Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

’ಶಾಸಕ ಚನ್ನಾರೆಡ್ಡಿಯನ್ನು ಬಂಧಿಸಿ’ ಪಿಎಸ್‌ಐ ಪರಶುರಾಮ್ ಸಾವು ಕೇಸ್ ಸಂಬಂಧ ಸಿಎಂಗೆ ಪತ್ರ

ಯಾದಗಿರಿ, ಸೆಪ್ಟೆಂಬರ್​ 23: ಪಿಎಸ್ಐ ಪರಶುರಾಮ  ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪನಗೌಡ ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದಿದ್ದಾರೆ. ಅಲ್ಲದೇ, ಪಿಎಸ್​ಐ ಪರಶುರಾಮ ಅವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದರು. ಆದರೆ ಇನ್ನೂವರೆಗೂ ಪರಿಹಾರ ನೀಡಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಪಿಎಸ್‌ಐ ಪರಶುರಾಮ್ ಅವರ ಸ್ವಗ್ರಾಮಕ್ಕೆ ಆಗಸ್ಟ್ 08 ರಂದು ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ ಅವರ ಪತ್ನಿ ಶ್ವೇತಾ ಅವರಿಗೆ ಸೂಕ್ತ ಸರ್ಕಾರಿ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿರುವುದು ಗಮನಿಸಿದ್ದೇನೆ. ಆದರೆ ಆಶ್ವಾಸನೆಯನ್ನು ನೀಡಿ ಸುಮಾರು 45 ದಿನಗಳು ಕಳೆದರೂ ಕೂಡ ಅವರಿಗೆ ಯಾವುದೇ ರೀತಿಯ ಪರಿಹಾರ ನೀಡಿದೇ ಇರುವುದು ಮತ್ತು ಪರಿಹಾರ ಪ್ರಕ್ರಿಯೆಯನ್ನು ಪ್ರಾರಂಭ ಮಾಡದೇ ಇರುವುದೇ ಖೇಧಕರ ವಿಷಯವಾಗಿದೆ.

ಮೃತ ಪಿಎಸ್‌ಐ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ಇವರುಗಳ ವಿರುದ್ಧ ಜಾತಿ ನಿಂದನೆ (ಭಾರತೀಯ ನೀತಿ ಸಂಹಿತೆ  2023 (ಯು/ಎಸ್​-352, 108, 3(5)); ಅಟ್ರಾಸಿಟಿ ಕಾಯ್ದೆ, 1989 (ಯು/ಎಸ್​- 3(2(ವಿ), 3(1)(ಆರ್​(ಎಸ್​)) ಅಡಿಯಲ್ಲಿ ದೂರು ದಾಖಲಾದರೂ ಸಹ ಇದುವರೆಗೂ ಅವರ ವಿಚಾರಣೆ ನಡೆದಿಲ್ಲ ಹಾಗೂ ಅವರನ್ನು ಬಂಧಿಸಿ ವಿಚಾರಣೆಯನ್ನು ನಡೆಸುವ ಕಾರ್ಯವು ಆಗಿಲ್ಲ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ