Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್​ ಶಾಸಕ ಹರಿಶ್​ಗೌಡ್ ಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು, ಜೂನ್​ 26: ಹನಿಟ್ರ್ಯಾಪ್​  ಮೂಲಕ ಕಾಂಗ್ರೆಸ್​ ಶಾಸಕ ಹರಿಶ್​ಗೌಡ್ ​​ ಅವರಿಗೆ ಬ್ಲ್ಯಾಕ್​ಮೇಲ್  ಮಾಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು. ಆರೋಪಿಗಳ ಗ್ಯಾಂಗ್​ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್​ ಶಾಸಕ ಹರೀಶ್​ಗೌಡ ಅವರ ವಿರುದ್ಧವೇ ಸುಳ್ಳು ಹನಿಟ್ರ್ಯಾಪ್​ ಮಾದರಿ ವಿಡಿಯೋ ಸೃಷ್ಟಿಸಿ ಬೆದರಿಕೆ ಹಾಕಲು ಮುಂದಾಗಿದ್ದರು. ಅಲ್ಲದೆ, ಕೋಟ್ಯಂತರ ರೂ. ಹಣ ನೀಡುವಂತೆ ಬ್ಲ್ಯಾಕ್​ಮೇಲ್ ಮಾಡಿದ್ದರು. ಬಳಿಕ ಕಾಂಗ್ರೆಸ್ ಶಾಸಕ ಹರೀಶ್​ಗೌಡ ಬೆಂಗಳೂರಿನ ಸಿಸಿಬಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಶಾಸಕರು ನೀಡಿದ ದೂರಿನ ಅನ್ವಯ ಕೇಸ್​ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್​ ಮಾಡುತ್ತಿದ್ದ ಜಾಲವನ್ನು ಬೇಧಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣಗೆ ಒಳಪಡಿಸಿದಾಗ ಹಲವು ವಿಚಾರ ಬೆಳಕಿಗೆ ಬಂದಿದೆ. ಹನಿಟ್ರ್ಯಾಪ್​ ಗ್ಯಾಂಗ್​ನಲ್ಲಿ ಓರ್ವ ಯುವತಿ ಸಹ ಇರುವ ಬಗ್ಗೆ ಮಾಹಿತಿ ದೊರೆತಿದೆ.

ಆರೋಪಿಗಳು ರಾಜ್ಯದಲ್ಲಿನ ಪ್ರಭಾವಿಗಳ ಸಂಪರ್ಕ ಮಾಡಿ ಅವರನ್ನು ಫಾಲೀ ಮಾಡುತ್ತಿದ್ದರು. ಬಳಿಕ ವಿಐಪಿಗಳನ್ನು ಭೇಟಿ ಮಾಡಿ ನಂಬರ್​ ಪಡೆದುಕೊಳ್ಳುತ್ತಿದ್ದಾರು. ನಂತರ, ಆರೋಪಿಗಳು ವಿಐಪಿಗಳ ಚಲನವಲನದ ಮೇಲೆ ಕಣ್ಣಿಡುತ್ತಿದ್ದರು. ಬಳಿಕ, ವಿಐಪಿಗಳು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್​ಗಳ ರೂಮು ಬುಕ್ಕಿಂಗ್​, ಚೆಕ್​-ಇನ್​​ ಹಾಗೂ ಚೆಕ್​-ಔಟ್​ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು.\

ಬಳಿಕ, ವಿಐಪಿಗಳು ಹೋಟೆಲ್​ನ ರೂಮ್​ ಖಾಲಿ ಮಾಡಿಕೊಂಡು ಹೋದ ನಂತರ ಅವರು ಉಳಿದುಕೊಂಡಿದ್ದ ರೂಮ್​ ಅನ್ನು ಬಾಡಿಗೆ ಪಡೆದು ಅಲ್ಲಿಯೇ ಉಳಿದುಕೊಳ್ಳುತ್ತಿದ್ದರು. ಈ ರೂಮಿನಲ್ಲಿ ಯುವತಿ ಬಳಸಿಕೊಂಡು ಹಿಡಿನ್​ ಕ್ಯಾಮೆರಾ ಇಟ್ಟಿರುವ ರೀತಿಯಲ್ಲಿ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದರು.

ಬಳಿಕ ವಿಐಪಿ ಈ ಯುವತಿಯನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ಕ್ರಿಯೇಟ್​ ಮಾಡಿ ಅದನ್ನು ವಿಐಪಿಗಳಿಗೆ ಕಳುಹಿಸಿ, ಹಣ್ಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಇಲ್ಲದಿದ್ದರೆ ವಿಡಿಯೋ ವೈರಲ್​ ಮಾಡುವುದಾಗಿ ಹಾಗೂ ಪೊಲೀಸರಿಗೆ ಕೊಡುವುದಾಗಿ ಬೆದರಿಕೆ ಹಾಕಿದ್ದರು. ಇದೇ ರೀತಿ ಕಾಂಗ್ರೆಸ್​ ಶಾಸಕ ಹರೀಶ್​​ಗೌಡ ಅವರಿಗೂ ಮಾಡಿದ್ದು, ಕೂಡಲೆ ಶಾಸಕರು ದೂರು ನೀಡಿದ್ದಾರೆ. ಇದೀಗ ಆರೋಪಿಗಳು ಲಾಕ್​ ಆಗಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ