Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುಲ್ವಾಮಾದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾ ಪಡೆ

ಜಮ್ಮುಕಾಶ್ಮೀರ,ಏಪ್ರಿಲ್ 11:  ಗುರುವಾರ ಬೆಳ್ಳಂಬೆಳಗ್ಗೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಫ್ರಾಸಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್​ನಲ್ಲಿ ಓರ್ವ ಅಪರಿಚಿತ ಉಗ್ರನನ್ನು ಹೊಡೆದುರುಳಿಸಲಾಗಿದೆ. ಉನ್ನತ ಪೊಲೀಸ್ ಅಧಿಕಾರಿಗಳ ಹೇಳಿಕೆಯ ಪ್ರಕಾರ, ಸುತ್ತಮುತ್ತಲ ಪ್ರದೇಶದಲ್ಲಿ ಉಗ್ರಗಾಮಿಗಳು ಇರುವ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಎನ್‌ಕೌಂಟರ್ ನಡೆದಿದೆ.


ಗುಪ್ತಚರ ಮಾಹಿತಿ ಮೇರೆಗೆ ನಂತರ, ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ಜಂಟಿ ತಂಡವು ಪ್ರದೇಶದಲ್ಲಿ ತ್ವರಿತ ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಅಡಗಿ ಕುಳಿತಿದ್ದ ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿಯುತ್ತಿದ್ದಂತೆ, ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿ ನಡೆಸಿದ್ದರು. ಇದರಿಂದ ತೀವ್ರ ಗುಂಡಿನ ಚಕಮಕಿ ನಡೆದಿತ್ತು.


ಈ ಗುಂಡಿನ ಕಾಳಗದಲ್ಲಿ ಅಪರಿಚಿತ ಉಗ್ರಗಾಮಿಯನ್ನು ಕೊಂದು ಹಾಕಲಾಗಿದೆ. ಇತರರಿಗಾಗಿ ಶೋಧ ಇನ್ನೂ ಮುಂದುವರೆದಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಹತನಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ. ಅಲ್ಲದೇ, ಎನ್‌ಕೌಂಟರ್‌ಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.

Advertisement

ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಎರಡರಿಂದ ಮೂರು ಉಗ್ರರು ಅಡಗಿ ಕುಳಿತಿದ್ದಾರೆ. ಸೇನೆಯ 55 ರಾಷ್ಟ್ರೀಯ ರೈಫಲ್ಸ್, ಸಿಆರ್‌ಪಿಎಫ್ ಮತ್ತು ಪೊಲೀಸರು ಜಂಟಿಯಾಗಿ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ಕೈಗೊಂಡಿದ್ದಾರೆ.


ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಮತ್ತು ಸೇನೆಯ ನಡುವಿನ ಘರ್ಷಣೆಯ ಸುಮಾರು ಒಂದು ವರ್ಷದ ಬಳಿಕ ಬುಧವಾರ ಶೋಪಿಯಾನ್ ಜಿಲ್ಲೆಯಲ್ಲಿ ಸ್ಥಳೀಯರಲ್ಲದ ವ್ಯಕ್ತಿಯೋರ್ವನನ್ನು ಅಪರಿಚಿತರು ಹತ್ಯೆ ಮಾಡಿದ್ದರು. ಕಣಿವೆಯಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಗರಿಗೆದರಿದ್ದು, ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ಜನರಿಗೆ ಭದ್ರತೆ ಒದಗಿಸಲು, ಪೊಲೀಸರು ಮತ್ತು ಸೇನಾಪಡೆಗಳು ವಿವಿಧೆಡೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುತ್ತಿವೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*