Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಸಚಿವರೇ ನಾಲಿಗೆ ಮೇಲೆ ಹಿಡಿತವಿರಲಿ’ : ಸಚಿವ ನಾಗೇಂದ್ರರ ಹೇಳಿಕೆಗೆ ಗಾಲಿ ಅರುಣಾ ಲಕ್ಷ್ಮೀ ಪ್ರತ್ಯುತ್ತರ




ಬಳ್ಳಾರಿ: ಏ 05 ನೂರು ಜನ ಜನಾರ್ದನ ರೆಡ್ಡಿ ಅಲ್ಲ, ಒಬ್ಬ ಜನಾರ್ದನ ರೆಡ್ಡಿ ಅಭಿಮಾನಿ ಸಾಕು ಕಾಂಗ್ರೆಸ್ ಅಲುಗಾಡಲಿಕ್ಕೆ ಎಂದು ಸಚಿವ ನಾಗೇಂದ್ರರ ಹೇಳಿಕೆಗೆ ಪ್ರತ್ಯುತ್ತರವನ್ನು ಗಾಲಿ ಅರುಣಾ ಲಕ್ಷ್ಮೀ ನೀಡಿದರು.


ನಗರದ ಹವಂಬಾವಿಯಲ್ಲಿ ನಡೆದ ಬಿಜೆಪಿಯ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಸಚಿವ ನಾಗೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.


ಕೆಲವು ದಿನಗಳ ಹಿಂದೆ ಸಚಿವ ನಾಗೇಂದ್ರ ಅವರು, ಜನಾರ್ದನ ರೆಡ್ಡಿಯಂತ ನೂರು ಜನಾರ್ದನ ರೆಡ್ಡಿ ಬಂದ್ರೂ ಕಾAಗ್ರೆಸ್ ಅನ್ನ ಏನು ಮಾಡೊಕ್ ಆಗಲ್ಲ ಎಂದಿದ್ದರು. ಈ ಹೇಳಿಕೆಗೆ ವೇದಿಕೆಯಲ್ಲಿ ನಿಂತು ಪ್ರತಿಕ್ರಿಯೆ ನೀಡುತ್ತಾ ಅರುಣಾ ಲಕ್ಷಿö್ಮÃ ಸಚಿವರಾಗಿರುವಂತಹ ವ್ಯಕ್ತಿ ಜವಾಬ್ದಾರಿಯಿಂದ ಮಾತನಾಡಬೇಕು. ನಾಲಿಗೆಯ ಮೇಲೆ ಹಿಡಿತವಿರಬೇಕಾಗುತ್ತದೆ. ಜನಾರ್ದನ ರೆಡ್ಡಿ ಸಹಾಯದಿಂದ ರಾಜಕೀಯಕ್ಕೆ ಬಂದವರು ನೀವು. ಜನಾರ್ದನ ರೆಡ್ಡಿ ಬಗ್ಗೆ ಈ ರೀತಿ ಮಾತನಾಡಿದರೇ ನಿಮಗೆ ಶೋಭೆ ತರೊಲ್ಲ ಎಂದರು.


ಸುಭದ್ರ ರಾಷ್ಟç ನಿರ್ಮಾಣಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಅಗತ್ಯವಾಗಿದೆ. ಮೋದಿಯವರ ಕೈ ಬಲಪಡಿಸಲು ಶ್ರೀರಾಮುಲುರವರನ್ನು ಗೆಲ್ಲಿಸಬೇಕಿದೆ ಎಂದು ಅವರು ತಿಳಿಸಿದರು.


ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮಾತನಾಡಿ, ಬಿಜೆಪಿಗೆ ಮರಳಿರುವ ಜನಾರ್ದನ ರೆಡ್ಡಿ ಅವರನ್ನು ಹಾಡಿ ಹೊಗಳಿದರು. ಚಾಣಿಕ್ಯನಂತ ಬುದ್ಧಿವಂತಿಗೆ ಜನಾರ್ದನ ರೆಡ್ಡಿಗೆ ಇದೆ. ದಕ್ಷಿಣ ಭಾರತದ ಕರ್ನಾಟಕದಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲು ಜನಾರ್ದನ ರೆಡ್ಡಿ ಅವರ ರಾಜಕೀಯ ಚಾಣಕ್ಷö್ಯತೆಯೇ ಕಾರಣ. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೋತೆ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ, ಆನಂದ ಸಿಂಗ್, ನಾನು ಪಂಚ ಪಾಂಡವ ರಂತೆ ಕೆಲಸ ಮಾಡಿದ್ದೇವೆ ಎಂದು ರಾಜ್ಯದಲ್ಲಿನ ಬಿಜೆಪಿಯ ಮೊದಲ ಸರ್ಕಾರದ ಕಾಲವನ್ನು ನೆನಪಿಸಿ ಕೊಂಡರು


ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತ ಸುಭದ್ರವಾಗಿದೆ. ಕಾಂಗ್ರೆಸ್ ಆಳ್ವಿಕೆಯಲ್ಲಿ ಟೆರರೆಸ್ಟ್ ಗಳು ವಿಧ್ವಂಸಕ ಕೃತ್ಯ ನಡೆಸುತಿದ್ದರು. ಮೋದಿ ಆಳ್ವಿಕೆಯಲ್ಲಿ ಭಾರತಕ್ಕೆ ಟೆರರೆಸ್ಟ್ಗಳು ಬರಲು ನಡುಗುತ್ತಾರೆ. ಪ್ರಧಾನಿ ಮೋದಿ ಸಬ್‌ಕಾ ವಿಕಾಸ್ ತತ್ವದಂತೆ ಹಿಂದೂ ಮುಸ್ಲಿಂ ಎನ್ನುವ ವ್ಯತ್ಯಾಸವಿಲ್ಲದೇ ಎಲ್ಲಾ ಭಾರತೀಯರಿಗೆ ಉತ್ತಮ ಆಡಳಿತ ನೀಡಿದ್ದಾರೆ ಎಂದರು.


ಈ ಬಾರಿ ೪೦೦ ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ನನ್ನನ್ನು ಗೆಲ್ಲಿಸಿ ನವ ಭಾರತ ನಿರ್ಮಾಣದಲ್ಲಿ ಸೇವೆ ಸಲ್ಲಿಸುವ ಅವಕಾಶವನ್ನು ಬಳ್ಳಾರಿ ಮತದಾರ ನೀಡಲಿದ್ದಾನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಉಸ್ತುವಾರಿಗಳಾದ ರವಿಕುಮಾರ್, ಜೆ ಡಿ ಎಸ್   ಜಿಲ್ಲಾಅಧ್ಯಕ್ಷ ಮೀನಹಳ್ಳಿ ತಾಯಣ್ಣ, ಮುನ್ನ ಬಾಯ್, ಇಬ್ರಾಹಿಂಬಾಬು, ದಮ್ಮೂರ್ ಶೇಖರ್, ಗೋನಾಹಾಳ್ ರಾಜಶೇಖರ್ ಗೌಡ,  ಧಾರಪ್ಪ ನಾಯಕ, ಕೆ ಎಸ್ ದಿವಾಕರ್,ಅಲಿಖಾನ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ