Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ವಿಧಾನಸಭಾ ಚುನಾವಣಾ ಫಲಿತಾಂಶ

ನವದೆಹಲಿ,

ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ(Assembly Election Result)ಕ್ಕೆ ಕ್ಷಣಗಣನೆ ಶುರುವಾಗಿದೆ. ಚುನಾವಣಾ ಆಯೋಗವು 2026 ರ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಮೇ 4 ರಂದು ಘೋಷಿಸಲಿದೆ. ಸೋಮವಾರ ಸಂಜೆಯ ವೇಳೆಗೆ ಫಲಿತಾಂಶ ಬರುವ ನಿರೀಕ್ಷೆಯಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಿ ನಂತರ ಇವಿಎಂಗಳಲ್ಲಿ ದಾಖಲಾಗಿರುವ ಮತಗಳನ್ನು ಎಣಿಕೆ ಮಾಡುವ ಪ್ರಮಾಣಿತ ಪ್ರಕ್ರಿಯೆಯನ್ನು ನಡೆಯುತ್ತದೆ. ಎಲ್ಲಾ ಎಣಿಕೆ ಕೇಂದ್ರಗಳಲ್ಲಿ ಬಹುಹಂತದ ಭದ್ರತಾ ಕವಚವನ್ನು ಅಳವಡಿಸಲಾಗಿದ್ದು, ಏಕಕಾಲದಲ್ಲಿ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭಾ ಚುನಾವಣೆಗಳ ಫಲಿತಾಂಶಕ್ಕಾಗಿ ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಸುದೀರ್ಘ ಮತದಾನ ಪ್ರಕ್ರಿಯೆಯ ನಂತರ, ನಾಳೆ ಬೆಳಿಗ್ಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಚಿತ್ರಣ ಸ್ಪಷ್ಟವಾಗಲಿದೆ. ನಿಖರ ಮಾಹಿತಿಗಾಗಿ results.eci.gov.in ಗೆ ಭೇಟಿ ನೀಡಬಹುದು.

ಈ ಬಾರಿಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಫಾಲ್ಟಾ ಕ್ಷೇತ್ರವು ವಿಶೇಷ ಗಮನ ಸೆಳೆದಿದೆ. ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಇಲ್ಲಿ ಆಯೋಗವು ಮಹತ್ವದ ನಿರ್ಧಾರ ಕೈಗೊಂಡಿದೆ. ಫಾಲ್ಟಾ ಕ್ಷೇತ್ರದ ಎಲ್ಲಾ 285 ಬೂತ್‌ಗಳಲ್ಲಿ ಮೇ 21 ರಂದು ಹೊಸದಾಗಿ ಮತದಾನ ನಡೆಸಲು ಆಯೋಗ ಆದೇಶಿಸಿದೆ. ಹಿಂದಿನ ಸುತ್ತಿನ ಮತದಾನದ ಸಮಯದಲ್ಲಿ ನಡೆದ ತೀವ್ರವಾದ ಚುನಾವಣಾ ಅಪರಾಧಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯ ಬುಡಮೇಲು ಮಾಡುವಿಕೆಯ ವರದಿಗಳಿಂದಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ದಿಷ್ಟ ಸ್ಥಾನದ ಮತ ಎಣಿಕೆಯು ಮೇ 24 ರಂದು ನಡೆಯಲಿದೆ.

ಐದು ರಾಜ್ಯಗಳಲ್ಲಿ ಹರಡಿರುವ 824 ಕ್ಷೇತ್ರಗಳ ಈ ಚುನಾವಣಾ ಫಲಿತಾಂಶವು ಕೇವಲ ಅಧಿಕಾರ ಹಸ್ತಾಂತರವಲ್ಲ. ಪ್ರಮುಖ ರಾಜಕೀಯ ಪಕ್ಷಗಳಿಗೆ ಇದು ರಾಷ್ಟ್ರಮಟ್ಟದ ಜನಬೆಂಬಲವನ್ನು ಅಳೆಯುವ ಮಾಪಕವಾಗಿದೆ. ಮೇ 4ರ ಫಲಿತಾಂಶವು ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯ ಜನತೆಯ ತೀರ್ಪನ್ನು ಜಗತ್ತಿನ ಮುಂದೆ ತೆರೆದಿಡಲಿದೆ. ಪ್ರಜಾಪ್ರಭುತ್ವದ ಈ ದೊಡ್ಡ ಹಬ್ಬದ ಅಂತಿಮ ಫಲಿತಾಂಶವು ಭಾರತದ ರಾಜಕೀಯ ಭೂಪಟದಲ್ಲಿ ಹೊಸ ದಾಖಲೆಗಳನ್ನು ಬರೆಯುವ ನಿರೀಕ್ಷೆಯಿದೆ.

ಅಸ್ಸಾಂನಲ್ಲಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ, ಪುನರುಜ್ಜೀವನಗೊಳ್ಳುತ್ತಿರುವ ವಿರೋಧ ಪಕ್ಷದ ಮೈತ್ರಿಕೂಟದ ಸವಾಲಿನ ನಡುವೆಯೂ ತನ್ನ ಭದ್ರಕೋಟೆಯನ್ನು ರಕ್ಷಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿ ಮತದಾರರ ಮನಗೆಲ್ಲಲು ಕಸರತ್ತು ನಡೆಸಿವೆ. ಆದರೆ ಈಗಾಗಲೇ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು ಎಲ್ಲರ ಚಿತ್ತ ಫಲಿತಾಂಂಸದತ್ತ ಕೇಂದ್ರಿಕೃತವಾಗಿದೆ.

ಚುನಾವಣೆ ಘೋಷಣೆಯಾದಾಗಿನಿಂದ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಿದ್ದ ಈ ಚುನಾವಣೆ ಹೆಚ್ಚು ಕುತೂಹಲ ಕೆರಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮೂರು ಬಾರಿ ಮುಖ್ಯಮಂತ್ರಿಯಾಗಿ ಪಾರುಮತ್ಯ ಮೆರೆದಿದ್ದು, ಈ ಬಾರಿಯ ಚುನಾವಣೆಯಲ್ಲಿ ಟಿಎಂಸಿ ಬುಡ ಅಲುಗಾಡಲಿದೆ ಎಂದು ಹೇಳಲಾಗುತ್ತಿದೆ.

ಈ ಬಾರಿಯ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಅಖಾಡದಲ್ಲಿ ಎರಡು ಪಕ್ಷಗಳು ಸೆಡ್ಡು ಹೊಡೆದಿರುವುದರಿಂದ ಫಲಿತಾಂಶ ಇಡೀ ದೇಶದ ಗಮನ ಸೆಳೆದಿದೆ. ಮತ ಎಣಿಕೆಗಾಗಿ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಭದ್ರತೆಯನ್ನು ಕೈಗೊಂಡಿದೆ. ಮೊದಲು ಅಂಚೆ ಮತಪತ್ರಗಳನ್ನು (Postal Ballots) ಎಣಿಸಲಾಗುತ್ತದೆ, ನಂತರ ಇವಿಎಂ (EVM) ಮತಗಳ ಎಣಿಕೆ ನಡೆಯಲಿದೆ. ಮರು ಮತದಾನದ ಕಾರಣದಿಂದಾಗಿ ಪಶ್ಚಿಮ ಬಂಗಾಳದ ಫಾಲ್ಟಾ ಕ್ಷೇತ್ರದ ಫಲಿತಾಂಶ ಮಾತ್ರ ಮೇ 24ಕ್ಕೆ ಪ್ರಕಟವಾಗಲಿದ್ದು, ಉಳಿದೆಲ್ಲಾ ಕ್ಷೇತ್ರಗಳ ಫಲಿತಾಂಶ ನಾಳೆ ಸಂಜೆಯೊಳಗೆ ಲಭ್ಯವಾಗಲಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚನ್ನಮ್ಮನ‌ ಕಿತ್ತೂರು ನೂತನ‌ ಬಸ್ ಘಟಕ‌ ಉದ್ಘಾಟನೆಶೃಂಗೇರಿ ಕ್ಷೇತ್ರ - ಮೂರು ವರ್ಷದ ಬಳಿಕ ಮತಗಳ ಮರು ಎಣಿಕೆ; ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆ ಜಯಬೆಳಗಾವಿ ವಕೀಲರ ಸಂಘದ ಅಧ್ಯಕ್ಷರಾಗಿ ಬಿ.ಜೆ. ಗಂಗಾಯಿ ಆಯ್ಕೆದಿಟ್ಟ ಹೆಜ್ಜೆಯನ್ನಿಟ್ಟ ಗವಿಸಿದ್ದೇಶ್ವರ ಮಠ ; 60 ಕೋಟಿ ವೆಚ್ಚದಲ್ಲಿ ಗುರುಕುಲ ನಿರ್ಮಾಣನೀಟ್ ಎಕ್ಸಾಂ ಬರೆಯಲು ನಿರಾಕರಣೆ: ಕಣ್ಣೀರಿಟ್ಟ ವಿದ್ಯಾರ್ಥಿನಿಯರುನಾಳೆ ವಿಧಾನಸಭಾ ಚುನಾವಣಾ ಫಲಿತಾಂಶಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆಗೆ ಬಿಜೆಪಿಯಿಂದ ಹೊಸ ತಗಾದೆಬಜೆಟ್‌ ಘೋಷಣೆಗಳು ಜಾರಿಯಾಗದಿದ್ದರೇ ಕಾರ್ಯದರ್ಶಿಗಳೇ ಜವಾಬ್ದಾರರುಧಾರವಾಡದ ಅಭಿವೃದ್ಧಿಗೆ ಬಿಜೆಪಿ ನಾಯಕರೇ ಕಂಟಕ: ಅರವಿಂದ ಏಗನಗೌಡರ ನೇರ ವಾಗ್ದಾಳಿ.ಪವಿತ್ರ ಸ್ಥಳಗಳ ಬಳಿ ಮದ್ಯದ ಬಾರ್‌ಗಳು ಇರುವುದನ್ನು ಯಾವುದೇ ಧರ್ಮ ಸಹಿಸಲು ಸಾದ್ಯವಿಲ್ಲ ಮುಸ್ಲಿಮ ಧರ್ಮಗುರು ಮೌಲಾನಾ ಅಬ್ಬಾಸ್ ಆಕ್ರೋಶ