Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಕಿಯ ಅಕ್ರಮ ದಂಧೆ ಮೇಲೆ ದಾಳಿ : 523 ಪಡಿತರ ಅಕ್ಕಿ ವಶ 





ಅಕ್ಕಿಯ ಅಕ್ರಮ ದಂಧೆ ಸಹಾಯಕ ಆಯುಕ್ತ  ರಾಜೇಶ್ ದಾಳಿ : 523 ಪಡಿತರ ಅಕ್ಕಿ ವಶ


ಬಳ್ಳಾರಿ, ಜ.24..: ಸಾರ್ವಜನಿಕರಿಗೆ ವಿತರಣೆಯಾಗಬೇಕಿದ್ದ 50 ಕಿಲೋ 523 ಚೀಲ ಪಡಿತರ ಅಕ್ಕಿಯನ್ನು ಗುಜರಾತ್ ಗೆ ಸಾಗಾಣೆ ಮಾಡಲು ಗುಜರಾತಿನ ಲಾರಿಗಳಲ್ಲಿ ಲೋಡ್ ಮಾಡುತ್ತಿದ್ದ ಅಕ್ಕಿ ಮತ್ತು ಎರಡು ಲಾರಿಗಳನ್ನು  ಬಳ್ಳಾರಿ ಉಪ ವಿಭಾಗಾಧಿಕಾರಿ ರಾಜೇಶ್ ಹೆಚ್.ಡಿ. ಅವರು ನಿನ್ನೆ ರಾತ್ರಿ ಮಿಂಚಿನ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ನಗರದ ಎಸ್.ಎಲ್.ಎನ್ ಮಾಲ್ ಬಳಿ ಇರುವ ದರೂರು ಪುಲ್ಲಯ್ಯ ಕಾಂಪೌಂಡ್ ಒಳ ಆವರಣದಲ್ಲಿ ಪಡಿತರ ಅಕ್ಕಿಯನ್ನು ಬಳ್ಳಾರಿಯ ಮಿನಿ ಸರಕು ಸಾಗಣೆ  ವಾಹನಗಳ ಮೂಲಕ ತಂದು ಗುಜರಾತ್ ಮೂಲದ ಲಾರಿಯಲ್ಲಿ ಲೋಡ್ ಮಾಡಲಾಗುತ್ತಿತ್ತು.

 ಈ ಸಂದರ್ಭದಲ್ಲಿ ದಾಳಿ ಮಾಡಿದ ರಾಜೇಶ್ ಅಕ್ಕಿಯನ್ನು ನೋಡು ಮಾಡಲು  ಹಗರಿಬೊಮ್ಮನಹಳ್ಳಿಯಿಂದ ಬಂದಿದ್ದ 10 ಜನ ಹಮಾಲಿಗಳು ಚಿಕ್ಕ ಲಾರಿಯಿಂದ ದೊಡ್ಡ ಲಾರಿಗೆ ಲೋಡ್ ಮಾಡುತ್ತಿದ್ದರು. ಇವರಿಗೆ ಶ್ರೀಧರ್ ಎಂಬಾತ 750 ಕೂಲಿ ನೀಡಿ ಕರೆಸಿದ್ದ ಎಂದು ತಿಳಿದು ಬಂದಿದೆ.

ಈ ಅಕ್ಕಿ ಅಕ್ರಮ ದಂಧೆಯ ಅತ್ಯಂತ ಖಚಿತವಾದ ಮಾಹಿತಿಯ ಮೇರೆಗೆ  ಸ್ವತಃ ರಾಜೇಶ್ ಅವರು ತಲೆಗೆ ಟವಲ್ ಕಟ್ಟಿಕೊಂಡು ಬುಲೆಟ್ ಗಾಡಿಯಲ್ಲಿ ಬಂದು ಆರು ಜನ ಹಮಾಲಿಗಳು ಎರಡು ಟಾಟಾ ಎಸಿ ವಾಹನಗಳು ಹಾಗೂ ಎರಡು ಗುಜರಾತ್ ಮೂಲದ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಇಬ್ಬರು ಗುಜರಾತ್ ಮೂಲದ ಚಾಲಕರು, ಬಳ್ಳಾರಿ ಮೂಲದ ಒಬ್ಬ ಚಾಲಕ, 5 ಹಮಾಲಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಒಬ್ಬ ಚಾಲಕ ಮತ್ತು 5 ಹಮಾಲಿಗಳು ಸ್ಥಳದಿಂದ ತಪ್ಪಿಸಿಕೊಂಡು  ಪರಾರಿಯಾಗಿದ್ದಾರೆ.

ವಿಚಾರಣೆ ವೇಳೆ ಸದರಿ ಅಕ್ಕಿ ಚೀಲಗಳನ್ನು ಅಕ್ರಮವಾಗಿ ಗುಜರಾತ್ ರಾಜ್ಯಕ್ಕೆ ತೆಗೆದುಕೊಂಡು ಹೋಗಲು ತಯಾರಿ ಮಾಡುತ್ತಿರುವುದಾಗಿ ಗುಜರಾತ್ ಮೂಲದ ಚಾಲಕ ಹೇಳಿದ್ದಾನೆ.

ಸ್ಥಳಕ್ಕೆ ಎಪಿಎಂಸಿ ಪೊಲೀಸ್ ಕರೆಸಿ ಪ್ರಕರಣ ದಾಖಲಿಸಲಾಗಿದೆ.

ಈ ಹಿಂದೆ ಸಹ ಬಳ್ಳಾರಿ ನಗರದ ಲಾಲಾ ಕಮಾನ್ ನಲ್ಲಿ ನಡೆಯುತ್ತಿದ್ದ ಅಕ್ರಮವಾಗಿ ಪಡಿತರ ಅಕ್ಕಿಯ ಸಾಗಾಣೆಯ ದಂಧೆ ಕೊರರಿಗೆ ಬಿಸಿ ಮುಟ್ಟಿಸಿದ್ದರು. ಅಲ್ಲದೆ ಹಗರಿ ನದಿಯಿಂದ ಅಕ್ರಮವಾಗಿ ಎತ್ತಿನ‌ಬಂಡಿಗಳಲ್ಲಿ ಮರಳು ಸಾಗಾಸುವ ದಂಧೆ  ಮೇಲೂ ರಾಜೇಶ್ ಅವರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು.

 ಮಧ್ಯರಾತ್ರಿಯ ಇವರ ಒಂಟಿ ಕಾರ್ಯಚರಣೆಯನ್ನು ನಗರದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ