Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಡಿಸಲು ಆಕಸ್ಮಿಕ ಬೆಂಕಿ/ಶಾಸಕ ಲಕ್ಷ್ಮಣ ಸವದಿ ಸಂತ್ರಸ್ತ ಕುಟುಂಬಕ್ಕೆ ನೆರವು

ಅಥಣಿ: ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ವಿಮಲವ್ವಾ ಕಲ್ಲಪ್ಪ ನಾಗನೂರ ಎಂಬುವವರ ಗುಡಿಸಲು ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಈ ದುರ್ಘಟನೆಯಲ್ಲಿ ಗುಡಿಸಲಿನಲ್ಲಿದ್ದ ಬಟ್ಟೆಗಳು, ಆಹಾರ ಧಾನ್ಯಗಳು, ಬೆಲೆಬಾಳುವ ವಸ್ತುಗಳು ಮತ್ತು ಪ್ರಮುಖ ದಾಖಲೆಗಳು ಸೇರಿ ೨ ರಿಂದ ೩ ಲಕ್ಷ ರೂ.ಗಳ ಹಾನಿ ಸಂಭವಿದ್ದ ಘಟನಾ ಸ್ಥಳಕ್ಕೆ ಶಾಸಕ ಲಕ್ಷö್ಮಣ ಸವದಿ ಬೇಟಿ ನೀಡಿ ೫೦ ಸಾವಿರ ರೂ.ಗಳ ನೆರವು ನೀಡಿ ಮಾನವಿಯತೆ ಮೇರೆದಿದ್ದಾರೆ.
ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮ ಬಳಿಯ ಬಡ ಕುಟುಂಬ ಗುಡಿಸಿಲಿನಲ್ಲಿ ವಾಸವಿದ್ದು ಆಕ್ಮೀಕ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿಯಾಗಿದ್ದು ಸೋಮವಾರ ಶಾಸಕ ಲಕ್ಷö್ಮಣ ಸವದಿ ಅವರು ಸ್ಥಳಕ್ಕೆ ಬೇಟಿ ನೀಡಿ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಸಂತ್ರಸ್ತ ಕುಟುಂಬದ ಮುಖ್ಯಸ್ಥೆ ವಿಮಲವ್ವಾ ಕಲ್ಲಪ್ಪ ನಾಗನೂರ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಲಕ್ಷ್ಮಣ ಸವದಿ ಅವರು, ನಷ್ಟದ ಕುರಿತು ವಿಷಾದ ವ್ಯಕ್ತಪಡಿಸಿದರು.
ಈ ವೇಳೆ ಶಾಸಕ ಲಕ್ಷö್ಮಣ ಸವದಿ ಮಾತನಾಡಿ ವಿಮಲವ್ವಾ ನಾಗನೂರ ಅವರ ಮನೆ ಅಕಸ್ಮಿಕ ಬೆಂಕಿಯಿಂದ ಸುಟ್ಟು ಹೋಗಿರುವ ಘಟನೆ ಅತ್ಯಂತ ದುಃಖಕರ. ಈ ಅನಿರೀಕ್ಷಿತ ಅನಾಹುತದಿಂದ ಕುಟುಂಬಕ್ಕೆ ಆಗಿರುವ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಆದರೆ, ಸಂತ್ರಸ್ತ ಕುಟುಂಬವು ಧೈರ್ಯಗೆಡಬಾರದು. ಕೂಡಲೇ ಸರ್ಕಾರದಿಂದ ಸಿಗಬೇಕಾದ ಎಲ್ಲ ರೀತಿಯ ಪರಿಹಾರ ಮತ್ತು ಸೂಕ್ತ ಅನುದಾನವನ್ನು ಆದಷ್ಟು ಬೇಗನೆ ಕೊಡಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಸಂತ್ರಸ್ತ ಕುಟುಂಬಕ್ಕೆ ತಾತ್ಕಾಲಿಕ ನೆರವು ಒದಗಿಸುವುದರ ಜೊತೆಗೆ, ಸರ್ಕಾರದಿಂದ ಗರಿಷ್ಠ ಪರಿಹಾರ ಮತ್ತು ಮನೆ ನಿರ್ಮಾಣಕ್ಕೆ ಸಹಾಯಧನ ಕೊಡಿಸುವ ಭರವಸೆಯನ್ನು ನೀಡಿದರು.
ಈ ವೇಳೆ ಅಶೋಕ ಕೌಜಲಗಿ, ಶ್ರೀಶೈಲ ನಾಯಕ, ಬಸವರಾಜ ಮರನೂರ್, ವಿನಾಯಕ ಕರಬಸಪ್ಪಗೊಳ, ಮಲ್ಲು ಕುಳ್ಳೋಳಿ, ಮುತ್ತು ಮೊಕಾಶಿ, ಬಸು ತೇರದಾಳ, ಆನಂದ ಮಾದಗುಡಿ, ಅಧಿಕಾರಿ ಎಮ್. ಎಮ್ ಮಿರ್ಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ