Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಾಯಕ ಅಧಿಕಾರಿಗಳು, ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ: ಬಿ.ವೈ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಭಾಗ್ಯಗಳ ಸರ್ಕಾರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ಆಡಳಿತದಲ್ಲಿ ಅಮಾಯಕ ಹೆಣ್ಣುಮಕ್ಕಳಿಗೆ ಕೊಲೆ ಭಾಗ್ಯ, ಪ್ರಮಾಣಿಕ ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ, ಅಸಹಾಯಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಕೆಆರ್‌ಐಡಿಎಲ್ ನಿಂದ ಬಿಲ್ ಪಾವತಿಯಾಗದೇ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್.ಗೌಡರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ಭ್ರಷ್ಟ ವ್ಯೂಹಕ್ಕೆ ಸಿಲುಕಿದ ಅಧಿಕಾರಿಯೊಬ್ಬರ ಆತ್ಮಹತ್ಯೆಯ ಕರಿನೆರಳು ಅಚ್ಚೊತ್ತಿರುವ ಬೆನ್ನಲೇ ಕೆಆರ್‌ಐಡಿಎಲ್ ನಿಂದ ಬಿಲ್ ಪಾವತಿಯಾಗದೇ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್.ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ, ಈ ಸರ್ಕಾರದಲ್ಲಿ ಏನಾಗುತ್ತಿದೆ ಎಂಬ ಆತಂಕ ಜನರಲ್ಲಿ ಮೂಡುತ್ತಿದೆ ಎಂದು ಹೇಳಿದ್ದಾರೆ.

ಭಾಗ್ಯಗಳ ಸರ್ಕಾರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ಆಡಳಿತದಲ್ಲಿ ಅಮಾಯಕ ಹೆಣ್ಣುಮಕ್ಕಳಿಗೆ ಕೊಲೆ ಭಾಗ್ಯ, ಪ್ರಮಾಣಿಕ ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ, ಅಸಹಾಯಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಲಾಗುತ್ತಿದೆ ಬರಿದಾಗಿರುವ ಸರ್ಕಾರಿ ಖಜಾನೆ ಗುತ್ತಿಗೆದಾರರ ಪಾಲಿಗೆ ಆತ್ಮಹತ್ಯೆಯ ಬಾವಿಯಾಗುತ್ತಿದೆ. ಈ ಸರ್ಕಾರಕ್ಕೆ ಮಾನವ ಜೀವಗಳೆಂದರೆ ಅದು ಕೇವಲದ ಸಂಕೇತವಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ