Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ನೇಮಕ

ಗದಗ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಥಮ ಅಧ್ಯಕ್ಷರನ್ನಾಗಿ ಅಶೋಕ ಕೆ. ಮಂದಾಲಿ ಇವರನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಅವರು ನೇಮಿಸಿದ್ದಾರೆ.

ಪ್ರಸ್ತುತ ಗದಗ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾಗಿರುವ ಅಶೋಕ ಮಂದಾಲಿ ಅವರು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯನಿರ್ವಹಿಸಿದ್ದರು. ಜೊತೆಗೆ ಇದಕ್ಕೂ ಮುನ್ನ ಗದಗ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮೂರು ವರ್ಷದ ಒಂದು ಅವಧಿಗೆ, ಅದಕ್ಕೂ ಮುನ್ನ ಉಪಾಧ್ಯಕ್ಷರಾಗಿ ಮೂರು ವರ್ಷ ಕಾರ್ಯನಿರ್ವಹಿಸಿದ್ದರು.
ವಿದ್ಯಾರ್ಥಿ ಹಂತದಿAದಲೇ ಪಕ್ಷದೊಂದಿಗೆ ಗುರುತಿಸಿಕೊಮಡಿದ್ದ ಇವರು ಗದಗ ತಾಲ್ಲೂಕು ವಿದ್ಯಾರ್ಥಿ ಕಾಂಗ್ರೆಸ್ (ಎನ್‌ಎಸ್‌ಯುಐ) ನ ಅಧ್ಯಕ್ಷರಾಗಿ ಐದು ವರ್ಷಗಳ ಕಾಲ ಇದ್ದರು. ಇವರ ಪಕ್ಷ ಸಂಘಟನೆಯನ್ನು ಗಮನಿಸಿರುವ ಪಕ್ಷವು, ಇವರಿಗೆ ಇದೀಗ ಮತ್ತೊಂದು ಜವಾಬ್ದಾರಿ ನೀಡಿದೆ.

ಅಭಿನಂದನೆ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ಅವರು ನೇಮಕವಾಗಿದ್ದಕ್ಕೆ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ರೋಣ ವಿಧಾನಸಭಾ ಮತಕ್ಷೇತ್ರದ ಶಾಸಕರು, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಜಿ.ಎಸ್. ಪಾಟೀಲ, ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸಚಿವರೂ ಆಗಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ. ಆರ್. ಯಾವಗಲ್ಲ, ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ, ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ, ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ಬಿ.ಬಿ. ಅಸೂಟಿ, ಬಸವರಾಜ ಸುಂಕಾಪೂರ, ಪ್ರವೀಣ ಯಾವಗಲ್ಲ, ಎಂ.ಬಿ. ಕೋಳೇರಿ, ವೀರಣ್ಣ ಅಂಗಡಿ, ಶರಣಪ್ಪ ಬೆಟಗೇರಿ, ಡಿ.ಡಿ. ಮೋರನಾಳ, ಜಿ.ಆರ್. ಕೊಪ್ಪದ, ಹುಮಾಯೂನ ಮಾಗಡಿ, ಗದಗ ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಸವರಾಜ ಕಡೇಮನಿ ಸೇರಿ ಪಕ್ಷದ ಹಿರಿಯ-ಕಿರಿಯ ಮುಖಂಡರು ಅಭಿನಂದಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ