Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತ ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆ ಅನಿವಾರ್ಯ: ಡಾ. ಎಸ್.ಎಂ. ಶಶಿಧರ್ ಅಭಿಮತ

ಬಳ್ಳಾರಿ: 09:."ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮ್ಯಾನೇಜ್‌ಮೆಂಟ್ ಪದವೀಧರರು ಕೃತಕ ಬುದ್ಧಿಮತ್ತೆಯನ್ನು  ಕೇವಲ ಒಂದು ತಾಂತ್ರಿಕ ವಿಷಯವಾಗಿ ನೋಡದೆ, ಉದ್ಯಮದ ಉಳಿವು ಮತ್ತು ಕಾರ್ಯತಂತ್ರದ ಪ್ರಮುಖ ಅಂಗವಾಗಿ ಅಳವಡಿಸಿಕೊಳ್ಳಬೇಕು" ಎಂದು ತಾಂತ್ರಿಕ ತಜ್ಞರು ಹಾಗೂ ಲೇಖಕರು ಆದ ಡಾ. ಎಸ್.ಎಂ. ಶಶಿಧರ್ ಅವರು ತಿಳಿಸಿದರು.
ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನ (RYMEC) ಎಂ.ಬಿ.ಎ. ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ "ಆಡಳಿತ ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆ: ಭವಿಷ್ಯವನ್ನು ರೂಪಿಸುವ ತಂತ್ರಜ್ಞಾನಗಳು" ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ನೋಕಿಯಾ ಮತ್ತು ಕೊಡಾಕ್‌ನಂತಹ ಜಾಗತಿಕ ಕಂಪನಿಗಳ ಉದಾಹರಣೆಗಳನ್ನು ನೀಡಿದ ಅವರು, "ಬದಲಾಗುವ ತಂತ್ರಜ್ಞಾನಕ್ಕೆ ತಕ್ಕಂತೆ ತಮ್ಮ ಆಲೋಚನಾ ಶೈಲಿಯನ್ನು ಬದಲಾಯಿಸಿಕೊಳ್ಳದ ಉದ್ಯಮಗಳು ಮಾರುಕಟ್ಟೆಯಿಂದ ನಿರ್ನಾಮವಾಗುತ್ತವೆ. ಎಐ ತಂತ್ರಜ್ಞಾನವು ನಿಮ್ಮ ಆಲೋಚನಾ ಸಾಮರ್ಥ್ಯವನ್ನು ವಿಸ್ತರಿಸಬೇಕೇ ಹೊರತು, ನಿಮ್ಮ ಸ್ವತಂತ್ರ ಯೋಚನಾ ಶಕ್ತಿಯನ್ನು ಕಸಿದುಕೊಳ್ಳಬಾರದು." ಎಂದು ಎಚ್ಚರಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥರಾದ ಡಾ. ತಿಮ್ಮನಗೌಡ ಅವರು ಕಾಲೇಜಿನ ಪರವಾಗಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮದ ಮುಖ್ಯ ಅತಿಥಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು. ವಿಭಾಗದ ೧೦೦ಕ್ಕೂ ಹೆಚ್ಚು ಎಂ.ಬಿ.ಎ ವಿದ್ಯಾರ್ಥಿಗಳು ಈ ವಿಶೇಷ ಉಪನ್ಯಾಸದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾಲಕರು ಸುರಕ್ಷತಾ ನೀಯಮವನ್ನು ಪಾಲಿಸಿ-ಪಿಎಸ್‌ಐ ಖೋತ್ಒಲೆ ಹೂಡಿ ಅಡುಗೆ ಮಾಡಿ ರೈತ ಮುಖಂಡರ ವಿನೂತನ ಪ್ರತಿಭಟನೆಸತತ ಬಾರಿ  ಮಳೆ: ಬಳ್ಳಾರಿ ನಾಲಾದ ಅತಿಕ್ರಮಣದಿಂದ ರೈತರಲ್ಲಿ ಮೂಡಿದ  ಆತಂಕದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕನ ತಂದೆಗೆ ₹25,000 ದಂಡ.ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಸಂಕಲ್ಪಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ. ಶಿವಕುಮಾರ್; ಅದ್ಧೂರಿ ಸ್ವಾಗತಎಲ್ ನಿನೋ ಪರಿಣಾಮ ಎದುರಿಸಲು ಇಂಧನ ಇಲಾಖೆ ಸಜ್ಜು: ಗೌರವ್‌ ಗುಪ್ತಜನರ ಬಳಿಗೆ ಸರಕಾರ; ನನ್ನ ಆದ್ಯತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ವಿಜಯಪುರ ನಗರ ಮತಕ್ಷೇತ್ರ: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ: ಜಿಲ್ಲಾಧಿಕಾರಿ ಡಾ. ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆಭಾಷಾ ಅಧಿನಿಯಮದಂತೆ ನಾಮಫಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ