Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ವಿಧ್ಯಾರ್ಥಿನಿಯರಿಗೆ ಸನ್ಮಾನ

ಮುನವಳ್ಳಿ,ಏಪ್ರಿಲ್ 11: ಪಟ್ಟಣದ ಶ್ರೀ ಅನ್ನದಾನೇಶ್ವರ ಪ.ಪೂ ಕಾಲೇಜಿನ ವಿಧ್ಯಾರ್ಥಿನಿಯರು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ೫ನೇ ರ‍್ಯಾಂಕ್ ಹಾಗೂ ಬೆಳಗಾವಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಗಂಗವ್ವ ಸುಣದೊಳಿ (೫೮೯) ೯೯%, ಬೆಳಗಾವಿ ಜಿಲ್ಲೆಗೆ ಎರಡನೇ ಸ್ಥಾನ ಪಡೆದ ಫಕ್ಕೀರವ್ವ ಚುಂಚನೂರ (೫೮೯) ೯೮.೧೬, ಬೆಳಗಾವಿ ಜಿಲ್ಲೆಗೆ ೩ನೇ ಸ್ಥಾನ ಪಡೆದ ಅಶ್ವಿನಿ ಪೂಜೇರ (೫೮೨) ೯೭% ಅವರಿಗೆ ಮಠದ ಸಭಾ ಭವನದಲ್ಲಿ ಬುಧವಾರ ಗೌರವ ಸನ್ಮಾನ ಜರುಗಿತು.

ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀ ಮುರುಘೇಂದ್ರ ಶ್ರೀಗಳು ಸಾನಿದ್ಯ ವಹಿಸಿ ಮಾತನಾಡಿ ರಾಜ್ಯಕ್ಕೆ ೫ ನೇ ರ‍್ಯಾಂಕ್ ಪಡೆದಿರುವದು ಸಂತಸ ತಂದಿದೆ ನಮ್ಮ ಕಾಲೇಜಿಗೆ ರ‍್ಯಾಂಕ ಪಡೆಯುವ ಆಶೆ ಯಶಸ್ಸು ತಂದಿದೆ ಗಂಗವ್ವ ಸುಣದೊಳಿ ನಮ್ಮ ವಿದ್ಯಾಲಯದವರು ಎಂದು ಹೆಳಲು ಹೆಮ್ಮೆ ಎನಿಸುತ್ತದೆ ಎಂದರು.

ಪ್ರತಿ ವರ್ಷವು ನಮ್ಮ ಕಾಲೆಜಿನ ಪಲಿತಾಂಶ ಪ್ರತಿ ವರ್ಷವು ಹೆಚ್ಚಿನ ರೀತಿಯಲ್ಲಿ ವಿಧ್ಯಾರ್ಥಿಗಳು ಅಂಕಗಳನ್ನು ಪಡೆದು ನಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು. ಪಂಚನಗೌಡ ದ್ಯಾಮನಗೌಡರ ಮಾತನಾಡಿ ವಿಧ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಸಾಧನೆಗೆ ಶ್ರಮಿಸಬೇಕು ಹಾಗೂ ಉನ್ನತ ಹುದ್ದೇಗೆ ಶೆರುವ ಗುರಿ ಹೊಂದಿರಬೇಕೆಂದರು. ಸಂಸ್ಥೆಯ ಉಪಾಧ್ಯಕ್ಷ ಅರುನಗೌಡ ಪಾಟೀಲ ಮಾತನಾಡಿ ರಾಜ್ಯಕ್ಕೆ ೫ನೇ ರ‍್ಯಾಂಕ್ ಬಂದ ವಿದ್ಯಾರ್ಥಿನಿ ಮುಂದೆ ನಮ್ಮ ಸಂಸ್ಥೆಯಲ್ಲಿ ಓದಿದರೆ ಕಾಲೇಜು ಶುಲ್ಕ ಹಾಗೂ ಇನ್ನಿತರ ಅನುಕೂಲತೆ ನಾನು ಮಾಡಿಕೊಡುತ್ತೆನೆಂದರು.

ಮಲ್ಲಿಕಾರ್ಜುನ ಜಮಖಂಡಿ,ಶಂಕರ ಗಯ್ಯಾಳಿ, ಸಂಜು ಕಾಮಣ್ಣವರ, ಗಂಗಮ್ಮ ಸಂಕಣ್ಣವರ, ಪರಶುರಾಮ ಕದಂ, ಅಶೋಕ ಸಂಕಣ್ಣವರ, ವಿಠ್ಠಲ ನಲಗೆ, ಶಂಕರ ಜೋಗೋಜಿ, ನಾಗರಾಜ ಕಮ್ಮಾರ, ಇತರರು ಉಪಸ್ಥಿತರಿದ್ದರು. ಐ.ಕೆ.ಮಠಪತಿ ಸ್ವಾಗತಿಸಿ ಕಾರ್ಯಕ್ರಮ ನೀರೂಪಿಸಿದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ