23ರಂದು ನಡೆಯುವ ಸಮಾರಂಭಲ್ಲಿ ಐದು ಜನ ಸಾಧಕ ಚಿತ್ರ ಕಲಾವಿದರಿಗೆ 2024-25ನೇ ಸಾಲಿನ ‘ವರ್ಣಕಲಾಶ್ರೀ’ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. ಹಿರಿಯ ಕಲಾವಿದರಾದ ದಿ.ಕೆ.ಬಿ. ಕುಲಕರ್ಣಿ, ದಿ.ಬಿ.ಕೆ.ಹುಬ್ಬಳ್ಳಿ, ದಿ.ಎಸ್ .ಬಿ.ಸುತಾರ, ದಿ.ಚಂದ್ರಕಾಂತ ಕುಸನೂರ ಮತ್ತು ದಿ.ಆರ್ .ಐ.ಸಾವಂತ ಅವರ ಸ್ಮರಣಾರ್ಥ ನೀಡಲಾಗುವ ‘ವರ್ಣಕಲಾಶ್ರೀ’ ಪ್ರಶಸ್ತಿಯನ್ನು ಬೆಳಗಾವಿಯ ಜಯಂತ ಬಿ. ಹುಬ್ಬಳ್ಳಿ, ವಿಜಯಪುರದ ರಮೇಶ ಚವ್ಹಾಣ, ಬೆಂಗಳೂರಿನ
ಅಶೋಕ ವಿ. ಭಂಡಾರೆ ,ಮೈಸೂರುನ ಜಯದೇವಣ್ಣ ಟಿ.ಎಸ್ .,ಕಲಬುರಗಿಯ ಡಾ. ರೆಹಮಾನ ಪಟೇಲ್ ಇವರುಗಳಿಗೆ ನೀಡಲಾಗುತ್ತಿದೆ. ಅಲ್ಲದೇ, ವಿಶ್ವಕಲಾ ದಿನಾಚರಣೆ ಮತ್ತು ವಿಶ್ವಮಹಿಳಾ ದಿನಾಚರಣೆ ಪ್ರಯುಕ್ತ ಪ್ರಶಸ್ತಿಯನ್ನು ವಿಜಯಪುರನ ಮಂಜುನಾಥ ಎನ್ . ವಾಲಿ ಹಾಗೂ ಧಾರವಾಡದ ಆರ್ಮಾ ಖಾನ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ವರ್ಣ ಕಲಾ ಸಂಸ್ಕೃತಿಕ ಸಂಘದ ಅಧ್ಯಕ್ಷ ನಾಗೇಶ ಚಿಮರೋಲ ಪ್ರಕಟಣೆಯಲ್ಲಿ ತಿಳಿಸಿದಾರೆ.