Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವೋಚ್ಚ ನ್ಯಾಯಾಲಯದ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿ ಅಥಣಿ ಬಂದ್,ಪ್ರತಿಭಟನೆ

ಅಥಣಿ: ಸರ್ವೋಚ್ಚ ನ್ಯಾಯಾಲಯದ ಸಿಜೆಐ ಗವಾಯಿ ಅವರಿಗೆ ಶೂ ಎಸೆದು ಅವಮಾನಿಸಿದ ಕಿಶೋರ್ ರಾಕೇಶ ಮತ್ತು ಅಂಬೇಡ್ಕರ್ ಅವರ ಬಗ್ಗೆ ಅವಮಾನಕರ ಮಾತುಗಳನ್ನಾಡಿದ ಅನಿಲ್ ಮಿಶ್ರಾ ವಿರುದ್ದ ಉಗ್ರ ಕ್ರಮ ಕೈಗೊಳ್ಳಬೇಕು ಮತ್ತೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೈಗೊಳ್ಳಬೇಕು ಎಂದು ಮುಖಂಡ ಮಹಾಂತೇಶ ಬಾಡಗಿ ಹೇಳಿದರು

ಅಥಣಿ ಪಟ್ಟಣದಲ್ಲಿ ಗುರುವಾರ ವಿವಿಧ ಸಂಘಟನೆಗಳ ಮಹಾಒಕ್ಕೂಟದಿಂದ ಬೆಳಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ನಡೆದ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ವೋಚ್ಚ ನ್ಯಾಯಾಲಯದ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿ ಕೇಂದ್ರ ಸರಕಾರದ ವಿರುದ್ದ ಘೋಷಣೇಗಳನ್ನು ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ತಹಶೀಲ್ದಾರ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು. ಪಟ್ಟಣದ ಎಲ್ಲ ವ್ಯಾಪಾರಸ್ಥರು ಪ್ರತಿಭಟನೆ ಬೆಂಬಲಿಸಿ ಅಂಗಡಿ ಮುಗ್ಗಟ್ಟುಗಳನ್ನು ಬಂದ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದರು. ಅಲ್ಲದೆ ಶೂ ಎಸೆದ ಆರೋಪಿ ವಿರುದ್ದ ದೇಶ ದ್ರೋಹ ಪ್ರಕರಣವನ್ನು ದಾಖಲಿಸಿ ಕ್ರಮ ಕೈಗೊಳ್ಳಬೇಕು ಮತ್ತು ಅಂಬೇಡಕರ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಅನೀಲ ಶರ್ಮಾ ಅವರ ವಿರುದ್ದವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು

ಈ ವೇಳೆ ಮಾತನಾಡಿದ ದಲಿತ ಮುಖಂಡರು ಮುಖ್ಯ ನ್ಯಾಯ ಮೂರ್ತಿ ಗವಾಯಿ ಅವರ ಮೇಲೆ ಶೂ ಎಸೆದಿದ್ದು ಇಡೀ ಭಾರತದ ನ್ಯಾಯಾಂಗ ವ್ಯವಸ್ಥೆಗೆ ಅವಮಾನಗೊಳಿಸಿದಂತಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ. ಈ ಘಟನೆಗೆ ಕಾರಣವಾದ ವ್ಯಕ್ತಿಯನ್ನು ಶಿಕ್ಷಿಸಿ ಗಡಿಪಾರು ಮಾಡಬೇಕು. ದೇಶಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷಗಳಾದರೂ ಶೋಷಿತರನ್ನು ಇಂದಿಗೂ ಜಾತಿ ಮನಸ್ಥಿತಿಯಲ್ಲೇ ನೋಡುತ್ತಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ರಾಜೇಂದ್ರ ಐಹೋಳೆ, ನ್ಯಾಯವಾದಿಗಳಾದ ಎ ಎ ಹುದ್ದಾರ, ದಯಾನಂದ ವಾಘಮೋರೆ, ಸುಕುಮಾರ ಕಾಂಬಳೆ, ಸುನೀಲ ವಾಘಮೋರೆ, ಸುನೀಲ ಸಂಕ, ಕಲ್ಲಪ್ಪ ವನಜೋಳ ಮಾತನಾಡಿದರುಈ ವೇಳೆ ಅಪ್ಪಾಸಾಬ ಘಟಕಾಂಬಳೆ, ನಿಶಾಂತ ಮಡ್ಡಿ, ವಿನಾಯಕ ಕಾಂಬಳೆ, ಮಂಜೂ ನೂಲಿ, ಸುಧಾಕರ ಬೆಳ್ಳಂಕಿ, ಅಣ್ಣಪ್ಪ ಭಜಂತ್ರ, ಶಬ್ಬೀರ ಸಾತಬಚ್ಚೆ, ಸುಂದರ ಸೌದಾಗರ, ಬಸು ಗಾಡಿವಡ್ಡರ, ಅಸಲಂ ನಾಲಬಂದ, ಸೈಯದ ಅಮೀನ ಗದ್ಯಾಳ, ರೂಪಾ ಕಾಂಬಳೆ, ಜಯಶ್ರೀ ಕಾಂಬಳೆ,  ಸಿದ್ದಲಿಂಗ ಮಡ್ಡಿ, ಪ್ರಕಾಶ ಪಟ್ಟಣ, ರಾಮ ಮರಳರ, ಶಶಿ ಬಾಡಗಿ, ಮಂಜೂ ಹೋಳಿಕಟ್ಟಿ,ಸದಾಶಿವ ಕಾಂಬಳೆ ನಾರಾಯನ ಹೊನಕಾಂಡೆ, ಮಿತೇಶ ಪಟ್ಟಣ, ಆದರ್ಶ ಗಸ್ತಿ, ಕೋಮಲ ಕಾಂಬಳೆ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯರ್ತರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ