Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇವ್ ಪಾರ್ಟಿಯಲ್ಲಿ ಪೋಷಕ ನಟಿ ಭಾಗಿ: ಐವರ ಬಂಧನ

ಬೆಂಗಳೂರು,21 : ನಗರದ ಹೊರವಲಯದ ಫಾರ್ಮ್ ಹೌಸ್​​ನಲ್ಲಿ ರೇವ್ ಪಾರ್ಟಿ ನಡೆಸಿದ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಈ ಬಗ್ಗೆ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ರೇವ್ ಪಾರ್ಟಿಯಲ್ಲಿ ತೆಲುಗಿನ ಪೋಷಕ ನಟಿ ಸಹ ಭಾಗಿಯಾಗಿದ್ದರು. ಆದರೆ, ಯಾವುದೇ ಜನಪ್ರತಿಧಿಗಳು ಭಾಗಿಯಾಗಿರಲಿಲ್ಲ ಎಂದು ಇದೇ ಸಂದರ್ಭದಲ್ಲಿ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.


ಪಾರ್ಟಿ ನಡೆಯುತ್ತಿರುವುದನ್ನು ತಿಳಿದುಕೊಂಡು ಸಿಸಿಬಿ ಪೊಲೀಸರು, ಸ್ಥಳೀಯ ಪೊಲೀಸರೊಂದಿಗೆ ಸೇರಿ ದಾಳಿ ನಡೆಸಿದ್ದಾರೆ. ಮಾದಕ ವಸ್ತು ಪತ್ತೆಗೆ ತರಬೇತಿ ಪಡೆದಿರುವ ಶ್ವಾನದಳದ ನೆರವು ಪಡೆಯಲಾಗಿದೆ. ನೂರಕ್ಕೂ ಅಧಿಕ ಜನ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ದಾಳಿ ವೇಳೆ ಮಾದಕ ಪದಾರ್ಥಗಳು ಪತ್ತೆಯಾಗಿವೆ. ಕೆಲವರು ಬಳಸುತ್ತಿದ್ದ ಮಾದಕ ಪದಾರ್ಥಗಳನ್ನು ಸ್ವಿಮ್ಮಿಂಗ್ ಪೂಲ್ ಮತ್ತಿತರ ಕಡೆ ಎಸೆದಿದ್ದಾರೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ. ಘಟನಾ ಸ್ಥಳದ ಬೆಂಗಳೂರು ಗ್ರಾಮಾಂತರದ ಹೆಬ್ಬಗೋಡಿ ಠಾಣಾ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾವಣೆ ಮಾಡಲಾಗುತ್ತದೆ.


ದಾಳಿ ಸಂದರ್ಭದಲ್ಲಿ ಪೋಷಕ ನಟಿಯೊಬ್ಬರು ವಿಡಿಯೋ ಮಾಡಿರುವುದರ ಕುರಿತು 'ಅವರು ಯಾವ ಸಂದರ್ಭದಲ್ಲಿ ವಿಡಿಯೋ ಮಾಡಿದ್ದಾರೆ ಎಂಬುದು ಗೊತ್ತಿಲ್ಲ, ಆ ಬಗ್ಗೆ ಸಹ ತನಿಖೆ ಮಾಡಲಾಗುತ್ತಿದೆ. ಅಲ್ಲದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಎಲ್ಲರನ್ನೂ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು, ಅದರ ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ‌.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ