Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಚನ ಮಾಲಿಕೆಗಳು ನಿರಂತರವಾಗಿ ನಡೆಯುವುದರಿಂದ ಸಮಾಜದಲ್ಲಿ ಸತ್ಪ್ರವೃತ್ತಿ ಮತ್ತು ಶಾಂತಿ ನೆಲೆಸುತ್ತದೆ: ಅರವಿಂದ ದೇಶಪಾಂಡೆ

ಅಥಣಿ: ವ್ಯಾಸ ಭಾರತ ಪ್ರವಚನ ಮಾಲಿಕೆ ಭಾರತೀಯ ಸಂಸ್ಕೃತಿಯ ಅಮೂಲ್ಯ ಪರಂಪರೆಯನ್ನು ಜೀವಂತವಾಗಿಟ್ಟುಕೊಳ್ಳುವ ಮಹತ್ವದ ಕಾರ್ಯವಾಗಿದೆ. ಮಹಾಭಾರತದ ಶಾಶ್ವತ ಸಂದೇಶಗಳು ಕಾಲಾತೀತವಾಗಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಧರ್ಮ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಲು ಸಹಾಯಕವಾಗುತ್ತವೆ. ಇಂತಹ ಪ್ರವಚನ ಮಾಲಿಕೆಗಳು ನಿರಂತರವಾಗಿ ನಡೆಯುವುದರಿಂದ ಸಮಾಜದಲ್ಲಿ ಸತ್ಪ್ರವೃತ್ತಿ ಮತ್ತು ಶಾಂತಿ ನೆಲೆಸುತ್ತದೆ. ಎಂದು ಜ್ಞಾನ ಸತ್ರ ವೇದಿಕೆ ಅಧ್ಯಕ್ಷ ಅರವಿಂದ ದೇಶಪಾಂಡೆ ಹೇಳಿದರು

ಅಥಣಿ ಪಟ್ಟಣದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ಜ್ಞಾನ ಸತ್ರ ವೇದಿಕೆ ಅಥಣಿ ಸಂಸ್ಥಾಪಕ ಅಧ್ಯಕ್ಷ ಅರವಿಂದ ದೇಶಪಾಂಡೆ ಅವರ ನೇತೃತ್ವದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅದ್ಯಕ್ಷ ಅರವಿಂದ ದೇಶಪಾಂಡೆ ಮಾತನಾಡಿ ಬೆಂಗಳೂರಿನ ವಿದ್ವಾನ ಶ್ರೀ ಜಗದೀಶಶರ್ಮಾ ಸಂಪ ಅವರು ಉಪನ್ಯಾಸ ನೀಡಿಲಿದ್ದಾರೆ ಜ.೧೯ ರಿಂದ ೨೩ರ ವರೆಗೆ ಜೆ ಇ ಶಿಕ್ಷಣ ಸಂಸ್ಥೆಯ ಕಡಕೋಳ ಮಾಸ್ತರ ವೇದಿಕೆಯಲ್ಲಿ ಜ್ಞಾನ ಸತ್ರ ವೇದಿಕೆ, ಜಾಧವಜಿ ಶಿಕ್ಷಣ ಸಂಸ್ಥೆ, ಅಥಣಿ ಸಾಹಿತ್ಯ ಸಾಂಸ್ಕೃತಿಕ ಸಂಘ, ಸಿದ್ದೇಶ್ವರ ಮೋಫತ್ ವಾಚನಾಲಯ, ಅಥಣಿ ರೋಟರಿ ಸಂಸ್ಥೆ, ರಾವಬಹದ್ದೂರ ಮಂಗಸೂಳಿ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ವ್ಯಾಸ ಭಾರತ ಪ್ರವಚನ ಮಾಲಿಕೆ ಕಾರ್ಯಕ್ರಮ ನಡೆಯಲಿದೆ. ಮಹಾನ್ ಗ್ರಂಥದ ತತ್ತ್ವಾರ್ಥವನ್ನು ಜನಸಾಮಾನ್ಯರಿಗೆ ಸರಳವಾಗಿ ತಲುಪಿಸುವ ಉದ್ದೇಶದಿಂದ ಆಯೋಜಿಸಲಾಗುವ ಕಾರ್ಯಕ್ರಮವೇ ವ್ಯಾಸ ಭಾರತ ಪ್ರವಚನ ಮಾಲಿಕೆ ಆಗಿದ್ದು, ವ್ಯಾಸ ಭಾರತ ಪ್ರವಚನ ಮಾಲಿಕೆ ಯುವಕರಲ್ಲಿ ಆತ್ಮವಿಶ್ವಾಸ, ಶಿಸ್ತು, ಕರ್ತವ್ಯಪ್ರಜ್ಞೆ ಮತ್ತು ರಾಷ್ಟ್ರಭಕ್ತಿಯನ್ನು ಬೆಳೆಸಲು ಸಹಕಾರಿಯಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಜ್ಞಾವಂತರು ಭಾಗವಹಿಸಿ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು

ಈ ವೇಳೆ ಮುಖಂಡರಾದ ಗಜಾನನ ಮಂಗಸೂಳಿ, ಅರವಿಂದ ದೇಶಪಾಂಡೆ, ಸಚೀನ ದೇಸಾಯಿ, ಸಾಹಿತಿ ಬಾಳಪ್ಪ ಲೋಕಾಪೂರ, ನ್ಯಾಯವಾದಿ ವಿ ಎಸ್ ದಾತಾರ, ಅರುಣ ಯಲಗುದ್ರಿ, ನಿಲೇಶ ಜೇರೆ, ಮಹಾಲಿಂಗ ಮೇತ್ರಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ