ್ಮನಿಯ ಸಂಸತ್ ಸದಸ್ಯ ಜೇನ್ಸ್ ಗೀಯರ್ ನೇತೃತ್ವದ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.

ವಿಕಾಸಸೌಧದ ಸಚಿವರ ಕೊಠಡಿಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿದ ನಿಯೋಗ ಒಂದು ಗಂಟೆಗೂ ಹೆಚ್ಚುಕಾಲ ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ ಮತ್ತು ನವೀಕರಿಸಬಹುದಾದ ಇಂಧನ, ಸುಸ್ಥಿರ ಅಭಿವೃದ್ಧಿಯ ಬಗ್ಗೆ ಚರ್ಚಿಸಿತು.

ನಿಯೋಗವನ್ನು ಸ್ವಾಗತಿಸಿದ ಈಶ್ವರ ಖಂಡ್ರೆ, ಕರ್ನಾಟಕದಲ್ಲಿ ಅರಣ್ಯ, ವನ್ಯಜೀವಿ ಸಂರಕ್ಷಣೆ ಹಾಗೂ ಜೀವವೈವಿಧ್ಯದ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ವಿವರಿಸಿದರು. ಕಳ್ಳಬೇಟೆಯನ್ನು ತಡೆಯಲು ಕರ್ನಾಟಕ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿದ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.

ಪರಿಸರ ಸಂರಕ್ಷಣೆ, ಇಂಗಾಲದ ಪ್ರಮಾಣವನ್ನು (ಶೂನ್ಯಕ್ಕೆ) ತಗ್ಗಿಸುವಿಕೆ, ಸಸ್ಯಸಂಕುಲ, ಪ್ರಾಣಿ ಸಂಕುಲ ಹಾಗೂ ಕೀಟ ಸಂಕುಲ ಮತ್ತು ಪಕ್ಷಿ ಸಂಕುಲದ ರಕ್ಷಣೆ, ಕಾರ್ಬನ್ ಕ್ರೆಡಿಟ್ ರೇಟಿಂಗ್ ನೀತಿ ಮೊದಲಾದ ವಿಷಯಗಳ ಬಗ್ಗೆ ನಿಯೋಗ ವಿಸ್ತೃತ ಚರ್ಚೆ ನಡೆಸಿತು.

ಭಾರತಕ್ಕೆ ಭೇಟಿ ನೀಡಿರುವ ಜರ್ಮನಿಯ ಸಂಸತ್ ಸದಸ್ಯ ಜೇನ್ಸ್ ಗೀಯರ್ ಮತ್ತು ಬುಂಡೆಸ್ಟಾಗ್ ನ ಸದಸ್ಯ ಬೆಂಗ್ಟ್ ಬರ್ಗ್ಟ್ ಅವರನ್ನು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸತ್ಕರಿಸಿದರು.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಕಡೆ, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಜಯ ಮೋಹನ ರಾಜ್ ಮತ್ತಿತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್