Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಚನ ಮಾಲಿಕೆಗಳು ನಿರಂತರವಾಗಿ ನಡೆಯುವುದರಿಂದ ಸಮಾಜದಲ್ಲಿ ಸತ್ಪ್ರವೃತ್ತಿ ಮತ್ತು ಶಾಂತಿ ನೆಲೆಸುತ್ತದೆ: ಅರವಿಂದ ದೇಶಪಾಂಡೆ

ಅಥಣಿ: ವ್ಯಾಸ ಭಾರತ ಪ್ರವಚನ ಮಾಲಿಕೆ ಭಾರತೀಯ ಸಂಸ್ಕೃತಿಯ ಅಮೂಲ್ಯ ಪರಂಪರೆಯನ್ನು ಜೀವಂತವಾಗಿಟ್ಟುಕೊಳ್ಳುವ ಮಹತ್ವದ ಕಾರ್ಯವಾಗಿದೆ. ಮಹಾಭಾರತದ ಶಾಶ್ವತ ಸಂದೇಶಗಳು ಕಾಲಾತೀತವಾಗಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಧರ್ಮ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಲು ಸಹಾಯಕವಾಗುತ್ತವೆ. ಇಂತಹ ಪ್ರವಚನ ಮಾಲಿಕೆಗಳು ನಿರಂತರವಾಗಿ ನಡೆಯುವುದರಿಂದ ಸಮಾಜದಲ್ಲಿ ಸತ್ಪ್ರವೃತ್ತಿ ಮತ್ತು ಶಾಂತಿ ನೆಲೆಸುತ್ತದೆ. ಎಂದು ಜ್ಞಾನ ಸತ್ರ ವೇದಿಕೆ ಅಧ್ಯಕ್ಷ ಅರವಿಂದ ದೇಶಪಾಂಡೆ ಹೇಳಿದರು

ಅಥಣಿ ಪಟ್ಟಣದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ಜ್ಞಾನ ಸತ್ರ ವೇದಿಕೆ ಅಥಣಿ ಸಂಸ್ಥಾಪಕ ಅಧ್ಯಕ್ಷ ಅರವಿಂದ ದೇಶಪಾಂಡೆ ಅವರ ನೇತೃತ್ವದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅದ್ಯಕ್ಷ ಅರವಿಂದ ದೇಶಪಾಂಡೆ ಮಾತನಾಡಿ ಬೆಂಗಳೂರಿನ ವಿದ್ವಾನ ಶ್ರೀ ಜಗದೀಶಶರ್ಮಾ ಸಂಪ ಅವರು ಉಪನ್ಯಾಸ ನೀಡಿಲಿದ್ದಾರೆ ಜ.೧೯ ರಿಂದ ೨೩ರ ವರೆಗೆ ಜೆ ಇ ಶಿಕ್ಷಣ ಸಂಸ್ಥೆಯ ಕಡಕೋಳ ಮಾಸ್ತರ ವೇದಿಕೆಯಲ್ಲಿ ಜ್ಞಾನ ಸತ್ರ ವೇದಿಕೆ, ಜಾಧವಜಿ ಶಿಕ್ಷಣ ಸಂಸ್ಥೆ, ಅಥಣಿ ಸಾಹಿತ್ಯ ಸಾಂಸ್ಕೃತಿಕ ಸಂಘ, ಸಿದ್ದೇಶ್ವರ ಮೋಫತ್ ವಾಚನಾಲಯ, ಅಥಣಿ ರೋಟರಿ ಸಂಸ್ಥೆ, ರಾವಬಹದ್ದೂರ ಮಂಗಸೂಳಿ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ವ್ಯಾಸ ಭಾರತ ಪ್ರವಚನ ಮಾಲಿಕೆ ಕಾರ್ಯಕ್ರಮ ನಡೆಯಲಿದೆ. ಮಹಾನ್ ಗ್ರಂಥದ ತತ್ತ್ವಾರ್ಥವನ್ನು ಜನಸಾಮಾನ್ಯರಿಗೆ ಸರಳವಾಗಿ ತಲುಪಿಸುವ ಉದ್ದೇಶದಿಂದ ಆಯೋಜಿಸಲಾಗುವ ಕಾರ್ಯಕ್ರಮವೇ ವ್ಯಾಸ ಭಾರತ ಪ್ರವಚನ ಮಾಲಿಕೆ ಆಗಿದ್ದು, ವ್ಯಾಸ ಭಾರತ ಪ್ರವಚನ ಮಾಲಿಕೆ ಯುವಕರಲ್ಲಿ ಆತ್ಮವಿಶ್ವಾಸ, ಶಿಸ್ತು, ಕರ್ತವ್ಯಪ್ರಜ್ಞೆ ಮತ್ತು ರಾಷ್ಟ್ರಭಕ್ತಿಯನ್ನು ಬೆಳೆಸಲು ಸಹಕಾರಿಯಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಜ್ಞಾವಂತರು ಭಾಗವಹಿಸಿ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು

ಈ ವೇಳೆ ಮುಖಂಡರಾದ ಗಜಾನನ ಮಂಗಸೂಳಿ, ಅರವಿಂದ ದೇಶಪಾಂಡೆ, ಸಚೀನ ದೇಸಾಯಿ, ಸಾಹಿತಿ ಬಾಳಪ್ಪ ಲೋಕಾಪೂರ, ನ್ಯಾಯವಾದಿ ವಿ ಎಸ್ ದಾತಾರ, ಅರುಣ ಯಲಗುದ್ರಿ, ನಿಲೇಶ ಜೇರೆ, ಮಹಾಲಿಂಗ ಮೇತ್ರಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ