Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರು ಐಎಸ್​ಐಎಸ್​ ಉಗ್ರರ ರಾಂಚಿಯ ಲಾಡ್ಜ್​ನಲ್ಲಿ ಬಂಧನ

ರಾಂಚಿ: ದೆಹಲಿ ಪೊಲೀಸ್​ ವಿಶೇಷ ಘಟಕದ ಸಹಯೋಗದೊಂದಿಗೆ ಜಾರ್ಖಂಡ್​ ಭಯೋತ್ಪಾದಕ ವಿರೋಧಿ ಪಡೆ (ಎಟಿಎಸ್​) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಐಎಸ್​ಐಎಸ್​ (ಐಸಿಸ್​) ಉಗ್ರರನ್ನು ರಾಂಚಿಯ ಲಾಡ್ಜ್​ನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಲೋವರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಇಸ್ಲಾಂ ನಗರದ ತಬಾರಕ್ ಲಾಡ್ಜ್‌ನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಆಶರ್​ ಡ್ಯಾನಿಶ್​ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಈತ ಬೊಕಾರೊ ಜಿಲ್ಲೆಯ ಪೆಟ್ವಾರ್​​ ನಿವಾಸಿ ಎಂದು ತಿಳಿದು ಬಂದಿದ್ದು, ಬಹುಕಾಲದಿಂದ ಲಾಡ್ಜ್​ನಲ್ಲಿ ವಾಸಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಆರೋಪಿಯ ಕುರಿತು ನಿಖರ ಸುಳಿವು ಲಭ್ಯವಾದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್​ ವಿಶೇಷ ಘಟಕ ಜಾರ್ಖಂಡ್​ ಎಟಿಎಸ್​ ಜೊತೆಗೂಡಿ ಲಾಡ್ಜ್​ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯಲ್ಲಿ ಆಶರ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಈತನ ಕೋಣೆಯಲ್ಲಿದ್ದ ಹಲವು ಎಲೆಕ್ಟ್ರಾನಿಕ್​ ಸಾಧನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


ಅಶರ್​ ಐಎಸ್​ಐಎಸ್​ ಮಾಡ್ಯೂಲ್‌ನೊಂದಿಗೆ ಸಂಪರ್ಕದಲ್ಲಿದ್ದು, ಇತರೆ ಅನೇಕ ಅನುಮಾನಾಸ್ಪದ ಕಾರ್ಯಾಚರಣೆಗಳಲ್ಲಿ ಈತನ ಸಂಪರ್ಕವಿರುವ ಕುರಿತು ಅನುಮಾನವಿದೆ. ಈತ ದೆಹಲಿಯಲ್ಲಿ ದಾಖಲಾದ ಪ್ರಕರಣದಲ್ಲೂ ಬೇಕಾಗಿದ್ದ. ಈತನ ಬಳಿ ಇದ್ದ ಅನೇಕ ಸಾಧನಗಳನ್ನು ವಶಕ್ಕೆ ಪಡೆಯಲಾಗಿದ್ದು, ಜಾಲದ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ದೆಹಲಿ ಪೊಲೀಸ್​ ವಿಶೇಷ ಘಟಕ ಆಶರ್​ನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದುಕೊಂಡು ಹೋಗಿದೆ. ಜಾರ್ಖಂಡ್​ ಅಥವಾ ದೇಶದ ಇತರೆ ಭಾಗದಲ್ಲಿ ಏನಾದರೂ ವಿಧ್ವಂಸಕ ಕೃತ್ಯಕ್ಕೆ ಯೋಜನೆ ನಡೆದಿತ್ತಾ ಎಂಬ ಕುರಿತು ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದು, ಈತನ ಕುರಿತು ಹೆಚ್ಚಿನ ಮಾಹಿತಿಗೆ ಲಾಡ್ಜ್​ ಸಿಬ್ಬಂದಿಯನ್ನು ಪ್ರಶ್ನಿಸಲಾಗುವುದು ಎಂದು ಹೇಳಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ