Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಡಿ.ಎಂ.ಸಿ ಯ ನೂತನ ಅಧ್ಯಕ್ಷರಾಗಿ ಹನಮಂತ ಮಡಿವಾಳರ ಅವಿರೋಧ ಆಯ್ಕೆ

ರಾಮದುರ್ಗ: ತಾಲೂಕಿನ ಕಲಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಯ ನೂತನ ಅಧ್ಯಕ್ಷರನ್ನಾಗಿ ಮಹದಾಯಿ ಹೋರಾಟಗಾರ ಹನಮಂತ ಮಡಿವಾಳರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪ್ರಸ್ತುತ ೧೮ ಜನ ಸದಸ್ಯರು ಇರುವ ಸಮಿತಿಯಲ್ಲಿ ಏಳು ಜನ ಸದಸ್ಯರ ಮಕ್ಕಳು ಏಳನೆಯ ತರಗತಿ ಉತ್ತೀರ್ಣಗೊಂಡು ಪ್ರೌಢಶಾಲೆಗೆ ಪ್ರವೇಶ ಪಡೆದ ಕಾರಣ ಶಿಕ್ಷಣ ಇಲಾಖೆಯ ನಿಯಮಾನುಸಾರ ಆ ಏಳು ಜನ ಸದಸ್ಯರು ತಮ್ಮ ಸ್ವ ಇಚ್ಛೆಯಿಂದ ತಮ್ಮ ಸ್ಥಾನಗಳಿಗೆ ನೂತನ ಸದಸ್ಯರುಗಳ ಹೆಸರುಗಳನ್ನು ಸೂಚಿಸಿ ನೇಮಕ ಮಾಡಿದರು, ನಂತರ ಎಲ್ಲ ಸದಸ್ಯರುಗಳು ಸೇರಿ ಅಧ್ಯಕ್ಷರನ್ನು ಆಯ್ಕೆ ಮಾಡಿದರು.
ಶಾಲೆಯ ಪದೊನ್ನತಿ ಮುಖ್ಯೋಪಾಧ್ಯಾಯ ಆರ್.ಪಿ. ಬೆಟಗೇರಿ ಅವರು ಆಯ್ಕೆ ಪ್ರಕ್ರಿಯೆಯನ್ನು ನೆರವೇರಿಸಿ, ಶಾಲೆಯ ಸವಾಂಗೀಣ ಅಭಿವೃದ್ಧಿಗೆ ಸಮಿತಿಯ ಹಾಗೂ ಗ್ರಾಮಸ್ಥರ ಸಹಕಾರ ಕೋರಿದರು.
ಈ ಸಂಧರ್ಭದಲ್ಲಿ ಗ್ರಾಮದ ಯುವ ಮುಖಂಡ ಕಲ್ಲಪ್ಪ ಜಗ್ಗಲ ಮಾತನಾಡಿ, ನಮ್ಮೂರಿನ ಶಾಲಾ ಮಕ್ಕಳಿಗೆ ಖಾಸಗಿ ಶಾಲೆಯವರಂತೆ ಟೈ, ಬೆಲ್ಟ್ ಹಾಗೂ ಐಡೆಂಟಿಟಿ ಕಾರ್ಡ ಮಾಡಿಸಿ ಕೊಡುವ ವಾಗ್ದಾನ ನೀಡಿದರು.
ಪಿ.ಎಲ್.ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ನಾರಾಯಣ ಹೂಲಗೇರಿ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಗ್ರಾಮಸ್ಥರೆಲ್ಲ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಹೇಳುದರು. ಎಸ್.ಸಿ. ಹಲಗತ್ತಿ, ಬಸವರಾಜ ಗುಡ್ಡದ, ನಿಕಟಪೂರ್ವ ಅಧ್ಯಕ್ಷ ಜಗದೀಶ ರಾಯರಡ್ಡಿ, ನಿವೃತ್ತ ಶಿಕ್ಷಕ ವಿ.ಬಿ. ಸಂಗಳ, ಹನಮಂತ ಹಾಗನೂರ, ಎಸ್.ಆರ್. ಅತ್ತಾರ, ಸಮಿತಿಯ ಉಪಾಧ್ಯಕ್ಷೆ ಗಿರಿಜಾ ಅಜಗುಂಡಿ, ಮಲ್ಲಿಕಾರ್ಜುನ ಉಳ್ಳಾಗಡ್ಡಿ, ವೆಂಕಣ್ಣ ರಾಯರಡ್ಡಿ, ಬಸಪ್ಪ ಮಾದರ, ಬಸವರಾಜ ಕಿಲಬನೂರ, ಶಿಕ್ಷಕರಾದ ಮಂಜುನಾಥ ಹಂಪಿಹೊಳಿ, ಎಸ್.ಟಿ. ಪಾಟೀಲ, ಗೀತಾ ಆಲೂರ, ಗೀತ ನಾಯ್ಕಲ್, ಗಂಗಮ್ಮ ರಾಯರಡ್ಡಿ, ವಿನೋದಾ ಮಳಲಿ ಸೇರಿದಂತೆ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸಿಟಿ ಸೈಕ್ಲಿಂಗ್ ಲೀಗ್ಯರಗಟ್ಟಿ: ಖಾಯಂ ನ್ಯಾಯಾಲಯಕ್ಕೆ ಚಾಲನೆ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಮುಖ್ಯ ಕಾರ್ಯದರ್ಶಿಗಳ  ಆದೇಶ: ನೌಕರರ ಸಂಘದ ಹೋರಾಟಕ್ಕೆ ಸಂದ ಜಯ ಮಹೇಶ ಹುಬ್ಬಳ್ಳಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಸಿಂಗೆ ಉಚ್ಛಾಟನೆಗೆ ದಲಿತ ಮುಖಂಡರ ಆಗ್ರಹಎಸ್.ಡಿ.ಎಂ.ಸಿ ಯ ನೂತನ ಅಧ್ಯಕ್ಷರಾಗಿ ಹನಮಂತ ಮಡಿವಾಳರ ಅವಿರೋಧ ಆಯ್ಕೆ*ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿ ಮಾತು ಉಳಿಸಿಕೊಳ್ಳಿ:  ಮಹಾಂತೇಶ ಬಾಡಗಿ ಆಗ್ರಹಘಟಪ್ರಭಾ ರೇಲ್ವೆ  ಇಲಾಖೆ ಆಯ್  ಜಿ ತಿರಿಪಾಲ  ಮತ್ತು ಮಲ್ಲಿಕಾರ್ಜುನ ಇಂಗಳೆ  ಅವರಿಗೆ ಬೀಳ್ಕೊಡುಗೆ ಸಮಾರಂಭ.ಬಸ್ ನಿಲ್ದಾಣದಲ್ಲಿ ಯರ್ರಾ ಬಿರ್ರಿ ಖಾಸಗಿ ವಾಹನ ನಿಲುಗಡೆ : ಪ್ರಯಾಣಿಕರ ಪರದಾಟನಮ್ಮದು ಭಯೋತ್ಪಾದಕರಿಗೆ ಬಿರಿಯಾನಿಕೊಟ್ಟು ಸಲಹುವ ಸರ್ಕಾರವಲ್ಲ: ಸಿ.ಟಿ.ರವಿ.ಸೂರ್ಯ ನ್ಯೂಸ್ ಕನ್ನಡ ವಾರ್ಷಿಕೋತ್ಸವದಲ್ಲಿ ಹೊನ್ನುರಸ್ವಾಮಿ ಕೆ.ಟಿ. ಅವರಿಗೆ “ನಿರ್ಭೀತ ವರದಿಗಾರ ರತ್ನ” ಪ್ರಶಸ್ತಿ ಪ್ರದಾನ