Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರು ಐಎಸ್​ಐಎಸ್​ ಉಗ್ರರ ರಾಂಚಿಯ ಲಾಡ್ಜ್​ನಲ್ಲಿ ಬಂಧನ

ರಾಂಚಿ: ದೆಹಲಿ ಪೊಲೀಸ್​ ವಿಶೇಷ ಘಟಕದ ಸಹಯೋಗದೊಂದಿಗೆ ಜಾರ್ಖಂಡ್​ ಭಯೋತ್ಪಾದಕ ವಿರೋಧಿ ಪಡೆ (ಎಟಿಎಸ್​) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಐಎಸ್​ಐಎಸ್​ (ಐಸಿಸ್​) ಉಗ್ರರನ್ನು ರಾಂಚಿಯ ಲಾಡ್ಜ್​ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಲೋವರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಇಸ್ಲಾಂ ನಗರದ ತಬಾರಕ್ ಲಾಡ್ಜ್‌ನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಆಶರ್​ ಡ್ಯಾನಿಶ್​ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಈತ ಬೊಕಾರೊ ಜಿಲ್ಲೆಯ ಪೆಟ್ವಾರ್​​ ನಿವಾಸಿ ಎಂದು ತಿಳಿದು ಬಂದಿದ್ದು, ಬಹುಕಾಲದಿಂದ ಲಾಡ್ಜ್​ನಲ್ಲಿ ವಾಸಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಆರೋಪಿಯ ಕುರಿತು ನಿಖರ ಸುಳಿವು ಲಭ್ಯವಾದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್​ ವಿಶೇಷ ಘಟಕ ಜಾರ್ಖಂಡ್​ ಎಟಿಎಸ್​ ಜೊತೆಗೂಡಿ ಲಾಡ್ಜ್​ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯಲ್ಲಿ ಆಶರ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಈತನ ಕೋಣೆಯಲ್ಲಿದ್ದ ಹಲವು ಎಲೆಕ್ಟ್ರಾನಿಕ್​ ಸಾಧನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


ಅಶರ್​ ಐಎಸ್​ಐಎಸ್​ ಮಾಡ್ಯೂಲ್‌ನೊಂದಿಗೆ ಸಂಪರ್ಕದಲ್ಲಿದ್ದು, ಇತರೆ ಅನೇಕ ಅನುಮಾನಾಸ್ಪದ ಕಾರ್ಯಾಚರಣೆಗಳಲ್ಲಿ ಈತನ ಸಂಪರ್ಕವಿರುವ ಕುರಿತು ಅನುಮಾನವಿದೆ. ಈತ ದೆಹಲಿಯಲ್ಲಿ ದಾಖಲಾದ ಪ್ರಕರಣದಲ್ಲೂ ಬೇಕಾಗಿದ್ದ. ಈತನ ಬಳಿ ಇದ್ದ ಅನೇಕ ಸಾಧನಗಳನ್ನು ವಶಕ್ಕೆ ಪಡೆಯಲಾಗಿದ್ದು, ಜಾಲದ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ದೆಹಲಿ ಪೊಲೀಸ್​ ವಿಶೇಷ ಘಟಕ ಆಶರ್​ನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದುಕೊಂಡು ಹೋಗಿದೆ. ಜಾರ್ಖಂಡ್​ ಅಥವಾ ದೇಶದ ಇತರೆ ಭಾಗದಲ್ಲಿ ಏನಾದರೂ ವಿಧ್ವಂಸಕ ಕೃತ್ಯಕ್ಕೆ ಯೋಜನೆ ನಡೆದಿತ್ತಾ ಎಂಬ ಕುರಿತು ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದು, ಈತನ ಕುರಿತು ಹೆಚ್ಚಿನ ಮಾಹಿತಿಗೆ ಲಾಡ್ಜ್​ ಸಿಬ್ಬಂದಿಯನ್ನು ಪ್ರಶ್ನಿಸಲಾಗುವುದು ಎಂದು ಹೇಳಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ