ಹಸಿರು ಕ್ರಾಂತಿ ವರದಿ ಕಲಬುರಗಿ
ಹೈದ್ರಾಬಾದ ಕರ್ನಾಟಕ ಯುವ ಕಲಾವಿದರ ಹಾಗೂ ಸಾಂಸ್ಕೃತಿಕ ನೃತ್ಯ ಸಂಘವು ತನ್ನ 11ನೇ ವಾರ್ಷಿಕೋತ್ಸವದ ಅಂಗವಾಗಿ ದೈಹಿಕ ಶಿಕ್ಷಣ ಶಿಕ್ಷಕ ಅಶೋಕಕುಮಾರ ಎಸ್. ಉಪ್ಪಿನ್ ಅವರನ್ನು ಸಾಧಕ ರತ್ನ ಪ್ರಶಸ್ತಿ 2026ಗೆ ಆಯ್ಕೆ ಮಾಡಿದೆ.
ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಮೇ 23, ಶನಿವಾರ ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.
ನಾಡು, ನುಡಿ, ಜಲಕ್ಕೋಸ್ಕರ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಅಶೋಕಕುಮಾರ ಅವರಿಗೆ ಈ ಪ್ರಶಸ್ತಿಯನ್ನು ಸಂಸ್ಥೆ ಆಯ್ಕೆ ಮಾಡಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ಕಾವ್ಯ, ಹೈದ್ರಾಬಾದ ಕರ್ನಾಟಕ ಯುವ ಕಲಾವಿದರ ಹಾಗೂ ಸಾಂಸ್ಕೃತಿಕ ನೃತ್ಯ ಸಂಘದ ಸಂಸ್ಥಾಪಕ ಅಧ್ಯಕ್ಷ ಗುರು ಬಂಡಿ, ಉದ್ದಿಮೆದಾರರು ಹಾಗೂ ಚಿತ್ತಾಪೂರದ ಗಂಗಾ ಪರಮೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ.ಅಮರೇಶ್ವರಿ ಬಾಬುರಾವ್ ಚಿಂಚನಸೂರ ಅವರು ಪಾಲ್ಗೊಳ್ಳಲಿದ್ದಾರೆ.
ಇದೆ ವೇಳೆ ಅನೇಕ ಸಾಧಕರಿಗೂ ಸಾಧಕ ರತ್ನ ಪ್ರಶಸ್ತಿ ಕೂಡ ಜರುಗಲಿದೆ.
