Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದುಶ್ಚಟ ತ್ಯಜಿಸಿ ಶಿಸ್ತಿನ ಜೀವನಶೈಲಿ ಅಳವಡಿಸಿಕೊಳ್ಳಿ: ಶಾಂತಲಿಂಗ ಸ್ವಾಮೀಜಿ


ಹರಪನಹಳ್ಳಿ: ದುಶ್ಚಟಗಳಿಂದ ದೂರವಿದ್ದು, ಶಿಸ್ತಿನ ಜೀವನಶೈಲಿ ರೂಢಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಅರಸೀಕೆರೆ ಶ್ರೀ ಕೋಲಶಾಂತೇಶ್ವರ ವಿರಕ್ತಮಠದ ಶ್ರೀ ಶಾಂತಲಿಂಗ ದೇಶಿಕೇಂದ್ರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.


ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವು ಶ್ರೀಕೋಲಶಾಂತೇಶ್ವರ ಜನಕಲ್ಯಾಣ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಶ್ರೀಮಠದ ಆವರಣಲ್ಲಿ ಏರ್ಪಡಿಸಿದ್ದ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.


"ಯೋಗದಿಂದ ರೋಗ ದೂರವಾಗುತ್ತದೆ; ಅಂತೆಯೇ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ನಮಗೆ ನೀಡಿದ ಅನೇಕ ಅಂಶಗಳನ್ನು ನಾವಿಂದು ಮರೆತಿದ್ದೇವೆ. ಔಷಧ ರಹಿತವಾಗಿ ನಮ್ಮ ಜೀವನಶೈಲಿ ಮಾರ್ಪಡಿಸಿಕೊಳ್ಳುವ ಮೂಲಕ ಮರೆತ ಅಂಶಗಳನ್ನು ನಮಗೆ ಪ್ರಕೃತಿ ಚಿಕಿತ್ಸಾ ಪದ್ಧತಿ ನೆನಪಿಸುತ್ತಿದೆ. ಈ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ" ಎಂದು ಹೇಳಿದರು.


ಜನನಿ ಆಸ್ಪತ್ರೆ ಕಲ್ಯಾಣ ಕರ್ನಾಟಕಕ್ಕೆ ದೊಡ್ಡ ಕೊಡುಗೆಯಾಗಿದ್ದು, ಮನೆಬಾಗಿಲಲ್ಲೇ ಇಂಥ ಸೌಲಭ್ಯವನ್ನು ಅಭಿವೃದ್ಧಿಪಡಿಸುವುದು ಸಮಾಜಕ್ಕೆ ವರದಾನ. ಜನಸಾಮಾನ್ಯರು ಇದರ ಸೌಲಭ್ಯ ಪಡೆದು ಆರೋಗ್ಯವಂತ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು.


ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಮಾತನಾಡಿ ‘ಒಮ್ಮೆ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದು ಕಷ್ಟಸಾಧ್ಯ. ಆರೋಗ್ಯಸೇವೆ ದುಬಾರಿಯಾಗುತ್ತಿರುವ ಇಂದಿನ ದಿನಗಳಲ್ಲಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದೇ ಜಾಣತನ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಪ್ರಯೋಜನ ಪಡೆದುಕೊಳ್ಳುವ ಜತೆಗೆ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದರು.


ಪಾಶ್ಚಾತ್ಯರ ಅಂಧಾನುಕರಣೆ ತೊರೆದ ನಮ್ಮ ಆಹಾರಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗಗಳಿಂದ ದೂರ ಇರೋಣ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಪ್ರಶಾಂತ್ ಪಾಟೀಲ ಸಲಹೆ ಮಾಡಿದರು.


ತಾಲೂಕಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದರು.


ಈ ಸಂದರ್ಭದಲ್ಲಿ ಡಾ.ಸಹನಾ,ಡಾ.ಯಶಸ್ವಿನಿ,ಡಾ.ನಿಶ್ಚಿತ್,ಆಸ್ಪತ್ರೆಯ ಸಲಹೆಗಾರ ಉದಯ್ ಶಂಕರ್ ಭಟ್,ಪ್ರದೀಪ್,ಕಾಲೇಜು ಪ್ರಚಾರ್ಯ ಸುರೇಶ್,ಬಸವರಾಜ್,ಹಾದಿಮನಿ ರಮೇಶ್,ವಿರೇಶ್ ಇತರರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ