ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ರಾಜ್ಯ ಘಟಕದಲ್ಲಿ ಹೆಚ್ಚುತ್ತಿರುವ ಆಂತರಿಕ ಅಸಮಾಧಾನದ ಕುರಿತು ಮಾತುಕತೆ ನಡೆಯುತ್ತಿರುವ ಮಧ್ಯೆ ಪಂಜಾಬ್ನ ತಮ್ಮ ನಾಯಕರ ಸಭೆಯನ್ನು ಕರೆದಿದ್ದಾರೆ. ಕೇಜ್ರಿವಾಲ್ ಅವರು ಬೆಳಗ್ಗೆ 11 ಗಂಟೆಯಿಂದ ದೆಹಲಿಯ ಕಪುರ್ತಲಾ ಹೌಸ್ನಲ್ಲಿ ಭಗವಂತ್ ಮಾನ್, ಅವರ ಸಚಿವರು ಮತ್ತು ಪಂಜಾಬ್ನ ಎಲ್ಲಾ ಶಾಸಕರು ಮತ್ತು ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ.
ದೆಹಲಿಯ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಪದಚ್ಯುತಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಹೇಳಿಕೊಂಡಿವೆ. ಭಗವಂತ್ ಮಾನ್ ದೆಹಲಿಯಲ್ಲಿ ಪ್ರಚಾರ ಮಾಡಿದ್ದ 12ಕ್ಕೆ 12 ಕ್ಷೇತ್ರದಲ್ಲಿ ಎಎಪಿ ಸೋಲು ಕಂಡಿದೆ. ಅದರಲ್ಲಿ ಅರವಿಂದ್ ಕೇಜ್ರಿವಾಲ್ ಕ್ಷೇತ್ರವೂ ಇತ್ತು.