LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಅಭಿನವ ಮಂತ್ರಾಲಯ ಅಥಣಿಯಲ್ಲಿ   ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ  

 

ಅಥಣಿ : ಅಭಿನವ ಮಂತ್ರಾಲಯ ಎಂದು ಕರೆಯಲ್ಪಡುವ ಅಥಣಿ ಪಟ್ಟಣದ  ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ  ಶ್ರೀ ರಾಘವೇಂದ್ರ ಸ್ವಾಮಿಗಳ 35ನೇ ಆರಾಧನಾ ಮಹೋತ್ಸವ ದಿ. 29 ರಿಂದ 31 ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಜರುಗಲಿದೆ.
 ಉತ್ಸವದಲ್ಲಿ ಪ್ರತಿದಿನ  ಮುಂಜಾನೆ 4 ಗಂಟೆಯಿಂದ  8 ಗಂಟೆಯವರೆಗೆ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ, ಅಭಿಷೇಕ ಮತ್ತು ವಿಶೇಷ ಪೂಜೆ ಜರುಗಲಿದೆ. 9 ರಿಂದ 12 ಗಂಟೆಯವರೆಗೆ  ಪುರಾಣ ಹಾಗೂ ರಾಯರ ಸ್ತೋತ್ರ ಪಾರಾಯಣ ಜರುಗುವುದು. 12 ಗಂಟೆಯಿಂದ 3 ಗಂಟೆವರೆಗೆ ಪ್ರಸಾದ ವಿತರಣೆ, ಸಾಯಂಕಾಲ 5 ರಿಂದ 7 ಗಂಟೆವರೆಗೆ  ಭಜನೆ, ಪಲ್ಲಕ್ಕಿ ಸೇವೆ, ಮಂತ್ರ ಪುಷ್ಪ  ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗುತ್ತವೆ. 
 ದಿ. 29ರಂದು  ಸಾಯಂಕಾಲ 6 ಗಂಟೆಗೆ  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿತರಣೆ ಹಾಗೂ ಧಾರವಾಡದ ಉದಯ್ ದೇಶಪಾಂಡೆ ಅವರಿಂದ  ಸಂಗೀತ ಕಾರ್ಯಕ್ರಮ ಜರುಗಲಿದೆ. 
ದಿ. 30 ರಂದು ಸಾಯಂಕಾಲ 6 ಗಂಟೆಗೆ ನ್ಯಾಯವಾದಿ ಕೆ. ಎಲ್ ಕುಂದರಗಿ ವಿರಚಿತ ಶ್ರೀ ರಾಘವೇಂದ್ರ ವಿಜಯ ಭಕ್ತಿಪರ ನಾಟಕ ಪ್ರದರ್ಶನವಾಗಲಿದೆ. 
ದಿ. 31 ರಂದು ಮುಂಜಾನೆ 11:00ಗೆ ಪವಮಾನ ಹೋಮ  ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಭವ್ಯ ರಥೋತ್ಸವ ಜರುಗಲಿದೆ. ಸಾಯಂಕಾಲ 6 ಗಂಟೆಗೆ  ಬೆಂಗಳೂರಿನ ವಿದುಷಿ ದಿವ್ಯಾ ಗಿರಿಧರ  ಅವರಿಂದ ದಾಸವಾಣಿ ಕಾರ್ಯಕ್ರಮ ಜರುಗುವುದು. ಅಥಣಿ ಹಾಗೂ ಸುತ್ತಮುತ್ತಲಿನ ಭಕ್ತಾದಿಗಳು ಈ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು  ಆರಾಧನಾ ಉತ್ಸವ ಕಮಿಟಿಯ ಅಧ್ಯಕ್ಷ ಶ್ರೀನಿವಾಸಾಚಾರ್ಯ ಜೋಶಿ, ಕಾರ್ಯದರ್ಶಿ ಎಂ ಬಿ ಹೂಗಾರ  ಪ್ರಕಟಣೆಗೆ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್